<p><strong>ಲಖನೌ: </strong>ಉತ್ತರ ಪ್ರದೇಶ ಸರ್ಕಾರವು ಮದರಸಾಗಳಿಗೆ ಮಾನ್ಯತೆ ನೀಡಲು ಎರಡು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ.</p>.<p>ಮಾನ್ಯತೆ ಪಡೆಯದ ಮದರಸಾಗಳಲ್ಲಿನ (ಇಸ್ಲಾಮಿಕ್ ಶಾಲೆಗಳು) ವಿದ್ಯಾರ್ಥಿಗಳನ್ನು ರಾಜ್ಯ ಸರ್ಕಾರ ನಡೆಸುವ ಶಾಲೆಗಳಿಗೆ ಸ್ಥಳಾಂತರಿಸುವ ಕುರಿತ ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ವಿಚಾರ ನಡೆಸಿದೆ.</p>.<p>ಈ ಕುರಿತು ಮಾಹಿತಿ ನೀಡಿದ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಓಂ ಪ್ರಕಾಶ್ ರಾಜ್ಭರ್, ‘ಹೊಸದಾಗಿ ಸ್ಥಾಪಿಸುವ ಎರಡು ವಿಶ್ವವಿದ್ಯಾಲಯಗಳ ಜತೆಗೆ ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿಯನ್ನು ಜೋಡಿಸಲಾಗುವುದು. ಈ ವಿ.ವಿಗಳಿಂದ ಎಲ್ಲ ಮದರಸಾಗಳು ಮಾನ್ಯತೆ ಪಡೆಯಬೇಕು. ಹೀಗಾದರೆ ಭವಿಷ್ಯದಲ್ಲಿ ಯಾವುದೇ ವಿವಾದಗಳು ಉಂಟಾಗದು’ ಎಂದು ಅವರು ತಿಳಿಸಿದರು.</p>.<p>ಲಖನೌ ಮತ್ತು ಇತರ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಕಾಲೇಜುಗಳು ಹೇಗೆ ಮಾನ್ಯತೆ ಪಡೆಯುತ್ತವೆಯೋ ಅದೇ ರೀತಿಯ ವ್ಯವಸ್ಥೆಯನ್ನು ಮದರಸಾಗಳಿಗೂ ತರಲಾಗುವುದು ಎಂದು ಅವರು ವಿವರಿಸಿದರು. ಪ್ರಸ್ತುತ ಮದರಾಸಗಳಿಗೆ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಮಾನ್ಯತೆ ನೀಡುತ್ತಿದೆ. </p>.<p>ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಯಾವುದೇ ಗಡುವನ್ನು ನೀಡಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>‘ಈ ವಿವಾದವನ್ನು ಕೊನೆಗೊಳಿಸಲು ನಾವು ಬಯಸಿದ್ದೇವೆ. ಹಿಂದಿನ ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ಸರ್ಕಾರಗಳು ಈ ಬಗ್ಗೆ ಯೋಚಿಸಿಯೇ ಇರಲಿಲ್ಲ’ ಎಂದು ರಾಜ್ಭರ್ ಪ್ರತಿಕ್ರಿಯಿಸಿದ್ದಾರೆ. </p>.<p>‘ರಾಜ್ಯ ಸರ್ಕಾರವು ಈ ಸಂಬಂಧ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಸಂಬಂಧಿಸಿದ ಮಧ್ಯಸ್ಥಗಾರರ ಜತೆ ಮಾತುಕತೆ ನಡೆಸಬೇಕು. ಸರ್ಕಾರದ ನಿರ್ಧಾರದಿಂದ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು’ ಎಂದು ಇಸ್ಲಾಮಿಕ್ ವಿದ್ವಾಂಸರೊಬ್ಬರು ಹೇಳಿದ್ದಾರೆ. </p>.<h2>ಎನ್ಸಿಪಿಸಿಆರ್ ಪತ್ರ:</h2>.<p>ಮದರಸಾಗಳಲ್ಲಿ ಓದುತ್ತಿರುವ ಎಲ್ಲ ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಹಾಗೂ ಮಾನ್ಯತೆ ಇಲ್ಲದ ಮದರಸಾಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ರಾಜ್ಯಕ್ಕೆ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದೆ.</p>.<p>ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯವರು, ಎನ್ಸಿಪಿಸಿಆರ್ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ಸೂಚಿಸಿದ್ದಾರೆ. ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವಂತೆಯೂ ಪತ್ರದಲ್ಲಿ ಸೂಚಿಸಲಾಗಿದೆ.</p>.<p>ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಸುಮಾರು 25,000 ಮದರಸಾಗಳಿವೆ. ಇವುಗಳಲ್ಲಿ 560 ಸರ್ಕಾರಿ ಅನುದಾನಿತ ಮದರಸಾಗಳು ಸೇರಿದಂತೆ ಒಟ್ಟು 16,500 ಮದರಸಾಗಳು ಸರ್ಕಾರದಿಂದ ಮಾನ್ಯತೆ ಪಡೆದಿವೆ. ಸುಮಾರು 8,500 ಮದರಸಾಗಳು ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿಯ ಮಾನ್ಯತೆ ಪಡೆದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶ ಸರ್ಕಾರವು ಮದರಸಾಗಳಿಗೆ ಮಾನ್ಯತೆ ನೀಡಲು ಎರಡು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ.