<p><strong>ಕೋಲ್ಕತ್ತ:</strong> ಯೋಜನಾರಹಿತ ನಗರೀಕರಣ ಮತ್ತು ಮರಗಳ ನಾಶದಿಂದಾಗಿ ದೇಶದಲ್ಲಿ ಸಿಡಿಲು ಬಡಿತ ಹೆಚ್ಚಿದ್ದು, ಪರಿಣಾಮವಾಗಿ ಸಾವು–ನೋವಿನ ಸಂಖ್ಯೆಯೂ ಹೆಚ್ಚಾಗಿದೆ ಎಂದು ಪುಣೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮಿಟಿಯೊರಾಲಜಿಯ (ಐಐಟಿಎಂ) ಹಿರಿಯ ಹವಾಮಾನ ತಜ್ಞ ಡಾ. ಎಸ್.ಡಿ.ಪವಾರ್ ತಿಳಿಸಿದ್ದಾರೆ.</p>.<p>ಈಚಿನ ದಿನಗಳಲ್ಲಿ ಭಾರತದ ಗ್ರಾಮೀಣ ಪ್ರದೇಶಕ್ಕಿಂತಲೂ, ನಗರ ಪ್ರದೇಶದಲ್ಲಿ ಸಿಡಿಲು ಬಡಿತ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ದೇಶದಲ್ಲಿ ಸಿಡಿಲು ಬಡಿತದಿಂದಾಗಿ ಪ್ರತಿವರ್ಷ ಸುಮಾರು 3,500 ಸಾವುಗಳು ಸಂಭವಿಸುತ್ತಿವೆ. ಆದರೆ, ಕಳೆದ ಐದು ವರ್ಷಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಿದೆ. ಈ ಬಾರಿ ಮಧ್ಯ ಹಿಮಾಲಯದ ತಪ್ಪಲು ಮತ್ತು ದೇಶದ ಪೂರ್ವ ಭಾಗದಲ್ಲಿ ಸಿಡಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಭಾರತದಲ್ಲಿ ಸಿಡಿಲು ಬಡಿತದಿಂದ ಮೃತಪಟ್ಟವರ ಸಂಖ್ಯೆಯ ಬಗ್ಗೆ ಅಧಿಕೃತ ದಾಖಲೆಗಳಿಲ್ಲ. ಆದರೆ, ಕಳೆದ ಇಪ್ಪತ್ತು ವರ್ಷಗಳ ಅಧ್ಯಯನದ ಪ್ರಕಾರ, ಸಾವು–ನೋವಿನ ಸಂಖ್ಯೆ ಖಂಡಿತವಾಗಿಯೂ ಹೆಚ್ಚಿದೆ ಎಂದು ಹೇಳಿದ್ದಾರೆ.</p>.<p>ಜಾಗತಿಕ ತಾಪಮಾನ ಹೆಚ್ಚಳ, ಪರಿಸರ ಮಾಲಿನ್ಯ, ಬಯಲು ಪ್ರದೇಶಗಳಲ್ಲಿ ರಸ್ತೆಯಂತಹ ಮೂಲ ಸೌಕರ್ಯಗಳ ನಿರ್ಮಾಣ, ಹಸಿರಿನ ಕೊರತೆ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಯೋಜನಾರಹಿತ ನಗರೀಕರಣ ಮತ್ತು ಮರಗಳ ನಾಶದಿಂದಾಗಿ ದೇಶದಲ್ಲಿ ಸಿಡಿಲು ಬಡಿತ ಹೆಚ್ಚಿದ್ದು, ಪರಿಣಾಮವಾಗಿ ಸಾವು–ನೋವಿನ ಸಂಖ್ಯೆಯೂ ಹೆಚ್ಚಾಗಿದೆ ಎಂದು ಪುಣೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮಿಟಿಯೊರಾಲಜಿಯ (ಐಐಟಿಎಂ) ಹಿರಿಯ ಹವಾಮಾನ ತಜ್ಞ ಡಾ. ಎಸ್.ಡಿ.ಪವಾರ್ ತಿಳಿಸಿದ್ದಾರೆ.</p>.<p>ಈಚಿನ ದಿನಗಳಲ್ಲಿ ಭಾರತದ ಗ್ರಾಮೀಣ ಪ್ರದೇಶಕ್ಕಿಂತಲೂ, ನಗರ ಪ್ರದೇಶದಲ್ಲಿ ಸಿಡಿಲು ಬಡಿತ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ದೇಶದಲ್ಲಿ ಸಿಡಿಲು ಬಡಿತದಿಂದಾಗಿ ಪ್ರತಿವರ್ಷ ಸುಮಾರು 3,500 ಸಾವುಗಳು ಸಂಭವಿಸುತ್ತಿವೆ. ಆದರೆ, ಕಳೆದ ಐದು ವರ್ಷಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಿದೆ. ಈ ಬಾರಿ ಮಧ್ಯ ಹಿಮಾಲಯದ ತಪ್ಪಲು ಮತ್ತು ದೇಶದ ಪೂರ್ವ ಭಾಗದಲ್ಲಿ ಸಿಡಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಭಾರತದಲ್ಲಿ ಸಿಡಿಲು ಬಡಿತದಿಂದ ಮೃತಪಟ್ಟವರ ಸಂಖ್ಯೆಯ ಬಗ್ಗೆ ಅಧಿಕೃತ ದಾಖಲೆಗಳಿಲ್ಲ. ಆದರೆ, ಕಳೆದ ಇಪ್ಪತ್ತು ವರ್ಷಗಳ ಅಧ್ಯಯನದ ಪ್ರಕಾರ, ಸಾವು–ನೋವಿನ ಸಂಖ್ಯೆ ಖಂಡಿತವಾಗಿಯೂ ಹೆಚ್ಚಿದೆ ಎಂದು ಹೇಳಿದ್ದಾರೆ.</p>.<p>ಜಾಗತಿಕ ತಾಪಮಾನ ಹೆಚ್ಚಳ, ಪರಿಸರ ಮಾಲಿನ್ಯ, ಬಯಲು ಪ್ರದೇಶಗಳಲ್ಲಿ ರಸ್ತೆಯಂತಹ ಮೂಲ ಸೌಕರ್ಯಗಳ ನಿರ್ಮಾಣ, ಹಸಿರಿನ ಕೊರತೆ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>