<p><strong>ನವದೆಹಲಿ: ‘</strong>ಭಾರತದ ರಾಜಧಾನಿ ದೆಹಲಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 3,800 ಮೆಟ್ರಿಕ್ ಟನ್ನಷ್ಟು ಘನತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ. ಇದು ಸರಿಯಾದ ಬೆಳವಣಿಗೆಯಲ್ಲ’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. </p>.<p>ದೆಹಲಿಯಲ್ಲಿ ಘನತ್ಯಾಜ್ಯ ಸಂಸ್ಕರಣೆ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.</p>.<p>‘ಘನತ್ಯಾಜ್ಯ ನಿರ್ವಹಣೆ ವಿಚಾರವನ್ನು ರಾಜಕೀಯ ಮೀರಿ ಚಿಂತಿಸಬೇಕು. ಆದರೆ, ಈ ಬಗ್ಗೆ ಯಾರೂ ತಲೆ ಕೆಡೆಸಿಕೊಂಡಂತೆ ಕಾಣುತ್ತಿಲ್ಲ. ಈ ಕುರಿತು ಪೌರಸಂಸ್ಥೆಯ ಉನ್ನತ ಅಧಿಕಾರಿಗೆ ಸಮನ್ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿತು. </p>.<p>ಪ್ರತಿನಿತ್ಯ ಉತ್ಪತ್ತಿಯಾಗುವ 3,800 ಮೆಟ್ರಿಕ್ ಟನ್ ತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯದ ಪ್ರಮಾಣ ಮತ್ತಷ್ಟು ಹೆಚ್ಚಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ ಕರೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪೀಠವು ಸಲಹೆ ನೀಡಿತು. </p>.<p>‘ಇಷ್ಟು ಪ್ರಮಾಣದ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಸೌಲಭ್ಯವನ್ನು ಯಾವಾಗ ಅಭಿವೃದ್ಧಿಪಡಿಸಿಕೊಳ್ಳುವಿರಿ. ತ್ಯಾಜ್ಯದ ನಿರ್ವಹಣೆಯ ಸಾಮರ್ಥ್ಯವಿಲ್ಲದ ಕಾರಣ, ಇಷ್ಟು ಪ್ರಮಾಣದ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ ಎಂಬುದು ದಾಖಲೆಗಳು ಹೇಳುತ್ತವೆ. ಈ ಹೇಳಿಕೆ ಸರಿಯಾಗಿದೆಯೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿ. ಈ ಸರಳವಾದ ಪ್ರಶ್ನೆಗೆ ನಿಮ್ಮಿಂದಲೂ ಸರಳವಾದ ಉತ್ತರವನ್ನೇ ನಿರೀಕ್ಷಿಸುತ್ತೇವೆ’ ಎಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಪರ ಹಾಜರಿದ್ದ ಹಿರಿಯ ವಕೀಲರಾದ ಮೇನಕಾ ಗುರುಸ್ವಾಮಿ ಅವರನ್ನು ಪ್ರಶ್ನಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಭಾರತದ ರಾಜಧಾನಿ ದೆಹಲಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 3,800 ಮೆಟ್ರಿಕ್ ಟನ್ನಷ್ಟು ಘನತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ. ಇದು ಸರಿಯಾದ ಬೆಳವಣಿಗೆಯಲ್ಲ’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. </p>.<p>ದೆಹಲಿಯಲ್ಲಿ ಘನತ್ಯಾಜ್ಯ ಸಂಸ್ಕರಣೆ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.</p>.<p>‘ಘನತ್ಯಾಜ್ಯ ನಿರ್ವಹಣೆ ವಿಚಾರವನ್ನು ರಾಜಕೀಯ ಮೀರಿ ಚಿಂತಿಸಬೇಕು. ಆದರೆ, ಈ ಬಗ್ಗೆ ಯಾರೂ ತಲೆ ಕೆಡೆಸಿಕೊಂಡಂತೆ ಕಾಣುತ್ತಿಲ್ಲ. ಈ ಕುರಿತು ಪೌರಸಂಸ್ಥೆಯ ಉನ್ನತ ಅಧಿಕಾರಿಗೆ ಸಮನ್ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿತು. </p>.<p>ಪ್ರತಿನಿತ್ಯ ಉತ್ಪತ್ತಿಯಾಗುವ 3,800 ಮೆಟ್ರಿಕ್ ಟನ್ ತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯದ ಪ್ರಮಾಣ ಮತ್ತಷ್ಟು ಹೆಚ್ಚಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ ಕರೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪೀಠವು ಸಲಹೆ ನೀಡಿತು. </p>.<p>‘ಇಷ್ಟು ಪ್ರಮಾಣದ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಸೌಲಭ್ಯವನ್ನು ಯಾವಾಗ ಅಭಿವೃದ್ಧಿಪಡಿಸಿಕೊಳ್ಳುವಿರಿ. ತ್ಯಾಜ್ಯದ ನಿರ್ವಹಣೆಯ ಸಾಮರ್ಥ್ಯವಿಲ್ಲದ ಕಾರಣ, ಇಷ್ಟು ಪ್ರಮಾಣದ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ ಎಂಬುದು ದಾಖಲೆಗಳು ಹೇಳುತ್ತವೆ. ಈ ಹೇಳಿಕೆ ಸರಿಯಾಗಿದೆಯೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿ. ಈ ಸರಳವಾದ ಪ್ರಶ್ನೆಗೆ ನಿಮ್ಮಿಂದಲೂ ಸರಳವಾದ ಉತ್ತರವನ್ನೇ ನಿರೀಕ್ಷಿಸುತ್ತೇವೆ’ ಎಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಪರ ಹಾಜರಿದ್ದ ಹಿರಿಯ ವಕೀಲರಾದ ಮೇನಕಾ ಗುರುಸ್ವಾಮಿ ಅವರನ್ನು ಪ್ರಶ್ನಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>