<p><strong>ನವದೆಹಲಿ:</strong>ದೆಹಲಿಯಲ್ಲಿ ನಾಗರಿಕ ಸೇವೆಗಳ ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿಮಾನ ಪ್ರಯಾಣ ದರವನ್ನು ಮರುಪಾವತಿಸಲು ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್ಸಿ) ನಿರ್ಧರಿಸಿದೆ.</p>.<p>ಆಯೋಗವು ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲೂ ಸಹಾಯ ಮಾಡಲಿದೆ.</p>.<p>‘ಕೋವಿಡ್–19 ಪರಿಣಾಮ ರೈಲುಗಳ ಕಾರ್ಯಾಚರಣೆ ಪೂರ್ಣವಾಗಿ ಆರಂಭವಾಗದ ಕಾರಣ ಅಭ್ಯರ್ಥಿಗಳಿಗೆ ದೆಹಲಿಗೆ ಬರುವ ಮತ್ತು ಹೋಗುವ ವಿಮಾನ ಪ್ರಯಾಣದ ದರವನ್ನು ಮರುಪಾವತಿಸಲು ನಿರ್ಧರಿಸಲಾಗಿದೆ’ ಎಂದು ಆಯೋಗವು ಹೇಳಿದೆ.</p>.<p>‘ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದಿರುವ ದಾಖಲೆ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವ ಸಲುವಾಗಿ ನಿರ್ಬಂಧಿತ ಪ್ರದೇಶಗಳಲ್ಲಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ’ ಎಂದೂ ಹೇಳಿದೆ.</p>.<p>2019ನೇ ಸಾಲಿನ ನಾಗರಿಕ ಸೇವೆಗಳ ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದಿದ್ದ 2,304 ಮಂದಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದ ವೇಳೆ ಕೋವಿಡ್ ಕಾರಣದಿಂದ ಲಾಕ್ಡೌನ್ ಹೇರಿಕೆಯಾಗಿತ್ತು. ಈ ಕಾರಣಕ್ಕೆ ಬಾಕಿ ಉಳಿದಿದ್ದ 623 ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆಯನ್ನು ಮುಂದೂಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೆಹಲಿಯಲ್ಲಿ ನಾಗರಿಕ ಸೇವೆಗಳ ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿಮಾನ ಪ್ರಯಾಣ ದರವನ್ನು ಮರುಪಾವತಿಸಲು ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್ಸಿ) ನಿರ್ಧರಿಸಿದೆ.</p>.<p>ಆಯೋಗವು ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲೂ ಸಹಾಯ ಮಾಡಲಿದೆ.</p>.<p>‘ಕೋವಿಡ್–19 ಪರಿಣಾಮ ರೈಲುಗಳ ಕಾರ್ಯಾಚರಣೆ ಪೂರ್ಣವಾಗಿ ಆರಂಭವಾಗದ ಕಾರಣ ಅಭ್ಯರ್ಥಿಗಳಿಗೆ ದೆಹಲಿಗೆ ಬರುವ ಮತ್ತು ಹೋಗುವ ವಿಮಾನ ಪ್ರಯಾಣದ ದರವನ್ನು ಮರುಪಾವತಿಸಲು ನಿರ್ಧರಿಸಲಾಗಿದೆ’ ಎಂದು ಆಯೋಗವು ಹೇಳಿದೆ.</p>.<p>‘ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದಿರುವ ದಾಖಲೆ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವ ಸಲುವಾಗಿ ನಿರ್ಬಂಧಿತ ಪ್ರದೇಶಗಳಲ್ಲಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ’ ಎಂದೂ ಹೇಳಿದೆ.</p>.<p>2019ನೇ ಸಾಲಿನ ನಾಗರಿಕ ಸೇವೆಗಳ ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದಿದ್ದ 2,304 ಮಂದಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದ ವೇಳೆ ಕೋವಿಡ್ ಕಾರಣದಿಂದ ಲಾಕ್ಡೌನ್ ಹೇರಿಕೆಯಾಗಿತ್ತು. ಈ ಕಾರಣಕ್ಕೆ ಬಾಕಿ ಉಳಿದಿದ್ದ 623 ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆಯನ್ನು ಮುಂದೂಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>