<p><strong>ಫತೇಪುರ(ಉತ್ತರ ಪ್ರದೇಶ):</strong> ಅಕ್ರಮ ನಿರ್ಮಾಣ ಮತ್ತು ಹೆದ್ದಾರಿ ವಿಸ್ತರಣೆಗೆ ತಡೆಯಾಗಿದೆ ಎಂಬ ಕಾರಣ ನೀಡಿ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ 185 ವರ್ಷ ಹಳೆಯದಾದ ನೂರಿ ಮಸೀದಿಯ ಒಂದು ಭಾಗವನ್ನು ಕೆಡವಲಾಗಿದೆ.</p><p>ಭಾರಿ ಭದ್ರತೆಯಲ್ಲಿ ಸ್ಥಳೀಯ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.</p><p>1839ರಲ್ಲಿ ಲಲೌಲಿ ಪಟ್ಟಣದಲ್ಲಿ ನೂರಿ ಮಸೀದಿ ನಿರ್ಮಾಣ ಆಗಿದೆ. ಅದರ ಸುತ್ತ 1956ರಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದು, ಡಿಸೆಂಬರ್ 12ರಂದು ವಿಚಾರಣೆ ನಿಗದಿಪಡಿಸಲಾಗಿದೆ ಎಂದು ಮಸೀದಿ ನಿರ್ವಹಣಾ ಸಮಿತಿಯ ಮುಖ್ಯಸ್ಥರು ಹೇಳಿದ್ದಾರೆ.</p><p>ಬಂಡ–ಬರ್ಹೈಚ್ ಹೆದ್ದಾರಿ ವಿಸ್ತರಣೆಯ ಭಾಗವಾಗಿ ಅಕ್ರಮವಾಗಿ ನಿರ್ಮಿಸಲಾಗಿರುವ ಮಸೀದಿಯ ಒಂದು ಭಾಗ ಕೆಡವಬೇಕೆಂದು ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಮಸೀದಿ ನಿರ್ವಹಣಾ ಸಮಿತಿಯು ಇದನ್ನು ಪಾಲಿಸಿರಲಿಲ್ಲ ಎಂದು ವರದಿ ತಿಳಿಸಿದೆ.</p><p>‘ಹೆದ್ದಾರಿ ವಿಸ್ತರಣೆಗೆ ತೊಡಕಾಗಿದ್ದ ಮಸೀದಿಯ ಸುಮಾರು 20 ಮೀಟರ್ ಕಟ್ಟಡವನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ. ಸ್ಥಳೀಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅವಶೇಷದ ತೆರವು ಕಾರ್ಯ ನಡೆಯುತ್ತಿದೆ’ಎಂದು ಲಲೌಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ವೃಂದಾವನ ರಾಯ್ ಹೇಳಿದ್ದಾರೆ.</p><p>ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಾಚರಣೆ ವೇಳೆ ಲಲೌಲಿ ಪಟ್ಟಣದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು</p><p>ಸಂಭಲ್ ಘಟನೆಯ ಹಿನ್ನೆಲೆಯಲ್ಲಿ ಮತ್ತೊಂದು ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫತೇಪುರ(ಉತ್ತರ ಪ್ರದೇಶ):</strong> ಅಕ್ರಮ ನಿರ್ಮಾಣ ಮತ್ತು ಹೆದ್ದಾರಿ ವಿಸ್ತರಣೆಗೆ ತಡೆಯಾಗಿದೆ ಎಂಬ ಕಾರಣ ನೀಡಿ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ 185 ವರ್ಷ ಹಳೆಯದಾದ ನೂರಿ ಮಸೀದಿಯ ಒಂದು ಭಾಗವನ್ನು ಕೆಡವಲಾಗಿದೆ.</p><p>ಭಾರಿ ಭದ್ರತೆಯಲ್ಲಿ ಸ್ಥಳೀಯ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.</p><p>1839ರಲ್ಲಿ ಲಲೌಲಿ ಪಟ್ಟಣದಲ್ಲಿ ನೂರಿ ಮಸೀದಿ ನಿರ್ಮಾಣ ಆಗಿದೆ. ಅದರ ಸುತ್ತ 1956ರಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದು, ಡಿಸೆಂಬರ್ 12ರಂದು ವಿಚಾರಣೆ ನಿಗದಿಪಡಿಸಲಾಗಿದೆ ಎಂದು ಮಸೀದಿ ನಿರ್ವಹಣಾ ಸಮಿತಿಯ ಮುಖ್ಯಸ್ಥರು ಹೇಳಿದ್ದಾರೆ.</p><p>ಬಂಡ–ಬರ್ಹೈಚ್ ಹೆದ್ದಾರಿ ವಿಸ್ತರಣೆಯ ಭಾಗವಾಗಿ ಅಕ್ರಮವಾಗಿ ನಿರ್ಮಿಸಲಾಗಿರುವ ಮಸೀದಿಯ ಒಂದು ಭಾಗ ಕೆಡವಬೇಕೆಂದು ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಮಸೀದಿ ನಿರ್ವಹಣಾ ಸಮಿತಿಯು ಇದನ್ನು ಪಾಲಿಸಿರಲಿಲ್ಲ ಎಂದು ವರದಿ ತಿಳಿಸಿದೆ.</p><p>‘ಹೆದ್ದಾರಿ ವಿಸ್ತರಣೆಗೆ ತೊಡಕಾಗಿದ್ದ ಮಸೀದಿಯ ಸುಮಾರು 20 ಮೀಟರ್ ಕಟ್ಟಡವನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ. ಸ್ಥಳೀಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅವಶೇಷದ ತೆರವು ಕಾರ್ಯ ನಡೆಯುತ್ತಿದೆ’ಎಂದು ಲಲೌಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ವೃಂದಾವನ ರಾಯ್ ಹೇಳಿದ್ದಾರೆ.</p><p>ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಾಚರಣೆ ವೇಳೆ ಲಲೌಲಿ ಪಟ್ಟಣದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು</p><p>ಸಂಭಲ್ ಘಟನೆಯ ಹಿನ್ನೆಲೆಯಲ್ಲಿ ಮತ್ತೊಂದು ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>