<p><strong>ಮುಜಫರ್ನಗರ/ಮೀರತ್</strong>: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಶಿರಚ್ಛೇದ ಮಾಡಿದವರಿಗೆ ಬಹುಮಾನ ನೀಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಯನ್ನು ಅಮಿತ್ ಚೌಧರಿ ಎಂದು ಗುರುತಿಸಲಾಗಿದೆ.</p><p>‘ಟಿಕಾಯತ್ ಶಿರಚ್ಛೇದ ಮಾಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಆರೋಪಿ ಪೋಸ್ಟ್ ಮಾಡಿದ್ದ ವಿಡಿಯೊದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.</p>.US: ಜಗತ್ತು ಜನಸಂಖ್ಯೆಯಿಂದ ತುಂಬಿರಬಾರದು ಎಂದು ಹೆರಿಗೆ ಆಸ್ಪತ್ರೆಗೆ ಬಾಂಬ್ ಇಟ್ಟ!.ಬಲವಂತದ ಮತಾಂತರವನ್ನು ನಮ್ಮ ಸಂವಿಧಾನ ಒಪ್ಪುವುದಿಲ್ಲ: ಅಲಹಾಬಾದ್ ಹೈಕೋರ್ಟ್. <p>ಚೌಧರಿ ಮಾಡಿದ್ದ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಹರಿದಾಡಿತ್ತು. ಮುಜಫರ್ನಗರ ಮತ್ತು ಮೀರತ್ನಲ್ಲಿ ಟಿಕಾಯತ್ ಅಭಿಮಾನಿಗಳು ಜಮಾಯಿಸಿ, ಆರೋಪಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆಗಳು ನಡೆಸಿದ್ದರು. </p><p>ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.</p><p>ಎಫ್ಐಆರ್ಗೆ ಸಂಬಂಧಿಸಿದಂತೆ ಮುಜಫರ್ನಗರ ಮತ್ತು ಮೀರತ್ ಜಿಲ್ಲೆಗಳ ಪೊಲೀಸರು ಹೇಳಿಕೆ ನೀಡಿದ್ದು, ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಿಲ್ಲ. ಟಿಕಾಯತ್ ವಿರುದ್ಧ ಆರೋಪಿ ಅಂತಹ ಹೇಳಿಕೆಗಳನ್ನು ನೀಡಲು ಕಾರಣಗಳೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ.</p>.ಅಮೆರಿಕದ ಮಾಜಿ ಅಧ್ಯಕ್ಷ 82 ವರ್ಷದ ಜೋ ಬೈಡನ್ಗೆ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆ.ಪ್ರೊಫೆಸರ್ ಖಾನ್ ಬಂಧನ ಪ್ರಶ್ನಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ.ಕರ್ನೂಲ್ ಬಳಿ ಕಾರು ಅಪಘಾತ: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂವರು ಯುವಕರ ಸಾವು.ಪಾತ್ರದಲ್ಲಿ ಗಟ್ಟಿತನವಿರಬೇಕು.. ಪ್ರಜಾವಾಣಿಯೊಂದಿಗೆ ಮೇಘನಾ ಗಾಂವ್ಕರ್ ಮಾತುಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಫರ್ನಗರ/ಮೀರತ್</strong>: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಶಿರಚ್ಛೇದ ಮಾಡಿದವರಿಗೆ ಬಹುಮಾನ ನೀಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಯನ್ನು ಅಮಿತ್ ಚೌಧರಿ ಎಂದು ಗುರುತಿಸಲಾಗಿದೆ.</p><p>‘ಟಿಕಾಯತ್ ಶಿರಚ್ಛೇದ ಮಾಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಆರೋಪಿ ಪೋಸ್ಟ್ ಮಾಡಿದ್ದ ವಿಡಿಯೊದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.</p>.US: ಜಗತ್ತು ಜನಸಂಖ್ಯೆಯಿಂದ ತುಂಬಿರಬಾರದು ಎಂದು ಹೆರಿಗೆ ಆಸ್ಪತ್ರೆಗೆ ಬಾಂಬ್ ಇಟ್ಟ!.ಬಲವಂತದ ಮತಾಂತರವನ್ನು ನಮ್ಮ ಸಂವಿಧಾನ ಒಪ್ಪುವುದಿಲ್ಲ: ಅಲಹಾಬಾದ್ ಹೈಕೋರ್ಟ್. <p>ಚೌಧರಿ ಮಾಡಿದ್ದ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಹರಿದಾಡಿತ್ತು. ಮುಜಫರ್ನಗರ ಮತ್ತು ಮೀರತ್ನಲ್ಲಿ ಟಿಕಾಯತ್ ಅಭಿಮಾನಿಗಳು ಜಮಾಯಿಸಿ, ಆರೋಪಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆಗಳು ನಡೆಸಿದ್ದರು. </p><p>ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.</p><p>ಎಫ್ಐಆರ್ಗೆ ಸಂಬಂಧಿಸಿದಂತೆ ಮುಜಫರ್ನಗರ ಮತ್ತು ಮೀರತ್ ಜಿಲ್ಲೆಗಳ ಪೊಲೀಸರು ಹೇಳಿಕೆ ನೀಡಿದ್ದು, ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಿಲ್ಲ. ಟಿಕಾಯತ್ ವಿರುದ್ಧ ಆರೋಪಿ ಅಂತಹ ಹೇಳಿಕೆಗಳನ್ನು ನೀಡಲು ಕಾರಣಗಳೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ.</p>.ಅಮೆರಿಕದ ಮಾಜಿ ಅಧ್ಯಕ್ಷ 82 ವರ್ಷದ ಜೋ ಬೈಡನ್ಗೆ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆ.ಪ್ರೊಫೆಸರ್ ಖಾನ್ ಬಂಧನ ಪ್ರಶ್ನಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ.ಕರ್ನೂಲ್ ಬಳಿ ಕಾರು ಅಪಘಾತ: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂವರು ಯುವಕರ ಸಾವು.ಪಾತ್ರದಲ್ಲಿ ಗಟ್ಟಿತನವಿರಬೇಕು.. ಪ್ರಜಾವಾಣಿಯೊಂದಿಗೆ ಮೇಘನಾ ಗಾಂವ್ಕರ್ ಮಾತುಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>