<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವಂತೆಯೇ ಯುವ ಜನಾಂಗವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಪಕ್ಷವು 'ಭರ್ತಿ ವಿಧಾನ್' (ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯುವ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಕಾಂಗ್ರೆಸ್ನಿಂದ ಮಾತ್ರ ರಾಜ್ಯದಲ್ಲಿರುವ ಯುವ ಜನಾಂಗಕ್ಕೆ ಹೊಸ ದೃಷ್ಟಿಕೋನ ನೀಡಲು ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/congress-leader-rahul-gandhi-opposed-to-amar-jawan-jyoti-to-be-doused-to-be-merged-with-war-memorial-903804.html" itemprop="url">ಅಮರ್ ಜವಾನ್ ಜ್ಯೋತಿ ಆರುತ್ತಿರುವುದು ದುಃಖದ ಸಂಗತಿ: ರಾಹುಲ್ ಗಾಂಧಿ </a></p>.<p>ಈ ಕುರಿತು ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, 'ಇದು ಪೊಳ್ಳು ಭರವಸೆಗಳಲ್ಲ, ಬದಲಾಗಿ ಯುವಕರನ್ನು ಸಂಪರ್ಕಿಸಿ ರಚಿಸಲಾಗಿದೆ' ಎಂದು ಹೇಳಿದ್ದಾರೆ.</p>.<p>'ಉತ್ತರ ಪ್ರದೇಶದ ಯುವ ಜನಾಂಗಕ್ಕೆ ದೂರದೃಷ್ಟಿ ಬೇಕಾಗಿದೆ. ಕಾಂಗ್ರೆಸ್ಗೆ ಮಾತ್ರ ಅದನ್ನು ನೀಡಲು ಸಾಧ್ಯ. ನಾವು ದ್ವೇಷವನ್ನು ಹರಡುವುದಿಲ್ಲ, ಜನರನ್ನು ಒಗ್ಗೂಡಿಸುತ್ತೇವೆ. ಯುವ ಶಕ್ತಿಯೊಂದಿಗೆ ಹೊಸ ಉತ್ತರ ಪ್ರದೇಶವನ್ನು ರಚಿಸಲು ಬಯಸುತ್ತೇವೆ' ಎಂದು ಹೇಳಿದರು.</p>.<p>'ನೇಮಕಾತಿಯು ರಾಜ್ಯದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಯುವ ಜನಾಂಗವು ನಿರಾಶೆಗೂಂಡಿದ್ದಾರೆ' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.</p>.<p>'ಉತ್ತರ ಪ್ರದೇಶದಲ್ಲಿ ಜಾತಿ ರಾಜಕಾರಣ ಅಥವಾ ಕೋಮುವಾದದ ನಕಾರಾತ್ಮಕ ಪ್ರಚಾರವಲ್ಲ. ತಮ್ಮ ಪಕ್ಷವು ಅಭಿವೃದ್ಧಿಯತ್ತ ಗಮನ ಹರಿಸಲು ಬಯಸುತ್ತದೆ' ಎಂದು ಹೇಳಿದರು.</p>.<p>ಯುವ ಜನಾಂಗ ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ ಶೇ 40ರಷ್ಟು ಸೀಟುಗಳನ್ನು ಮಹಿಳೆಯರಿಗೆ ನೀಡಲು ನಿರ್ಧರಿಸಿದೆ.</p>.<p>403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವಂತೆಯೇ ಯುವ ಜನಾಂಗವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಪಕ್ಷವು 'ಭರ್ತಿ ವಿಧಾನ್' (ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯುವ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಕಾಂಗ್ರೆಸ್ನಿಂದ ಮಾತ್ರ ರಾಜ್ಯದಲ್ಲಿರುವ ಯುವ ಜನಾಂಗಕ್ಕೆ ಹೊಸ ದೃಷ್ಟಿಕೋನ ನೀಡಲು ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/congress-leader-rahul-gandhi-opposed-to-amar-jawan-jyoti-to-be-doused-to-be-merged-with-war-memorial-903804.html" itemprop="url">ಅಮರ್ ಜವಾನ್ ಜ್ಯೋತಿ ಆರುತ್ತಿರುವುದು ದುಃಖದ ಸಂಗತಿ: ರಾಹುಲ್ ಗಾಂಧಿ </a></p>.<p>ಈ ಕುರಿತು ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, 'ಇದು ಪೊಳ್ಳು ಭರವಸೆಗಳಲ್ಲ, ಬದಲಾಗಿ ಯುವಕರನ್ನು ಸಂಪರ್ಕಿಸಿ ರಚಿಸಲಾಗಿದೆ' ಎಂದು ಹೇಳಿದ್ದಾರೆ.</p>.<p>'ಉತ್ತರ ಪ್ರದೇಶದ ಯುವ ಜನಾಂಗಕ್ಕೆ ದೂರದೃಷ್ಟಿ ಬೇಕಾಗಿದೆ. ಕಾಂಗ್ರೆಸ್ಗೆ ಮಾತ್ರ ಅದನ್ನು ನೀಡಲು ಸಾಧ್ಯ. ನಾವು ದ್ವೇಷವನ್ನು ಹರಡುವುದಿಲ್ಲ, ಜನರನ್ನು ಒಗ್ಗೂಡಿಸುತ್ತೇವೆ. ಯುವ ಶಕ್ತಿಯೊಂದಿಗೆ ಹೊಸ ಉತ್ತರ ಪ್ರದೇಶವನ್ನು ರಚಿಸಲು ಬಯಸುತ್ತೇವೆ' ಎಂದು ಹೇಳಿದರು.</p>.<p>'ನೇಮಕಾತಿಯು ರಾಜ್ಯದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಯುವ ಜನಾಂಗವು ನಿರಾಶೆಗೂಂಡಿದ್ದಾರೆ' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.</p>.<p>'ಉತ್ತರ ಪ್ರದೇಶದಲ್ಲಿ ಜಾತಿ ರಾಜಕಾರಣ ಅಥವಾ ಕೋಮುವಾದದ ನಕಾರಾತ್ಮಕ ಪ್ರಚಾರವಲ್ಲ. ತಮ್ಮ ಪಕ್ಷವು ಅಭಿವೃದ್ಧಿಯತ್ತ ಗಮನ ಹರಿಸಲು ಬಯಸುತ್ತದೆ' ಎಂದು ಹೇಳಿದರು.</p>.<p>ಯುವ ಜನಾಂಗ ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ ಶೇ 40ರಷ್ಟು ಸೀಟುಗಳನ್ನು ಮಹಿಳೆಯರಿಗೆ ನೀಡಲು ನಿರ್ಧರಿಸಿದೆ.</p>.<p>403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>