<p><strong>ಮಹಾರಾಜಗಂಜ್ (ಉತ್ತರ ಪ್ರದೇಶ)</strong>: ಮುಂದಿನ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡುವ ಮೂಲಕ ಉತ್ತರ ಪ್ರದೇಶವು ಸಮೃದ್ಧ ರಾಜ್ಯವಾಗಿ ಹೊರಹೊಮ್ಮಲಿದೆ. ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ದೇಶದಲ್ಲಿ ಪ್ರಥಮ ಸ್ಥಾನದಲ್ಲಿರಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p><p>ಮಹಾರಾಜಗಂಜ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಿಂದಿನ ಸರ್ಕಾರಗಳು ‘ಒಂದು ಜಿಲ್ಲೆ, ಒಂದು ಮಾಫಿಯಾ’ವನ್ನು ಪ್ರೋತ್ಸಾಹಿಸುತ್ತಿದ್ದವು. ಆದರೆ, ಬಿಜೆಪಿ ಸರ್ಕಾರ ಈಗ ಅದನ್ನು ‘ಒಂದು ಜಿಲ್ಲೆ, ಒಂದು ವೈದ್ಯಕೀಯ ಕಾಲೇಜು’ ಎಂದು ಬದಲಾಯಿಸಿದೆ’ ಎಂದು ತಿಳಿಸಿದ್ದಾರೆ.</p><p>‘ಮುಂದಿನ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡುವ ಮೂಲಕ ಉತ್ತರ ಪ್ರದೇಶವನ್ನು ಸಮೃದ್ಧ ರಾಜ್ಯವಾಗಿ ಸ್ಥಾಪಿಸಲಾಗುವುದು. ಶೂನ್ಯ ಬಡತನದ ಗುರಿಯನ್ನು ಸಾಧಿಸುವ ಮೂಲಕ ಉತ್ತರ ಪ್ರದೇಶವನ್ನು ದೇಶದಲ್ಲಿ ನಂಬರ್ ಒನ್ ಆರ್ಥಿಕತೆಯನ್ನಾಗಿ ಮಾಡುತ್ತೇವೆ’ ಎಂದು ಆದಿತ್ಯನಾಥ ಹೇಳಿದ್ದಾರೆ.</p><p>ಸಂಸತ್ತಿನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆದಿತ್ಯನಾಥ್ ಧನ್ಯವಾದ ತಿಳಿಸಿದರು. ವಕ್ಫ್ ಮಂಡಳಿಯ ಹೆಸರಿನಲ್ಲಿ ನಡೆಯುತ್ತಿರುವ ಲೂಟಿಗೆ ಇದು ಕಡಿವಾಣ ಹಾಕುತ್ತದೆ ಎಂದು ಅವರು ತಿಳಿಸಿದ್ದಾರೆ.</p>.ಒಡಕು ಮೂಡಿಸುವ BJPಯ ತಂತ್ರ ಅರಿಯಿರಿ: ಮುನಂಬಮ್ ಗ್ರಾಮಸ್ಥರಿಗೆ ಕೇರಳ ಸಚಿವರ ಮನವಿ.ವಕ್ಫ್ ವಸೂದೆ: ಭವಿಷ್ಯದಲ್ಲಿ ಇತರೆ ಸಮುದಾಯಗಳ ಮೇಲಿನ ದಾಳಿಗೆ ಮುನ್ಸೂಚನೆ; ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾರಾಜಗಂಜ್ (ಉತ್ತರ ಪ್ರದೇಶ)</strong>: ಮುಂದಿನ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡುವ ಮೂಲಕ ಉತ್ತರ ಪ್ರದೇಶವು ಸಮೃದ್ಧ ರಾಜ್ಯವಾಗಿ ಹೊರಹೊಮ್ಮಲಿದೆ. ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ದೇಶದಲ್ಲಿ ಪ್ರಥಮ ಸ್ಥಾನದಲ್ಲಿರಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p><p>ಮಹಾರಾಜಗಂಜ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಿಂದಿನ ಸರ್ಕಾರಗಳು ‘ಒಂದು ಜಿಲ್ಲೆ, ಒಂದು ಮಾಫಿಯಾ’ವನ್ನು ಪ್ರೋತ್ಸಾಹಿಸುತ್ತಿದ್ದವು. ಆದರೆ, ಬಿಜೆಪಿ ಸರ್ಕಾರ ಈಗ ಅದನ್ನು ‘ಒಂದು ಜಿಲ್ಲೆ, ಒಂದು ವೈದ್ಯಕೀಯ ಕಾಲೇಜು’ ಎಂದು ಬದಲಾಯಿಸಿದೆ’ ಎಂದು ತಿಳಿಸಿದ್ದಾರೆ.</p><p>‘ಮುಂದಿನ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡುವ ಮೂಲಕ ಉತ್ತರ ಪ್ರದೇಶವನ್ನು ಸಮೃದ್ಧ ರಾಜ್ಯವಾಗಿ ಸ್ಥಾಪಿಸಲಾಗುವುದು. ಶೂನ್ಯ ಬಡತನದ ಗುರಿಯನ್ನು ಸಾಧಿಸುವ ಮೂಲಕ ಉತ್ತರ ಪ್ರದೇಶವನ್ನು ದೇಶದಲ್ಲಿ ನಂಬರ್ ಒನ್ ಆರ್ಥಿಕತೆಯನ್ನಾಗಿ ಮಾಡುತ್ತೇವೆ’ ಎಂದು ಆದಿತ್ಯನಾಥ ಹೇಳಿದ್ದಾರೆ.</p><p>ಸಂಸತ್ತಿನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆದಿತ್ಯನಾಥ್ ಧನ್ಯವಾದ ತಿಳಿಸಿದರು. ವಕ್ಫ್ ಮಂಡಳಿಯ ಹೆಸರಿನಲ್ಲಿ ನಡೆಯುತ್ತಿರುವ ಲೂಟಿಗೆ ಇದು ಕಡಿವಾಣ ಹಾಕುತ್ತದೆ ಎಂದು ಅವರು ತಿಳಿಸಿದ್ದಾರೆ.</p>.ಒಡಕು ಮೂಡಿಸುವ BJPಯ ತಂತ್ರ ಅರಿಯಿರಿ: ಮುನಂಬಮ್ ಗ್ರಾಮಸ್ಥರಿಗೆ ಕೇರಳ ಸಚಿವರ ಮನವಿ.ವಕ್ಫ್ ವಸೂದೆ: ಭವಿಷ್ಯದಲ್ಲಿ ಇತರೆ ಸಮುದಾಯಗಳ ಮೇಲಿನ ದಾಳಿಗೆ ಮುನ್ಸೂಚನೆ; ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>