<p><strong>ಲಖನೌ:</strong> ಉತ್ತರ ಪ್ರದೇಶದ ಅಲಿಗಡ ದಲ್ಲಿ ಕಚೋರಿ, ಸಮೋಸ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಿಗೆ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.</p>.<p>ಅಲಿಗಡದ ಸೀಮಾ ಟಾಕೀಸ್ ಸಮೀಪದಲ್ಲಿರುವ ‘ಮುಕೇಶ್ ಕಚೋರಿವಾಲಾ’ ಅಂಗಡಿಯ ಮಾಲೀಕ ಮುಕೇಶ್ ಕುಮಾರ್ 12 ವರ್ಷಗಳಿಂದ ಈ ವ್ಯಾಪಾರ ಮಾಡುತ್ತಿದ್ದಾರೆ. ಕಚೋರಿ, ಸಮೋಸ ರುಚಿಗೆ ಮಾರುಹೋದ ಗ್ರಾಹಕರು ದಿನವಿಡೀ ಅಂಗಡಿ ಮುಂದೆ ನೆರೆದಿರುತ್ತಾರೆ.</p>.<p>ಈಚೆಗೆ ಇವರ ವ್ಯಾಪಾರ ಕುರಿತು ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿತ್ತು. ಇದಾದ ಬಳಿಕ ಮುಕೇಶ್ ಅಂಗಡಿ ಮೇಲೆ ಇಲಾಖೆ ಅಧಿಕಾರಿಗಳು ನಿಗಾ ಇರಿಸಿದ್ದರು.</p>.<p>‘ಸಮೀಪದ ಅಂಗಡಿ ಬಳಿ ಕುಳಿತು, ಮುಕೇಶ್ ನಡೆಸುವ ವ್ಯಾಪಾರವನ್ನು ದಿನವಿಡೀ ಗಮನಿಸಿದೆವು. ಐದಾರು ದಿನ ಈ ರೀತಿ ನಿಗಾ ಇರಿಸಿದ ಬಳಿಕ ವಾರ್ಷಿಕ ₹60 ಲಕ್ಷದಿಂದ ₹1 ಕೋಟಿ ವಹಿವಾಟು ನಡೆಯುತ್ತಿದೆ ಎಂದು ಅಂದಾಜಿಸಲಾಯಿತು’ ಎಂದು ತೆರಿಗೆ ಇಲಾಖೆಯ ವಿಶೇಷ ತನಿಖಾ ದಳದ (ಎಸ್ಐಬಿ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಜಿಎಸ್ಟಿ ಅಡಿ ನೋಂದಾಯಿಸಿಕೊಳ್ಳದೆ ಇರುವುದಕ್ಕೆ ಮತ್ತು ತೆರಿಗೆ ಪಾವತಿಸದೆ ಇರುವುದಕ್ಕಾಗಿ ಅವರಿಗೆ ಇಲಾಖೆ ನೋಟಿಸ್ ನೀಡಿದೆ.</p>.<p>‘ಮಾಹಿತಿ ಇರಲಿಲ್ಲ’: ‘ಇಂತಹ ನಿಯಮ ಅನುಸರಿಸುವುದು ಅವಶ್ಯ ಎಂದು ನನಗೆ ಯಾರೂ ಈ ತನಕ ತಿಳಿಸಿಲ್ಲ. ಜೀವನ ನಡೆಸುವುದಕ್ಕಾಗಿ ಕಚೋರಿ, ಸಮೋಸಾ ಮಾರುತ್ತೇನೆ’ ಎಂದು ಮುಕೇಶ್ ಪ್ರತಿಕ್ರಿಯಿಸಿದ್ದಾರೆ.</p>.<p>‘ಮುಕೇಶ್ ತಮ್ಮ ಆದಾಯದ ಮಾಹಿತಿ ನೀಡಿದ್ದಾರೆ. ತಾವು ಬಳಸುವ ಕಚ್ಚಾ ಉತ್ಪನ್ನ, ಎಣ್ಣೆ, ಅಡುಗೆ ಅನಿಲದ ವೆಚ್ಚಗಳ ವಿವರ ನೀಡಿದ್ದಾರೆ. ಅವರು ಜಿಎಸ್ಟಿ ಅಡಿ ನೋಂದಾಯಿಸಿಕೊಂಡು, ಒಂದು ವರ್ಷದ ತೆರಿಗೆ ಪಾವತಿಸಬೇಕು’ ಎಂದು ಎಸ್ಐಬಿ ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಅಲಿಗಡ ದಲ್ಲಿ ಕಚೋರಿ, ಸಮೋಸ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಿಗೆ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.