<p><strong>ಲಖನೌ:</strong> ಆರು ಮಕ್ಕಳ ತಾಯಿಯೊಬ್ಬರು ಭಿಕ್ಷುಕನೊಂದಿಗೆ ಓಡಿಹೋಗಿರುವ ಘಟನೆ ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ. </p><p>‘ನನ್ನ ಪತ್ನಿ ಎರಡು ದಿನಗಳ ಹಿಂದೆ ಆಹಾರ ಪದಾರ್ಥಗಳು ಸೇರಿದಂತೆ ಇತರ ವಸ್ತುಗಳನ್ನು ತರುವುದಾಗಿ ಹೇಳಿ ಮಾರುಕಟ್ಟೆಗೆ ತೆರಳಿದ್ದರು. ಆದರೆ, ಆಕೆ ಮನೆಗೆ ಹಿಂತಿರುಗದೆ ಭಿಕ್ಷುಕನೊಂದಿಗೆ (ನನ್ಹೇ ಪಂಡಿತ್) ಓಡಿಹೋಗಿದ್ದಾರೆ’ ಎಂದು ಆರೋಪಿಸಿ ಲಂಕಾನ್ ಗ್ರಾಮದ ನಿವಾಸಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.</p><p>‘ಈಚೆಗೆ ಮನೆಯಲ್ಲಿದ್ದ ಹಸುವೊಂದನ್ನು ಮಾರಾಟ ಮಾಡಿ ಬಂದಿದ್ದ ಹಣವನ್ನು ಜಮೀನು ಖರೀದಿಸಲೆಂದು ಕೂಡಿಟ್ಟಿದ್ದೆ. ಆದರೆ ನನ್ನ ಪತ್ನಿ, ಆ ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಓಡಿಹೋಗಿದ್ದಾಳೆ’ ಎಂದು ಆತ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>ಹರ್ದೋಯ್ ಜಿಲ್ಲೆಯ ಸಂಡಿ ಪ್ರದೇಶದ ನಿವಾಸಿಯಾಗಿರುವ ನನ್ಹೇ ಪಂಡಿತ್, ಮನೆ ಮನೆ ತಿರುಗಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ಇತ್ತೀಚೆಗಷ್ಟೇ ಭಿಕ್ಷೆ ಕೋರಿ ಮಹಿಳೆಯ ಮನೆಗೂ ಹೋಗಿದ್ದರು. ಮಹಿಳೆ ಆಗಾಗ್ಗೆ ಆತನಿಗೆ ತಿನ್ನಲು ಆಹಾರ ಅಥವಾ ಧಾನ್ಯಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. </p><p>ಹೀಗೆ ಪದೇ ಪದೇ ಭಿಕ್ಷೆ ಕೋರಿ ಮನೆ ಬಳಿ ಬರುತ್ತಿದ್ದ ಪಂಡಿತ್, ಮಹಿಳೆಯೊಂದಿಗೆ ಸಲುಗೆಯಿಂದ ಹಲವು ಗಂಟೆಗಳ ಕಾಲ ಮಾತನಾಡುತ್ತಿದ್ದರು. ಕ್ರಮೇಣ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಆರು ಮಕ್ಕಳ ತಾಯಿಯೊಬ್ಬರು ಭಿಕ್ಷುಕನೊಂದಿಗೆ ಓಡಿಹೋಗಿರುವ ಘಟನೆ ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ. </p><p>‘ನನ್ನ ಪತ್ನಿ ಎರಡು ದಿನಗಳ ಹಿಂದೆ ಆಹಾರ ಪದಾರ್ಥಗಳು ಸೇರಿದಂತೆ ಇತರ ವಸ್ತುಗಳನ್ನು ತರುವುದಾಗಿ ಹೇಳಿ ಮಾರುಕಟ್ಟೆಗೆ ತೆರಳಿದ್ದರು. ಆದರೆ, ಆಕೆ ಮನೆಗೆ ಹಿಂತಿರುಗದೆ ಭಿಕ್ಷುಕನೊಂದಿಗೆ (ನನ್ಹೇ ಪಂಡಿತ್) ಓಡಿಹೋಗಿದ್ದಾರೆ’ ಎಂದು ಆರೋಪಿಸಿ ಲಂಕಾನ್ ಗ್ರಾಮದ ನಿವಾಸಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.</p><p>‘ಈಚೆಗೆ ಮನೆಯಲ್ಲಿದ್ದ ಹಸುವೊಂದನ್ನು ಮಾರಾಟ ಮಾಡಿ ಬಂದಿದ್ದ ಹಣವನ್ನು ಜಮೀನು ಖರೀದಿಸಲೆಂದು ಕೂಡಿಟ್ಟಿದ್ದೆ. ಆದರೆ ನನ್ನ ಪತ್ನಿ, ಆ ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಓಡಿಹೋಗಿದ್ದಾಳೆ’ ಎಂದು ಆತ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>ಹರ್ದೋಯ್ ಜಿಲ್ಲೆಯ ಸಂಡಿ ಪ್ರದೇಶದ ನಿವಾಸಿಯಾಗಿರುವ ನನ್ಹೇ ಪಂಡಿತ್, ಮನೆ ಮನೆ ತಿರುಗಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ಇತ್ತೀಚೆಗಷ್ಟೇ ಭಿಕ್ಷೆ ಕೋರಿ ಮಹಿಳೆಯ ಮನೆಗೂ ಹೋಗಿದ್ದರು. ಮಹಿಳೆ ಆಗಾಗ್ಗೆ ಆತನಿಗೆ ತಿನ್ನಲು ಆಹಾರ ಅಥವಾ ಧಾನ್ಯಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. </p><p>ಹೀಗೆ ಪದೇ ಪದೇ ಭಿಕ್ಷೆ ಕೋರಿ ಮನೆ ಬಳಿ ಬರುತ್ತಿದ್ದ ಪಂಡಿತ್, ಮಹಿಳೆಯೊಂದಿಗೆ ಸಲುಗೆಯಿಂದ ಹಲವು ಗಂಟೆಗಳ ಕಾಲ ಮಾತನಾಡುತ್ತಿದ್ದರು. ಕ್ರಮೇಣ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>