<p><strong>ಬಾಗ್ಪತ್ (ಉತ್ತರ ಪ್ರದೇಶ):</strong> ಮದುವೆಗೂ ಮುನ್ನ ಶಾಸ್ತ್ರವನ್ನು ಮಾಡಲು ತೆರಳುವಾಗ ವೇಗವಾಗಿ ಬಂದ ಟ್ರಕ್ ಗುದ್ದಿದ ಪರಿಣಾಮ ವರ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. </p><p>ಫಿಸಿಯೋಥೆರೆಪಿಸ್ಟ್ ಆಗಿದ್ದ 25 ವರ್ಷದ ಸುಬೋದ್ ಅವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. </p><p>ಭಾನುವಾರ ರಾತ್ರಿ ವೇಳೆ ಅವರ ಮದುವೆ ಶಾಸ್ತ್ರದಲ್ಲಿ ತೊಡಗಿಕೊಂಡಿದ್ದಾಗಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. </p><p>ದೆಹಲಿ – ಸಹರನ್ಪುರ ರಾಷ್ಟ್ರೀಯ ಹೆದ್ದಾರಿ ಬಳಿ ಚಾದತ್ ಶಾಸ್ತ್ರ ನಡೆಯುತ್ತಿದ್ದ ವೇಳೆ ಸುಬೋದ್ ಅವರು ರಸ್ತೆ ಬದಿಯಲ್ಲೇ ವಾಂತಿ ಮಾಡಲಾರಂಭಿಸಿದ್ದಾರೆ. ಆ ವೇಳೆ ದೆಹಲಿ ಕಡೆಯಿಂದ ಬಂದ ಟ್ರಕ್ ಅವರಿಗೆ ಗುದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸುಬೋದ್ರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ದಾರಿ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ. </p><p>ಘಟನೆಯ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದು, ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಯನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗ್ಪತ್ (ಉತ್ತರ ಪ್ರದೇಶ):</strong> ಮದುವೆಗೂ ಮುನ್ನ ಶಾಸ್ತ್ರವನ್ನು ಮಾಡಲು ತೆರಳುವಾಗ ವೇಗವಾಗಿ ಬಂದ ಟ್ರಕ್ ಗುದ್ದಿದ ಪರಿಣಾಮ ವರ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. </p><p>ಫಿಸಿಯೋಥೆರೆಪಿಸ್ಟ್ ಆಗಿದ್ದ 25 ವರ್ಷದ ಸುಬೋದ್ ಅವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. </p><p>ಭಾನುವಾರ ರಾತ್ರಿ ವೇಳೆ ಅವರ ಮದುವೆ ಶಾಸ್ತ್ರದಲ್ಲಿ ತೊಡಗಿಕೊಂಡಿದ್ದಾಗಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. </p><p>ದೆಹಲಿ – ಸಹರನ್ಪುರ ರಾಷ್ಟ್ರೀಯ ಹೆದ್ದಾರಿ ಬಳಿ ಚಾದತ್ ಶಾಸ್ತ್ರ ನಡೆಯುತ್ತಿದ್ದ ವೇಳೆ ಸುಬೋದ್ ಅವರು ರಸ್ತೆ ಬದಿಯಲ್ಲೇ ವಾಂತಿ ಮಾಡಲಾರಂಭಿಸಿದ್ದಾರೆ. ಆ ವೇಳೆ ದೆಹಲಿ ಕಡೆಯಿಂದ ಬಂದ ಟ್ರಕ್ ಅವರಿಗೆ ಗುದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸುಬೋದ್ರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ದಾರಿ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ. </p><p>ಘಟನೆಯ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದು, ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಯನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>