‘ಇಷ್ಟು ಪ್ರಮಾಣದ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಸೌಲಭ್ಯವನ್ನು ಯಾವಾಗ ಅಭಿವೃದ್ಧಿಪಡಿಸಿಕೊಳ್ಳುವಿರಿ. ತ್ಯಾಜ್ಯದ ನಿರ್ವಹಣೆಯ ಸಾಮರ್ಥ್ಯವಿಲ್ಲದ ಕಾರಣ, ಇಷ್ಟು ಪ್ರಮಾಣದ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ ಎಂಬುದು ದಾಖಲೆಗಳು ಹೇಳುತ್ತವೆ. ಈ ಹೇಳಿಕೆ ಸರಿಯಾಗಿದೆಯೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿ. ಈ ಸರಳವಾದ ಪ್ರಶ್ನೆಗೆ ನಿಮ್ಮಿಂದಲೂ ಸರಳವಾದ ಉತ್ತರವನ್ನೇ ನಿರೀಕ್ಷಿಸುತ್ತೇವೆ’ ಎಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಪರ ಹಾಜರಿದ್ದ ಹಿರಿಯ ವಕೀಲರಾದ ಮೇನಕಾ ಗುರುಸ್ವಾಮಿ ಅವರನ್ನು ಪ್ರಶ್ನಿಸಿತು.