<p class="title">ಲಖನೌ: ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೊ’ ಯಾತ್ರೆಯ ಜೊತೆ ಕೈಜೋಡಿಸದಿರಲು ಸಮಾಜವಾದಿ ಪಕ್ಷ ಸೇರಿದಂತೆ ಉತ್ತರಪ್ರದೇಶದ ಪ್ರಮುಖ ವಿರೋಧ ಪಕ್ಷಗಳು ನಿರ್ಧರಿಸಿವೆ.</p>.<p class="title">ಬಿಎಸ್ಪಿ, ರಾಷ್ಟ್ರೀಯ ಲೋಕದಳ ಸೇರಿದಂತೆ ಕೆಲವು ಪಕ್ಷಗಳು ಈ ನಿರ್ಧಾರ ಪ್ರಕಟಿಸಿವೆ. ವಿರೋಧ ಪಕ್ಷಗಳಲ್ಲಿ ಒಗ್ಗಟ್ಟಿದೆ ಎಂದು ಯಾತ್ರೆಯ ಮೂಲಕ ಸಂದೇಶ ರವಾನಿಸುವ ಕಾಂಗ್ರೆಸ್ನ ಉದ್ದೇಶಕ್ಕೆ ಇದರಿಂದ ಹಿನ್ನಡೆಯಾಗಿದೆ.</p>.<p class="title">‘ಭಾರತ್ ಜೋಡೊ ಯಾತ್ರೆಗೆ ವಿರುದ್ಧವಾಗಿನಾವು ಇಲ್ಲ. ಆದರೆ, ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ನಾವು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ’ ಎಂದು ಸಮಾಜವಾದಿ ಪಕ್ಷ, ಬಿಎಸ್ಪಿ, ಇತರೆ ಕೆಲವು ಪಕ್ಷಗಳು ಕಾರಣವನ್ನು ನೀಡಿವೆ. ಯಾತ್ರೆಯು ಜ.3ರಂದು ಉತ್ತರಪ್ರದೇಶ ರಾಜ್ಯವನ್ನು ಪ್ರವೇಶಿಸಲಿದೆ.</p>.<p class="title">ಯಾತ್ರೆಯಲ್ಲಿ ಭಾಗವಹಿಸುವಂತೆ ಅಖಿಲೇಶ್ ಯಾದವ್ ಅವರಿಗೆ ಕಾಂಗ್ರೆಸ್ ಆಹ್ವಾನಿಸಿದೆ. ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಭಾಗವಹಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದರು.</p>.<p class="title">ಆರ್ಜೆಡಿ ಅಧ್ಯಕ್ಷ ಜಯಂತ್ ಚೌಧರಿ ಅವರು ಭಾಗವಹಿಸುತ್ತಿಲ್ಲ ಎಂದು ಆ ಪಕ್ಷದ ಮುಖಂಡರು ಸ್ಪಷ್ಟಪಡಿಸಿದರೆ, ಬಿಎಸ್ಪಿ ಭಾಗವಹಿಸುವುದಿಲ್ಲ ಎಂದು ಆ ಪಕ್ಷದ ಮೂಲಗಳು ದೃಢಪಡಿಸಿವೆ.</p>.<p class="title">ಎಸ್ಬಿಎಸ್ಬಿ ಭಾಗಿ: ರಾಜ್ಭರ್ ಸಮುದಾಯವನ್ನು ಪ್ರತಿನಿಧಿಸುವಸುಹೇಲ್ದೇವ್ ಭಾರತೀಯ ಸಮಾಜ್ ಪಾರ್ಟಿಯ ಅಧ್ಯಕ್ಷ ಓಂ ಪ್ರಕಾಶ್ ರಾಜ್ಭರ್ ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.</p>.<p class="title">ಕಾಂಗ್ರೆಸ್ ಪಕ್ಷ ಅಖಿಲೇಶ್ ಯಾದವ್, ಜಯಂತ್, ಬಿಎಸ್ಪಿಯ ಸತೀಶ್ ಚಂದ್ರ ಮಿಶ್ರಾ, ಸಿಪಿಐ ನಾಯಕ ಅತುಲ್ ಅಂಜನ್, ಮಾಜಿ ಸಚಿವ ಶಿವಪಾಲ್ ಸಿಂಗ್ ಯಾದವ್, ರಾಜಭರ್ ಅವರನ್ನು ಆಹ್ವಾನಿಸಿತ್ತು.</p>.