<p><strong>ನವದೆಹಲಿ:</strong> ಇದೇ ಮೊದಲ ಬಾರಿಗೆ ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್ಸಿ) ಮುಖ್ಯಸ್ಥರು ದೇಶದಾದ್ಯಂತರ ಇರುವ ಸರ್ಕಾರಿ ಉದ್ಯೋಗಾಕಾಂಕ್ಷಿಗಳೊಂದಿಗೆ ವರ್ಚುವಲ್ ವೇದಿಕೆಯ ಮೂಲಕ ಸಂವಾದ ನಡೆಸಲಿದ್ದಾರೆ.</p>.<p>ಯುಪಿಎಸ್ಸಿ ಅಧ್ಯಕ್ಷ ಅಜಯ್ಕುಮಾರ್ ಅವರು ದೂರದರ್ಶನದ ಯೂಟ್ಯೂಬ್ ಚಾನೆಲ್ ಮೂಲಕ ಅಕ್ಟೋಬರ್ 1ರಂದು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಇದೇ ಆಕ್ಟೋಬರ್ 1ರಿಂದ 2026ನೇ ಅಕ್ಟೋಬರ್ 1ರವರೆಗೆ ನಡೆಯಲಿರುವ ಯುಪಿಎಸ್ಸಿ ಶತಮಾನೋತ್ಸವ ಆಚರಣೆಯ ಭಾಗವಾಗಿ ಈ ಸಂವಾದ ಆಯೋಜಿಸಲಾಗಿದೆ’ ಎಂದು ಅಜಯ್ಕುಮಾರ್ ಅವರು ‘ಲಿಂಕ್ಡೆನ್’ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>‘ಸಂವಾದದಲ್ಲಿ ಭಾಗಿಯಾಗುವವರ ಸಂಖ್ಯೆಯನ್ನು ಅಂದಾಜಿಸುವ ಸಲುವಾಗಿ ಸೆಪ್ಟೆಂಬರ್ 28ರಿಂದ ಸೆಪ್ಟೆಂಬರ್ 30ರ ಬೆಳಿಗ್ಗೆಯವರೆಗೆ ಪ್ರಶ್ನೆಗಳನ್ನು ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಶ್ನೆಗಳನ್ನು ವಿಡಿಯೊ ಮತ್ತು ಬರವಣಿಗೆ ವಿಧಾನಗಳಲ್ಲಿ interactwithupsc@gmail.com ಎಂಬ ಇ–ಮೇಲ್ ವಿಳಾಸಕ್ಕೆ ಕಳುಹಿಸಬಹುದು’ ಎಂದು ತಿಳಿಸಿದ್ದಾರೆ.</p>.<p>ಸಂವಾದ ನಡೆಯುವ ಅಸಮಯದಲ್ಲಿ ಸಾಮಾಜಿಕ ಜಾಲತಾಣಗಳಾದ ‘ಎಕ್ಸ್’, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂಗಳಲ್ಲಿ ಅಧಿಕೃತ ಹ್ಯಾಶ್ಟ್ಯಾಗ್ #AskChairmanUPSC ಮೂಲಕ ಪ್ರಶ್ನೆಗಳನ್ನು ಕೇಳಬಹುದು ಎಂದು ಅಜಯ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇದೇ ಮೊದಲ ಬಾರಿಗೆ ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್ಸಿ) ಮುಖ್ಯಸ್ಥರು ದೇಶದಾದ್ಯಂತರ ಇರುವ ಸರ್ಕಾರಿ ಉದ್ಯೋಗಾಕಾಂಕ್ಷಿಗಳೊಂದಿಗೆ ವರ್ಚುವಲ್ ವೇದಿಕೆಯ ಮೂಲಕ ಸಂವಾದ ನಡೆಸಲಿದ್ದಾರೆ.</p>.<p>ಯುಪಿಎಸ್ಸಿ ಅಧ್ಯಕ್ಷ ಅಜಯ್ಕುಮಾರ್ ಅವರು ದೂರದರ್ಶನದ ಯೂಟ್ಯೂಬ್ ಚಾನೆಲ್ ಮೂಲಕ ಅಕ್ಟೋಬರ್ 1ರಂದು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಇದೇ ಆಕ್ಟೋಬರ್ 1ರಿಂದ 2026ನೇ ಅಕ್ಟೋಬರ್ 1ರವರೆಗೆ ನಡೆಯಲಿರುವ ಯುಪಿಎಸ್ಸಿ ಶತಮಾನೋತ್ಸವ ಆಚರಣೆಯ ಭಾಗವಾಗಿ ಈ ಸಂವಾದ ಆಯೋಜಿಸಲಾಗಿದೆ’ ಎಂದು ಅಜಯ್ಕುಮಾರ್ ಅವರು ‘ಲಿಂಕ್ಡೆನ್’ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>‘ಸಂವಾದದಲ್ಲಿ ಭಾಗಿಯಾಗುವವರ ಸಂಖ್ಯೆಯನ್ನು ಅಂದಾಜಿಸುವ ಸಲುವಾಗಿ ಸೆಪ್ಟೆಂಬರ್ 28ರಿಂದ ಸೆಪ್ಟೆಂಬರ್ 30ರ ಬೆಳಿಗ್ಗೆಯವರೆಗೆ ಪ್ರಶ್ನೆಗಳನ್ನು ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಶ್ನೆಗಳನ್ನು ವಿಡಿಯೊ ಮತ್ತು ಬರವಣಿಗೆ ವಿಧಾನಗಳಲ್ಲಿ interactwithupsc@gmail.com ಎಂಬ ಇ–ಮೇಲ್ ವಿಳಾಸಕ್ಕೆ ಕಳುಹಿಸಬಹುದು’ ಎಂದು ತಿಳಿಸಿದ್ದಾರೆ.</p>.<p>ಸಂವಾದ ನಡೆಯುವ ಅಸಮಯದಲ್ಲಿ ಸಾಮಾಜಿಕ ಜಾಲತಾಣಗಳಾದ ‘ಎಕ್ಸ್’, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂಗಳಲ್ಲಿ ಅಧಿಕೃತ ಹ್ಯಾಶ್ಟ್ಯಾಗ್ #AskChairmanUPSC ಮೂಲಕ ಪ್ರಶ್ನೆಗಳನ್ನು ಕೇಳಬಹುದು ಎಂದು ಅಜಯ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>