<p>ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಯಮಗೆ ಗ್ರಾಮದ ಬೀರದೇವ ಸಿದ್ದಪ್ಪ ಡೋಣೆ (Birdev Siddappa Done) ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC CSE) 551ನೇ ರ್ಯಾಂಕ್ ಪಡೆದಿದ್ದಾರೆ. ಕುರಿಗಾಹಿಗಳ ಮಗನಾದ ಈ ಯುವಕ ದೇಶವೇ ತಿರುಗಿ ನೋಡುವಂಥ ಸಾಧನೆ ಮಾಡಿದ್ದಾರೆ. ಸಾಧನೆಗೆ ಬಡತನ ಮತ್ತು ಭಾಷೆ ಅಡ್ಡಿಯಾಗುವುದಿಲ್ಲ ಎಂದು ತೋರಿಸಿದ್ದಾರೆ. ಬೆಳಗಾವಿ ಹೊರವಲಯದಲ್ಲಿ ಕುರಿ ಕಾಯುತ್ತಿದ್ದ ಈ ಸಾಧಕ ತಮ್ಮ ಜೀವನ ಹಾಗೂ ಯುಪಿಎಸ್ಸಿ ಸಾಧನೆಯ ಬಗ್ಗೆ ಈ ವಿಡಿಯೊದಲ್ಲಿ ಮಾತನಾಡಿದ್ದಾರೆ. ಅಲ್ಲದೆ, ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷಾರ್ಥಿಗಳಿಗೆ ಅನೇಕ ಟಿಪ್ಸ್ ಕೂಡ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>