<p class="title">ರಾಜ್ಯದಲ್ಲಿ ಕಾಂಗ್ರೆಸ್ ಅಷ್ಟೊಂದು ಪ್ರಭಾವಿಯಲ್ಲ ಎಂದು ಎಸ್ಪಿ., ಬಿಎಸ್ಪಿ, ಆರ್ಎಲ್ಡಿ ಭಾವಿಸಿವೆ. ಹೀಗಾಗಿ, ಆ ಪಕ್ಷದ ನೇತೃತ್ವದ ಜಾಥಾದಲ್ಲಿ ಪಾಲ್ಗೊಳ್ಳಲು ಬಯಸುತ್ತಿಲ್ಲ ಎಂದು ರಾಜಕೀಯ ವಿಶ್ಲೇಷಕರು ವ್ಯಾಖ್ಯಾನಿಸಿದ್ದಾರೆ.</p>.<p><span class="bold">‘ಕಾಶ್ಮೀರ: ಮೂವರು ಮಾಜಿ ಸಿ.ಎಂಗಳ ಬೆಂಬಲ’</span></p>.<p>ಪ್ರಜಾವಾಣಿ ವಾರ್ತೆ<br />ಶ್ರೀನಗರ: ‘ಭಾರತ್ ಜೋಡೊ’ ಯಾತ್ರೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮುಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ನಿರ್ಧರಿಸಿದ್ದಾರೆ.</p>.<p>‘ಯಾತ್ರೆ ಪರಿಣಾಮಕಾರಿಯಾಗಿ ಆಗುತ್ತಿದೆ. ಜಾತ್ಯತೀತ ಚಿಂತನೆಗೆ ಧಕ್ಕೆಆಗಬಾರದು ಎಂಬ ಚಿಂತನೆ ಬಲವಾಗುತ್ತಿದೆ ಎಂಬುದಕ್ಕೆ ಇದು ನಿದರ್ಶನ’ ಎಂದುಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಯಾತ್ರೆಯು ಕಾಶ್ಮೀರವನ್ನು ಜನವರಿ ಮೂರನೇ ವಾರದಲ್ಲಿ ಪ್ರವೇಶಿಸಲಿದೆ. ಯಾತ್ರೆ ಡಿ. 24ರಂದು ರಾಜಧಾನಿ ನವದೆಹಲಿ ಪ್ರವೇಶಿಸಿದೆ. ಒಂಭತ್ತು ದಿನಗಳ ವಿರಾಮದ ಬಳಿಕ ಜ.3ಕ್ಕೆ ಉತ್ತರ ಪ್ರವೇಶ ಪ್ರವೇಶಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಲಖನೌ: ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೊ’ ಯಾತ್ರೆಯ ಜೊತೆ ಕೈಜೋಡಿಸದಿರಲು ಸಮಾಜವಾದಿ ಪಕ್ಷ ಸೇರಿದಂತೆ ಉತ್ತರಪ್ರದೇಶದ ಪ್ರಮುಖ ವಿರೋಧ ಪಕ್ಷಗಳು ನಿರ್ಧರಿಸಿವೆ.</p>.<p class="title">ಬಿಎಸ್ಪಿ, ರಾಷ್ಟ್ರೀಯ ಲೋಕದಳ ಸೇರಿದಂತೆ ಕೆಲವು ಪಕ್ಷಗಳು ಈ ನಿರ್ಧಾರ ಪ್ರಕಟಿಸಿವೆ. ವಿರೋಧ ಪಕ್ಷಗಳಲ್ಲಿ ಒಗ್ಗಟ್ಟಿದೆ ಎಂದು ಯಾತ್ರೆಯ ಮೂಲಕ ಸಂದೇಶ ರವಾನಿಸುವ ಕಾಂಗ್ರೆಸ್ನ ಉದ್ದೇಶಕ್ಕೆ ಇದರಿಂದ ಹಿನ್ನಡೆಯಾಗಿದೆ.</p>.<p class="title">‘ಭಾರತ್ ಜೋಡೊ ಯಾತ್ರೆಗೆ ವಿರುದ್ಧವಾಗಿನಾವು ಇಲ್ಲ. ಆದರೆ, ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ನಾವು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ’ ಎಂದು ಸಮಾಜವಾದಿ ಪಕ್ಷ, ಬಿಎಸ್ಪಿ, ಇತರೆ ಕೆಲವು ಪಕ್ಷಗಳು ಕಾರಣವನ್ನು ನೀಡಿವೆ. ಯಾತ್ರೆಯು ಜ.3ರಂದು ಉತ್ತರಪ್ರದೇಶ ರಾಜ್ಯವನ್ನು ಪ್ರವೇಶಿಸಲಿದೆ.</p>.<p class="title">ಯಾತ್ರೆಯಲ್ಲಿ ಭಾಗವಹಿಸುವಂತೆ ಅಖಿಲೇಶ್ ಯಾದವ್ ಅವರಿಗೆ ಕಾಂಗ್ರೆಸ್ ಆಹ್ವಾನಿಸಿದೆ. ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಭಾಗವಹಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದರು.</p>.<p class="title">ಆರ್ಜೆಡಿ ಅಧ್ಯಕ್ಷ ಜಯಂತ್ ಚೌಧರಿ ಅವರು ಭಾಗವಹಿಸುತ್ತಿಲ್ಲ ಎಂದು ಆ ಪಕ್ಷದ ಮುಖಂಡರು ಸ್ಪಷ್ಟಪಡಿಸಿದರೆ, ಬಿಎಸ್ಪಿ ಭಾಗವಹಿಸುವುದಿಲ್ಲ ಎಂದು ಆ ಪಕ್ಷದ ಮೂಲಗಳು ದೃಢಪಡಿಸಿವೆ.</p>.<p class="title">ಎಸ್ಬಿಎಸ್ಬಿ ಭಾಗಿ: ರಾಜ್ಭರ್ ಸಮುದಾಯವನ್ನು ಪ್ರತಿನಿಧಿಸುವಸುಹೇಲ್ದೇವ್ ಭಾರತೀಯ ಸಮಾಜ್ ಪಾರ್ಟಿಯ ಅಧ್ಯಕ್ಷ ಓಂ ಪ್ರಕಾಶ್ ರಾಜ್ಭರ್ ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.</p>.<p class="title">ಕಾಂಗ್ರೆಸ್ ಪಕ್ಷ ಅಖಿಲೇಶ್ ಯಾದವ್, ಜಯಂತ್, ಬಿಎಸ್ಪಿಯ ಸತೀಶ್ ಚಂದ್ರ ಮಿಶ್ರಾ, ಸಿಪಿಐ ನಾಯಕ ಅತುಲ್ ಅಂಜನ್, ಮಾಜಿ ಸಚಿವ ಶಿವಪಾಲ್ ಸಿಂಗ್ ಯಾದವ್, ರಾಜಭರ್ ಅವರನ್ನು ಆಹ್ವಾನಿಸಿತ್ತು.</p>.<p class="title">ರಾಜ್ಯದಲ್ಲಿ ಕಾಂಗ್ರೆಸ್ ಅಷ್ಟೊಂದು ಪ್ರಭಾವಿಯಲ್ಲ ಎಂದು ಎಸ್ಪಿ., ಬಿಎಸ್ಪಿ, ಆರ್ಎಲ್ಡಿ ಭಾವಿಸಿವೆ. ಹೀಗಾಗಿ, ಆ ಪಕ್ಷದ ನೇತೃತ್ವದ ಜಾಥಾದಲ್ಲಿ ಪಾಲ್ಗೊಳ್ಳಲು ಬಯಸುತ್ತಿಲ್ಲ ಎಂದು ರಾಜಕೀಯ ವಿಶ್ಲೇಷಕರು ವ್ಯಾಖ್ಯಾನಿಸಿದ್ದಾರೆ.</p>.<p><span class="bold">‘ಕಾಶ್ಮೀರ: ಮೂವರು ಮಾಜಿ ಸಿ.ಎಂಗಳ ಬೆಂಬಲ’</span></p>.<p>ಪ್ರಜಾವಾಣಿ ವಾರ್ತೆ<br />ಶ್ರೀನಗರ: ‘ಭಾರತ್ ಜೋಡೊ’ ಯಾತ್ರೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮುಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ನಿರ್ಧರಿಸಿದ್ದಾರೆ.</p>.<p>‘ಯಾತ್ರೆ ಪರಿಣಾಮಕಾರಿಯಾಗಿ ಆಗುತ್ತಿದೆ. ಜಾತ್ಯತೀತ ಚಿಂತನೆಗೆ ಧಕ್ಕೆಆಗಬಾರದು ಎಂಬ ಚಿಂತನೆ ಬಲವಾಗುತ್ತಿದೆ ಎಂಬುದಕ್ಕೆ ಇದು ನಿದರ್ಶನ’ ಎಂದುಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಯಾತ್ರೆಯು ಕಾಶ್ಮೀರವನ್ನು ಜನವರಿ ಮೂರನೇ ವಾರದಲ್ಲಿ ಪ್ರವೇಶಿಸಲಿದೆ. ಯಾತ್ರೆ ಡಿ. 24ರಂದು ರಾಜಧಾನಿ ನವದೆಹಲಿ ಪ್ರವೇಶಿಸಿದೆ. ಒಂಭತ್ತು ದಿನಗಳ ವಿರಾಮದ ಬಳಿಕ ಜ.3ಕ್ಕೆ ಉತ್ತರ ಪ್ರವೇಶ ಪ್ರವೇಶಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>