<p><strong>ಅಲಿಗಢ</strong>: ‘ಜಾತಿ ಆಧಾರಿತ ತಾರತಮ್ಯವು ಸಮಾಜದ ಒಗ್ಗಟ್ಟನ್ನು ಕುಂದಿಸುವ ವಿಭಜಕ ಶಕ್ತಿಯಾಗಿದೆ. ಆದ್ದರಿಂದ ಸಮಾಜದಲ್ಲಿರುವ ಜಾತಿ ಆಧಾರಿತ ತಾರತಮ್ಯವನ್ನು ಇಲ್ಲವಾಗಿಸುವ ಕಾರ್ಯದಲ್ಲಿ ತೊಡಗಿಕೊಳ್ಳಿ’ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ತಮ್ಮ ಪ್ರಚಾರಕರಿಗೆ ಕರೆ ನೀಡಿದರು.</p>.<p>ಮೋಹನ್ ಭಾಗವತ್ ಅವರು ಐದು ದಿನಗಳ ಭೇಟಿಗಾಗಿ ಅಲಿಗಢಕ್ಕೆ ಬಂದಿದ್ದರು. ಸೋಮವಾರವು ಅವರ ಭೇಟಿಯ ಕೊನೆಯ ದಿನವಾಗಿತ್ತು. ಅಂದು ತಮ್ಮ ಕಾರ್ಯಕರ್ತರೊಂದಿಗೆ ಅವರು ಮಾತುಕತೆ ನಡೆಸಿದ್ದರು. ಇದೇ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಕಾರ್ಯಕರ್ತರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.</p>.<p>‘ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಸಮಾಜ ನಿರ್ಮಾಣಕ್ಕಾಗಿ, ಸಾಮಾಜಿಕವಾಗಿ ಒಗ್ಗಟ್ಟಿನಿಂದ ಇರುವ ಬಗ್ಗೆ ಅಡಿಪಾಯ ಹಾಕಿದ್ದರು. ಆಧುನಿಕ ಭಾರತದಲ್ಲಿ ಕ್ರಾಂತಿಯ ಬೀಜವನ್ನು ಬಿತ್ತಿದ, ನ್ಯಾಯದ ಹಾದಿ ತೋರಿಸಿದ ಅಂಬೇಡ್ಕರ್ ಅವರಿಗೆ ನಾವು ಋಣಿಯಾಗಿರಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಢ</strong>: ‘ಜಾತಿ ಆಧಾರಿತ ತಾರತಮ್ಯವು ಸಮಾಜದ ಒಗ್ಗಟ್ಟನ್ನು ಕುಂದಿಸುವ ವಿಭಜಕ ಶಕ್ತಿಯಾಗಿದೆ. ಆದ್ದರಿಂದ ಸಮಾಜದಲ್ಲಿರುವ ಜಾತಿ ಆಧಾರಿತ ತಾರತಮ್ಯವನ್ನು ಇಲ್ಲವಾಗಿಸುವ ಕಾರ್ಯದಲ್ಲಿ ತೊಡಗಿಕೊಳ್ಳಿ’ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ತಮ್ಮ ಪ್ರಚಾರಕರಿಗೆ ಕರೆ ನೀಡಿದರು.</p>.<p>ಮೋಹನ್ ಭಾಗವತ್ ಅವರು ಐದು ದಿನಗಳ ಭೇಟಿಗಾಗಿ ಅಲಿಗಢಕ್ಕೆ ಬಂದಿದ್ದರು. ಸೋಮವಾರವು ಅವರ ಭೇಟಿಯ ಕೊನೆಯ ದಿನವಾಗಿತ್ತು. ಅಂದು ತಮ್ಮ ಕಾರ್ಯಕರ್ತರೊಂದಿಗೆ ಅವರು ಮಾತುಕತೆ ನಡೆಸಿದ್ದರು. ಇದೇ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಕಾರ್ಯಕರ್ತರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.</p>.<p>‘ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಸಮಾಜ ನಿರ್ಮಾಣಕ್ಕಾಗಿ, ಸಾಮಾಜಿಕವಾಗಿ ಒಗ್ಗಟ್ಟಿನಿಂದ ಇರುವ ಬಗ್ಗೆ ಅಡಿಪಾಯ ಹಾಕಿದ್ದರು. ಆಧುನಿಕ ಭಾರತದಲ್ಲಿ ಕ್ರಾಂತಿಯ ಬೀಜವನ್ನು ಬಿತ್ತಿದ, ನ್ಯಾಯದ ಹಾದಿ ತೋರಿಸಿದ ಅಂಬೇಡ್ಕರ್ ಅವರಿಗೆ ನಾವು ಋಣಿಯಾಗಿರಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>