<p><strong>ಲಖನೌ</strong>: ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ನೇರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇಕಡ 20ರಷ್ಟು ಮೀಸಲಾತಿ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ. </p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. </p>.<p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ, ಸರ್ಕಾರದ ಈ ನಿರ್ಧಾರವು ’ಅಗ್ನಿಪಥ್’ ಯೋಜನೆಯಡಿ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿರುವ ಅಗ್ನಿವೀರರಿಗೆ, ಅರ್ಥಪೂರ್ಣ ಸೇವಾ ಅವಕಾಶಗಳನ್ನು ಕಲ್ಪಿಸಲಿದೆ’ ಎಂದರು. </p>.<p>‘ಇದೊಂದು ಮಹತ್ವದ ನಿರ್ಧಾರ. ಸಾಮಾನ್ಯ, ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ಎಲ್ಲ ಪ್ರವರ್ಗಗಳಿಗೂ ಈ ಮೀಸಲಾತಿ ಅನ್ವಯಿಸಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಗ್ನಿವೀರರಿಗೆ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯೂ ಇದೆ’ ಎಂದು ಅವರು ಹೇಳಿದರು. </p>.<p>2026ನೇ ಸಾಲಿನಿಂದ ಜಾರಿಗೆ ಬರುವಂತೆ ಪೊಲೀಸ್ ಕಾನ್ಸ್ಟೆಬಲ್, ಕಾನ್ಸ್ಟೆಬಲ್ ಪಿಎಸಿ, ಅಶ್ವಾರೋಹಿ ಪೊಲೀಸ್, ಅಗ್ನಿಶಾಮಕ ಸೇರಿ ನಾಲ್ಕು ವಿಭಾಗಗಳಲ್ಲಿ ನಡೆಯುವ ನೇಮಕಾತಿಗಳಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ನೇರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇಕಡ 20ರಷ್ಟು ಮೀಸಲಾತಿ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ. </p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. </p>.<p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ, ಸರ್ಕಾರದ ಈ ನಿರ್ಧಾರವು ’ಅಗ್ನಿಪಥ್’ ಯೋಜನೆಯಡಿ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿರುವ ಅಗ್ನಿವೀರರಿಗೆ, ಅರ್ಥಪೂರ್ಣ ಸೇವಾ ಅವಕಾಶಗಳನ್ನು ಕಲ್ಪಿಸಲಿದೆ’ ಎಂದರು. </p>.<p>‘ಇದೊಂದು ಮಹತ್ವದ ನಿರ್ಧಾರ. ಸಾಮಾನ್ಯ, ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ಎಲ್ಲ ಪ್ರವರ್ಗಗಳಿಗೂ ಈ ಮೀಸಲಾತಿ ಅನ್ವಯಿಸಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಗ್ನಿವೀರರಿಗೆ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯೂ ಇದೆ’ ಎಂದು ಅವರು ಹೇಳಿದರು. </p>.<p>2026ನೇ ಸಾಲಿನಿಂದ ಜಾರಿಗೆ ಬರುವಂತೆ ಪೊಲೀಸ್ ಕಾನ್ಸ್ಟೆಬಲ್, ಕಾನ್ಸ್ಟೆಬಲ್ ಪಿಎಸಿ, ಅಶ್ವಾರೋಹಿ ಪೊಲೀಸ್, ಅಗ್ನಿಶಾಮಕ ಸೇರಿ ನಾಲ್ಕು ವಿಭಾಗಗಳಲ್ಲಿ ನಡೆಯುವ ನೇಮಕಾತಿಗಳಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>