<p><strong>ಲಖನೌ</strong>: ಲಡ್ಡುಗಳನ್ನು ಕಳವು ಮಾಡಿದ ಆರೋಪದಡಿ ಸಹರಾನ್ಪುರ ಜಿಲ್ಲೆಯ ಸಲ್ಹಾಪುರ ಗ್ರಾಮದಲ್ಲಿ ಇಬ್ಬರು ಬಾಲಕಿಯರನ್ನು ಶಾಲೆಯಿಂದ ಹೊರಹಾಕಲಾಗಿದೆ.</p>.<p>ಅಕ್ಕ–ತಂಗಿಯರೂ ಆಗಿರುವ ಈ ಬಾಲಕಿಯರು ಕ್ರಮವಾಗಿ 8 ಮತ್ತು 7ನೇ ತರಗತಿಯಲ್ಲಿ ಓದುತ್ತಿದ್ದರು. ಶಾಲೆಯ ಪ್ರಾಂಶುಪಾಲರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಬಾಲಕಿಯರ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಕಳೆದ ತಿಂಗಳು, ಸ್ವಾತಂತ್ರ್ಯ ದಿನಾಚರಣೆಯಂದು ಈ ಘಟನೆ ನಡೆದಿದೆ. ಬಾಲಕಿಯರ ಪಾಲಕರು ಈ ಕುರಿತು ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಿಂದ ಗುರುವಾರ ಗೊತ್ತಾಗಿದೆ.</p>.<p>ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲ ಮಕ್ಕಳಿಗೆ ಹಂಚಿದ ನಂತರವೂ ಉಳಿದಿದ್ದ ಲಡ್ಡುಗಳನ್ನು ಪ್ರಾಂಶುಪಾಲರ ಕಚೇರಿಯಲ್ಲಿ ಇಡಲಾಗಿತ್ತು. ಈ ಇಬ್ಬರು ಬಾಲಕಿಯರು ಕಚೇರಿ ಪ್ರವೇಶಿಸಿ, ಲಡ್ಡುಗಳನ್ನು ಕಳವು ಮಾಡಿದ್ದರು ಎಂದು ಆರೋಪಿಸಲಾಗಿದೆ.</p>.<p>‘ಬಾಲಕಿಯರ ವರ್ಗಾವಣೆ ಪ್ರಮಾಣಪತ್ರದಲ್ಲಿ ‘ಉತ್ತಮ ನಡತೆ ಹೊಂದಿಲ್ಲ’ ಎಂಬುದಾಗಿ ನಮೂದಿಸುವೆ. ಇದರಿಂದ ಅವರಿಗೆ ಬೇರೆ ಯಾವುದೇ ಶಾಲೆಯಲ್ಲಿ ಪ್ರವೇಶ ಸಿಗುವುದಿಲ್ಲ ಎಂಬುದಾಗಿ ಪ್ರಾಂಶುಪಾಲ, ಪಾಲಕರಿಗೆ ಬೆದರಿಕೆ ಹಾಕಿದ್ದರು’ ಎಂದೂ ಆರೋಪಿಸಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ‘ಘಟನೆ ಸಂಬಂಧ ತನಿಖೆ ನಡೆಯುತ್ತಿದೆ. ಅನಾರೋಗ್ಯ ಕಾರಣದಿಂದ ಪ್ರಾಂಶುಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಗೆ ಮರಳಿದ ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಶುಕ್ರವಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಲಡ್ಡುಗಳನ್ನು ಕಳವು ಮಾಡಿದ ಆರೋಪದಡಿ ಸಹರಾನ್ಪುರ ಜಿಲ್ಲೆಯ ಸಲ್ಹಾಪುರ ಗ್ರಾಮದಲ್ಲಿ ಇಬ್ಬರು ಬಾಲಕಿಯರನ್ನು ಶಾಲೆಯಿಂದ ಹೊರಹಾಕಲಾಗಿದೆ.</p>.<p>ಅಕ್ಕ–ತಂಗಿಯರೂ ಆಗಿರುವ ಈ ಬಾಲಕಿಯರು ಕ್ರಮವಾಗಿ 8 ಮತ್ತು 7ನೇ ತರಗತಿಯಲ್ಲಿ ಓದುತ್ತಿದ್ದರು. ಶಾಲೆಯ ಪ್ರಾಂಶುಪಾಲರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಬಾಲಕಿಯರ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಕಳೆದ ತಿಂಗಳು, ಸ್ವಾತಂತ್ರ್ಯ ದಿನಾಚರಣೆಯಂದು ಈ ಘಟನೆ ನಡೆದಿದೆ. ಬಾಲಕಿಯರ ಪಾಲಕರು ಈ ಕುರಿತು ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಿಂದ ಗುರುವಾರ ಗೊತ್ತಾಗಿದೆ.</p>.<p>ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲ ಮಕ್ಕಳಿಗೆ ಹಂಚಿದ ನಂತರವೂ ಉಳಿದಿದ್ದ ಲಡ್ಡುಗಳನ್ನು ಪ್ರಾಂಶುಪಾಲರ ಕಚೇರಿಯಲ್ಲಿ ಇಡಲಾಗಿತ್ತು. ಈ ಇಬ್ಬರು ಬಾಲಕಿಯರು ಕಚೇರಿ ಪ್ರವೇಶಿಸಿ, ಲಡ್ಡುಗಳನ್ನು ಕಳವು ಮಾಡಿದ್ದರು ಎಂದು ಆರೋಪಿಸಲಾಗಿದೆ.</p>.<p>‘ಬಾಲಕಿಯರ ವರ್ಗಾವಣೆ ಪ್ರಮಾಣಪತ್ರದಲ್ಲಿ ‘ಉತ್ತಮ ನಡತೆ ಹೊಂದಿಲ್ಲ’ ಎಂಬುದಾಗಿ ನಮೂದಿಸುವೆ. ಇದರಿಂದ ಅವರಿಗೆ ಬೇರೆ ಯಾವುದೇ ಶಾಲೆಯಲ್ಲಿ ಪ್ರವೇಶ ಸಿಗುವುದಿಲ್ಲ ಎಂಬುದಾಗಿ ಪ್ರಾಂಶುಪಾಲ, ಪಾಲಕರಿಗೆ ಬೆದರಿಕೆ ಹಾಕಿದ್ದರು’ ಎಂದೂ ಆರೋಪಿಸಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ‘ಘಟನೆ ಸಂಬಂಧ ತನಿಖೆ ನಡೆಯುತ್ತಿದೆ. ಅನಾರೋಗ್ಯ ಕಾರಣದಿಂದ ಪ್ರಾಂಶುಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಗೆ ಮರಳಿದ ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಶುಕ್ರವಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>