</p>.<p>ಮಾನ್ಯತೆ ಪಡೆಯದ ಮದರಸಾಗಳಲ್ಲಿನ (ಇಸ್ಲಾಮಿಕ್ ಶಾಲೆಗಳು) ವಿದ್ಯಾರ್ಥಿಗಳನ್ನು ರಾಜ್ಯ ಸರ್ಕಾರ ನಡೆಸುವ ಶಾಲೆಗಳಿಗೆ ಸ್ಥಳಾಂತರಿಸುವ ಕುರಿತ ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ವಿಚಾರ ನಡೆಸಿದೆ.</p>.<p>ಈ ಕುರಿತು ಮಾಹಿತಿ ನೀಡಿದ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಓಂ ಪ್ರಕಾಶ್ ರಾಜ್ಭರ್, ‘ಹೊಸದಾಗಿ ಸ್ಥಾಪಿಸುವ ಎರಡು ವಿಶ್ವವಿದ್ಯಾಲಯಗಳ ಜತೆಗೆ ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿಯನ್ನು ಜೋಡಿಸಲಾಗುವುದು. ಈ ವಿ.ವಿಗಳಿಂದ ಎಲ್ಲ ಮದರಸಾಗಳು ಮಾನ್ಯತೆ ಪಡೆಯಬೇಕು. ಹೀಗಾದರೆ ಭವಿಷ್ಯದಲ್ಲಿ ಯಾವುದೇ ವಿವಾದಗಳು ಉಂಟಾಗದು’ ಎಂದು ಅವರು ತಿಳಿಸಿದರು.</p>.<p>ಲಖನೌ ಮತ್ತು ಇತರ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಕಾಲೇಜುಗಳು ಹೇಗೆ ಮಾನ್ಯತೆ ಪಡೆಯುತ್ತವೆಯೋ ಅದೇ ರೀತಿಯ ವ್ಯವಸ್ಥೆಯನ್ನು ಮದರಸಾಗಳಿಗೂ ತರಲಾಗುವುದು ಎಂದು ಅವರು ವಿವರಿಸಿದರು. ಪ್ರಸ್ತುತ ಮದರಾಸಗಳಿಗೆ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಮಾನ್ಯತೆ ನೀಡುತ್ತಿದೆ. </p>.<p>ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಯಾವುದೇ ಗಡುವನ್ನು ನೀಡಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>‘ಈ ವಿವಾದವನ್ನು ಕೊನೆಗೊಳಿಸಲು ನಾವು ಬಯಸಿದ್ದೇವೆ. ಹಿಂದಿನ ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ಸರ್ಕಾರಗಳು ಈ ಬಗ್ಗೆ ಯೋಚಿಸಿಯೇ ಇರಲಿಲ್ಲ’ ಎಂದು ರಾಜ್ಭರ್ ಪ್ರತಿಕ್ರಿಯಿಸಿದ್ದಾರೆ. </p>.<p>‘ರಾಜ್ಯ ಸರ್ಕಾರವು ಈ ಸಂಬಂಧ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಸಂಬಂಧಿಸಿದ ಮಧ್ಯಸ್ಥಗಾರರ ಜತೆ ಮಾತುಕತೆ ನಡೆಸಬೇಕು. ಸರ್ಕಾರದ ನಿರ್ಧಾರದಿಂದ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು’ ಎಂದು ಇಸ್ಲಾಮಿಕ್ ವಿದ್ವಾಂಸರೊಬ್ಬರು ಹೇಳಿದ್ದಾರೆ. </p>.<h2>ಎನ್ಸಿಪಿಸಿಆರ್ ಪತ್ರ:</h2>.<p>ಮದರಸಾಗಳಲ್ಲಿ ಓದುತ್ತಿರುವ ಎಲ್ಲ ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಹಾಗೂ ಮಾನ್ಯತೆ ಇಲ್ಲದ ಮದರಸಾಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ರಾಜ್ಯಕ್ಕೆ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದೆ.</p>.<p>ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯವರು, ಎನ್ಸಿಪಿಸಿಆರ್ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ಸೂಚಿಸಿದ್ದಾರೆ. ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವಂತೆಯೂ ಪತ್ರದಲ್ಲಿ ಸೂಚಿಸಲಾಗಿದೆ.</p>.<p>ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಸುಮಾರು 25,000 ಮದರಸಾಗಳಿವೆ. ಇವುಗಳಲ್ಲಿ 560 ಸರ್ಕಾರಿ ಅನುದಾನಿತ ಮದರಸಾಗಳು ಸೇರಿದಂತೆ ಒಟ್ಟು 16,500 ಮದರಸಾಗಳು ಸರ್ಕಾರದಿಂದ ಮಾನ್ಯತೆ ಪಡೆದಿವೆ. ಸುಮಾರು 8,500 ಮದರಸಾಗಳು ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿಯ ಮಾನ್ಯತೆ ಪಡೆದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>