ಟ್ರಿಪಲ್ ಇಂಜಿನ್ ಸರ್ಕಾರ (ಕೇಂದ್ರ, ರಾಜ್ಯ, ಸ್ಥಳೀಯ ಸಂಸ್ಥೆಗಳು) ಎಂಬ ಘೋಷಣೆಯೊಂದಿಗೆ ಬಿಜೆಪಿಯು ಚುನಾವಣಾ ಪ್ರಚಾರಕ್ಕೆ ಇಳಿದಿದೆ. ‘ಹಿಂದುತ್ವ’ ಕಾರ್ಯಸೂಚಿ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನೂ ಬಿಜೆಪಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ರೈತರ ಎದುರಿಸುತ್ತಿರುವ ಸಂಕಷ್ಟಗಳು, ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯಂಥ ವಿಷಯಗಳನ್ನು ಇರಿಸಿಕೊಂಡು ಚುನಾವಣೆ ಎದುರಿಸಲು ಎಸ್ಪಿ ಮುಂದಾಗಿದೆ.