<p><strong>ಲಖನೌ</strong>: ಬೌದ್ಧ ಮತ್ತು ಸಿಖ್ ಧರ್ಮೀಯರ ಆಧ್ಯಾತ್ಮಿಕ ಯಾತ್ರೆಗೆ ಅನುಕೂಲ ಕಲ್ಪಿಸುವ ‘ಭೌದ್ಧರ ತೀರ್ಥ ದರ್ಶನ ಯೋಜನೆ’ ಮತ್ತು ‘ಪಂಚ್ ತಖ್ತ್ ಯಾತ್ರೆ ಯೋಜನೆ’ ಜಾರಿ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಶನಿವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ತೀರ್ಥಯಾತ್ರೆ ಎಂದರೆ ಆಧ್ಯಾತ್ಮಿಕ ಉನ್ನತಿ ಮತ್ತು ಸಾಮಾಜಿಕ ಸಾಮರಸ್ಯದ ಹಾದಿ. ತೀರ್ಥಕ್ಷೇತ್ರಗಳಿಗೆ ತೆರಳುವ ಭಕ್ತರಿಗೆ ನೆರವು ನೀಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ’ ಎಂದರು.</p>.<p>ಬೌದ್ಧರ ತೀರ್ಥ ದರ್ಶನ ಯೋಜನೆಯಡಿಯಲ್ಲಿ ಭಾರತದಾದ್ಯಂತ ಇರುವ ಪ್ರಮುಖ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭೌದ್ಧ ಅನುಯಾಯಿಗಳಿಗೆ ಅದರಲ್ಲೂ ಭಿಕ್ಕುಗಳಿಗೆ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.</p>.<p>ಪಂಚ್ ತಖ್ತ್ ಯಾತ್ರೆ ಯೋಜನೆ ಅಡಿಯಲ್ಲಿ ಸಿಖ್ ಧರ್ಮದ ಐದು ಪವಿತ್ರ ಪ್ರಾರ್ಥನಾ ಸ್ಥಳಗಳಿಗೆ ತೆರಳುವ ಉತ್ತರ ಪ್ರದೇಶದ ಸಿಖ್ ಭಕ್ತರಿಗೆ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.</p>.<p> ಈ ಯೋಜನೆಗಳಡಿ ತೀರ್ಥಯಾತ್ರೆಗೆ ತೆರಳುವ ಭಕ್ತರಿಗೆ ತಲಾ ಕನಿಷ್ಠ ₹10,000 ನೀಡಲಾಗುತ್ತದೆ ಎಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬೌದ್ಧ ಮತ್ತು ಸಿಖ್ ಧರ್ಮೀಯರ ಆಧ್ಯಾತ್ಮಿಕ ಯಾತ್ರೆಗೆ ಅನುಕೂಲ ಕಲ್ಪಿಸುವ ‘ಭೌದ್ಧರ ತೀರ್ಥ ದರ್ಶನ ಯೋಜನೆ’ ಮತ್ತು ‘ಪಂಚ್ ತಖ್ತ್ ಯಾತ್ರೆ ಯೋಜನೆ’ ಜಾರಿ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಶನಿವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ತೀರ್ಥಯಾತ್ರೆ ಎಂದರೆ ಆಧ್ಯಾತ್ಮಿಕ ಉನ್ನತಿ ಮತ್ತು ಸಾಮಾಜಿಕ ಸಾಮರಸ್ಯದ ಹಾದಿ. ತೀರ್ಥಕ್ಷೇತ್ರಗಳಿಗೆ ತೆರಳುವ ಭಕ್ತರಿಗೆ ನೆರವು ನೀಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ’ ಎಂದರು.</p>.<p>ಬೌದ್ಧರ ತೀರ್ಥ ದರ್ಶನ ಯೋಜನೆಯಡಿಯಲ್ಲಿ ಭಾರತದಾದ್ಯಂತ ಇರುವ ಪ್ರಮುಖ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭೌದ್ಧ ಅನುಯಾಯಿಗಳಿಗೆ ಅದರಲ್ಲೂ ಭಿಕ್ಕುಗಳಿಗೆ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.</p>.<p>ಪಂಚ್ ತಖ್ತ್ ಯಾತ್ರೆ ಯೋಜನೆ ಅಡಿಯಲ್ಲಿ ಸಿಖ್ ಧರ್ಮದ ಐದು ಪವಿತ್ರ ಪ್ರಾರ್ಥನಾ ಸ್ಥಳಗಳಿಗೆ ತೆರಳುವ ಉತ್ತರ ಪ್ರದೇಶದ ಸಿಖ್ ಭಕ್ತರಿಗೆ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.</p>.<p> ಈ ಯೋಜನೆಗಳಡಿ ತೀರ್ಥಯಾತ್ರೆಗೆ ತೆರಳುವ ಭಕ್ತರಿಗೆ ತಲಾ ಕನಿಷ್ಠ ₹10,000 ನೀಡಲಾಗುತ್ತದೆ ಎಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>