<p><strong>ಸೋನಭದ್ರ(ಉತ್ತರ ಪ್ರದೇಶ):</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ತಿರುಚಿದ ಮತ್ತು ಆಕ್ಷೇಪಾರ್ಹ ಕಂಟೆಂಟ್ ಪೋಸ್ಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸೋನಭದ್ರದಲ್ಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p><p>ಶಬ್ಬೀರ್ ಅನ್ಸಾರಿ, ಜುಬೈರ್ ಅನ್ಸಾರಿ ಮತ್ತು ಇಝಾರ್ ತಮ್ಮ ಫೇಸ್ಬುಕ್ ಖಾತೆಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಶನಿವಾರ, ಅನ್ಪರಾ ಬಜಾರ್ ನಿವಾಸಿ ಬಾಲಗೋಪಾಲ್ ಚೌರಾಸಿಯಾ ಅವರು ದೂರು ದಾಖಲಿಸಿದ್ದರು ಎಂದು ಎಎಸ್ಪಿ ಕಾಲು ಸಿಂಗ್ ಹೇಳಿದ್ದಾರೆ.</p><p>ದೂರುದಾರರ ಪ್ರಕಾರ, ಆರೋಪಿಗಳು ಪಾಕಿಸ್ತಾನಿ ಯೂಟ್ಯೂಬರ್ ಒಬ್ಬರ ಫೇಸ್ಬುಕ್ ಕಂಟೆಂಟ್ ಅನ್ನು ಬಳಸಿಕೊಂಡು ಪ್ರಧಾನಿ ಮೋದಿಯವರನ್ನು ತಪ್ಪಾಗಿ ಚಿತ್ರಿಸುವ ತಿರುಚಿದ ಪೋಸ್ಟ್ಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಪೋಸ್ಟ್ಗಳು ಭಾರತ ವಿರೋಧಿ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಗಳು ಶತ್ರು ರಾಷ್ಟ್ರಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವ ಸಾಧ್ಯತೆ ಇದೆ ಎಂದು ಎಎಸ್ಪಿ ಹೇಳಿದ್ದಾರೆ.</p><p>ದೂರು ಮತ್ತು ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಬಿಎನ್ಎಸ್ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.</p> .‘ಆಪರೇಷನ್ ಸಿಂಧೂರ’:ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಪೂರ್ಣಗೊಳಿಸಿದ್ದೇವೆ: IAF.ಪಾಕಿಸ್ತಾನಿ ಅಧಿಕಾರಿ ಪರವಾಗಿ ಬೇಹುಗಾರಿಕೆ: ಪಂಜಾಬ್ನಲ್ಲಿ ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋನಭದ್ರ(ಉತ್ತರ ಪ್ರದೇಶ):</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ತಿರುಚಿದ ಮತ್ತು ಆಕ್ಷೇಪಾರ್ಹ ಕಂಟೆಂಟ್ ಪೋಸ್ಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸೋನಭದ್ರದಲ್ಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p><p>ಶಬ್ಬೀರ್ ಅನ್ಸಾರಿ, ಜುಬೈರ್ ಅನ್ಸಾರಿ ಮತ್ತು ಇಝಾರ್ ತಮ್ಮ ಫೇಸ್ಬುಕ್ ಖಾತೆಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಶನಿವಾರ, ಅನ್ಪರಾ ಬಜಾರ್ ನಿವಾಸಿ ಬಾಲಗೋಪಾಲ್ ಚೌರಾಸಿಯಾ ಅವರು ದೂರು ದಾಖಲಿಸಿದ್ದರು ಎಂದು ಎಎಸ್ಪಿ ಕಾಲು ಸಿಂಗ್ ಹೇಳಿದ್ದಾರೆ.</p><p>ದೂರುದಾರರ ಪ್ರಕಾರ, ಆರೋಪಿಗಳು ಪಾಕಿಸ್ತಾನಿ ಯೂಟ್ಯೂಬರ್ ಒಬ್ಬರ ಫೇಸ್ಬುಕ್ ಕಂಟೆಂಟ್ ಅನ್ನು ಬಳಸಿಕೊಂಡು ಪ್ರಧಾನಿ ಮೋದಿಯವರನ್ನು ತಪ್ಪಾಗಿ ಚಿತ್ರಿಸುವ ತಿರುಚಿದ ಪೋಸ್ಟ್ಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಪೋಸ್ಟ್ಗಳು ಭಾರತ ವಿರೋಧಿ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಗಳು ಶತ್ರು ರಾಷ್ಟ್ರಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವ ಸಾಧ್ಯತೆ ಇದೆ ಎಂದು ಎಎಸ್ಪಿ ಹೇಳಿದ್ದಾರೆ.</p><p>ದೂರು ಮತ್ತು ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಬಿಎನ್ಎಸ್ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.</p> .‘ಆಪರೇಷನ್ ಸಿಂಧೂರ’:ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಪೂರ್ಣಗೊಳಿಸಿದ್ದೇವೆ: IAF.ಪಾಕಿಸ್ತಾನಿ ಅಧಿಕಾರಿ ಪರವಾಗಿ ಬೇಹುಗಾರಿಕೆ: ಪಂಜಾಬ್ನಲ್ಲಿ ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>