</p>.<p>ಅಲಿಗಡದ ಸೀಮಾ ಟಾಕೀಸ್ ಸಮೀಪದಲ್ಲಿರುವ ‘ಮುಕೇಶ್ ಕಚೋರಿವಾಲಾ’ ಅಂಗಡಿಯ ಮಾಲೀಕ ಮುಕೇಶ್ ಕುಮಾರ್ 12 ವರ್ಷಗಳಿಂದ ಈ ವ್ಯಾಪಾರ ಮಾಡುತ್ತಿದ್ದಾರೆ. ಕಚೋರಿ, ಸಮೋಸ ರುಚಿಗೆ ಮಾರುಹೋದ ಗ್ರಾಹಕರು ದಿನವಿಡೀ ಅಂಗಡಿ ಮುಂದೆ ನೆರೆದಿರುತ್ತಾರೆ.</p>.<p>ಈಚೆಗೆ ಇವರ ವ್ಯಾಪಾರ ಕುರಿತು ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿತ್ತು. ಇದಾದ ಬಳಿಕ ಮುಕೇಶ್ ಅಂಗಡಿ ಮೇಲೆ ಇಲಾಖೆ ಅಧಿಕಾರಿಗಳು ನಿಗಾ ಇರಿಸಿದ್ದರು.</p>.<p>‘ಸಮೀಪದ ಅಂಗಡಿ ಬಳಿ ಕುಳಿತು, ಮುಕೇಶ್ ನಡೆಸುವ ವ್ಯಾಪಾರವನ್ನು ದಿನವಿಡೀ ಗಮನಿಸಿದೆವು. ಐದಾರು ದಿನ ಈ ರೀತಿ ನಿಗಾ ಇರಿಸಿದ ಬಳಿಕ ವಾರ್ಷಿಕ ₹60 ಲಕ್ಷದಿಂದ ₹1 ಕೋಟಿ ವಹಿವಾಟು ನಡೆಯುತ್ತಿದೆ ಎಂದು ಅಂದಾಜಿಸಲಾಯಿತು’ ಎಂದು ತೆರಿಗೆ ಇಲಾಖೆಯ ವಿಶೇಷ ತನಿಖಾ ದಳದ (ಎಸ್ಐಬಿ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಜಿಎಸ್ಟಿ ಅಡಿ ನೋಂದಾಯಿಸಿಕೊಳ್ಳದೆ ಇರುವುದಕ್ಕೆ ಮತ್ತು ತೆರಿಗೆ ಪಾವತಿಸದೆ ಇರುವುದಕ್ಕಾಗಿ ಅವರಿಗೆ ಇಲಾಖೆ ನೋಟಿಸ್ ನೀಡಿದೆ.</p>.<p>‘ಮಾಹಿತಿ ಇರಲಿಲ್ಲ’: ‘ಇಂತಹ ನಿಯಮ ಅನುಸರಿಸುವುದು ಅವಶ್ಯ ಎಂದು ನನಗೆ ಯಾರೂ ಈ ತನಕ ತಿಳಿಸಿಲ್ಲ. ಜೀವನ ನಡೆಸುವುದಕ್ಕಾಗಿ ಕಚೋರಿ, ಸಮೋಸಾ ಮಾರುತ್ತೇನೆ’ ಎಂದು ಮುಕೇಶ್ ಪ್ರತಿಕ್ರಿಯಿಸಿದ್ದಾರೆ.</p>.<p>‘ಮುಕೇಶ್ ತಮ್ಮ ಆದಾಯದ ಮಾಹಿತಿ ನೀಡಿದ್ದಾರೆ. ತಾವು ಬಳಸುವ ಕಚ್ಚಾ ಉತ್ಪನ್ನ, ಎಣ್ಣೆ, ಅಡುಗೆ ಅನಿಲದ ವೆಚ್ಚಗಳ ವಿವರ ನೀಡಿದ್ದಾರೆ. ಅವರು ಜಿಎಸ್ಟಿ ಅಡಿ ನೋಂದಾಯಿಸಿಕೊಂಡು, ಒಂದು ವರ್ಷದ ತೆರಿಗೆ ಪಾವತಿಸಬೇಕು’ ಎಂದು ಎಸ್ಐಬಿ ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>