<p><strong>ಲಖಿಂಪುರ ಖೇರಿ</strong>: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮುಸ್ತಫಾಬಾದ್ ಗ್ರಾಮದ ಹೆಸರನ್ನು ‘ಕಬೀರ್ಧಾಮ್’ ಎಂದು ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.</p><p>ಸಂತ ಕಬೀರ್ ಅವರೊಂದಿಗೆ ನಂಟು ಹೊಂದಿರುವ ಪ್ರದೇಶದ ಇತಿಹಾಸ ಮತ್ತು ಸಾಂಸ್ಕೃತಿಕ ಗುರುತನ್ನು ಉಳಿಸಲು ಗ್ರಾಮದ ಹೆಸರನ್ನು ಮರುನಾಮಕರಣ ಮಾಡಿರುವುದಾಗಿ ಸರ್ಕಾರ ಹೇಳಿದೆ.</p><p>ಸ್ಮೃತಿ ಮಹೋತ್ಸವ ಮೇಳ 2025 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿರುವ ಸಿಎಂ ಯೋಗಿ ಆದಿತ್ಯನಾಥ್, ‘ಈ ಹಿಂದೆ ಕಬ್ರಿಸ್ತಾನದ ಗಡಿ ಗೋಡೆಗಳನ್ನು ನಿರ್ಮಿಸುವುದಕ್ಕೆ ವ್ಯಯವಾಗುತ್ತಿದ್ದ ಹಣವನ್ನು ನಮ್ಮ ಸರ್ಕಾರ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ತಾಣಗಳನ್ನು ಪುನರುಜ್ಜೀವನಗೊಳಿಸಲು ಬಳಸುತ್ತಿದೆ’ ಎಂದರು. </p><p>ಗ್ರಾಮವೊಂದಕ್ಕೆ ಮುಸ್ತಫಾಬಾದ್ ಎಂಬ ಹೆಸರಿರುವುದು ಅಚ್ಚರಿ ಮೂಡಿಸಿತ್ತು. ಈ ಗ್ರಾಮದಲ್ಲಿ ಎಷ್ಟು ಜನ ಮುಸ್ಲಿಂ ಸಮುದಾಯದವರು ಇರುತ್ತಾರೆ ಎಂದು ಕೇಳಿದಾಗ ಯಾವೊಬ್ಬ ಮುಸ್ಲಿಂ ಧರ್ಮದ ವ್ಯಕ್ತಿಯೂ ಇಲ್ಲ ಎನ್ನುವ ಮಾಹಿತಿ ಸಿಕ್ಕಿತ್ತು. ಆ ಬಳಿಕ ಗ್ರಾಮದ ಹೆಸರನ್ನು ಬದಲಿಸಲು ಸೂಚಿಸಿದ್ದೆ. ಗ್ರಾಮದ ಹೆಸರು ಬದಲಿಸಲು ಇರುವ ಎಲ್ಲಾ ಪ್ರಕ್ರಿಯೆಯನ್ನು ಪೂರೈಸಿದ ಬಳಿಕ ಕಬೀರ್ಧಾಮ್ ಎಂದು ಹೆಸರಿಡಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖಿಂಪುರ ಖೇರಿ</strong>: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮುಸ್ತಫಾಬಾದ್ ಗ್ರಾಮದ ಹೆಸರನ್ನು ‘ಕಬೀರ್ಧಾಮ್’ ಎಂದು ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.</p><p>ಸಂತ ಕಬೀರ್ ಅವರೊಂದಿಗೆ ನಂಟು ಹೊಂದಿರುವ ಪ್ರದೇಶದ ಇತಿಹಾಸ ಮತ್ತು ಸಾಂಸ್ಕೃತಿಕ ಗುರುತನ್ನು ಉಳಿಸಲು ಗ್ರಾಮದ ಹೆಸರನ್ನು ಮರುನಾಮಕರಣ ಮಾಡಿರುವುದಾಗಿ ಸರ್ಕಾರ ಹೇಳಿದೆ.</p><p>ಸ್ಮೃತಿ ಮಹೋತ್ಸವ ಮೇಳ 2025 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿರುವ ಸಿಎಂ ಯೋಗಿ ಆದಿತ್ಯನಾಥ್, ‘ಈ ಹಿಂದೆ ಕಬ್ರಿಸ್ತಾನದ ಗಡಿ ಗೋಡೆಗಳನ್ನು ನಿರ್ಮಿಸುವುದಕ್ಕೆ ವ್ಯಯವಾಗುತ್ತಿದ್ದ ಹಣವನ್ನು ನಮ್ಮ ಸರ್ಕಾರ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ತಾಣಗಳನ್ನು ಪುನರುಜ್ಜೀವನಗೊಳಿಸಲು ಬಳಸುತ್ತಿದೆ’ ಎಂದರು. </p><p>ಗ್ರಾಮವೊಂದಕ್ಕೆ ಮುಸ್ತಫಾಬಾದ್ ಎಂಬ ಹೆಸರಿರುವುದು ಅಚ್ಚರಿ ಮೂಡಿಸಿತ್ತು. ಈ ಗ್ರಾಮದಲ್ಲಿ ಎಷ್ಟು ಜನ ಮುಸ್ಲಿಂ ಸಮುದಾಯದವರು ಇರುತ್ತಾರೆ ಎಂದು ಕೇಳಿದಾಗ ಯಾವೊಬ್ಬ ಮುಸ್ಲಿಂ ಧರ್ಮದ ವ್ಯಕ್ತಿಯೂ ಇಲ್ಲ ಎನ್ನುವ ಮಾಹಿತಿ ಸಿಕ್ಕಿತ್ತು. ಆ ಬಳಿಕ ಗ್ರಾಮದ ಹೆಸರನ್ನು ಬದಲಿಸಲು ಸೂಚಿಸಿದ್ದೆ. ಗ್ರಾಮದ ಹೆಸರು ಬದಲಿಸಲು ಇರುವ ಎಲ್ಲಾ ಪ್ರಕ್ರಿಯೆಯನ್ನು ಪೂರೈಸಿದ ಬಳಿಕ ಕಬೀರ್ಧಾಮ್ ಎಂದು ಹೆಸರಿಡಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>