<p><strong>ನವದೆಹಲಿ</strong>: ‘ದೇಶದಲ್ಲಿ ಯೂರಿಯಾ ಕೊರತೆ ಇಲ್ಲ’ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.</p>.<p>‘ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿ, ಲಾಭ ಪಡೆಯಲಿಕ್ಕಾಗಿ ಅನಗತ್ಯ ಕೊರತೆಯನ್ನು ಸೃಷ್ಟಿಸುವವರ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು’ ಎಂದಿದೆ.</p>.<p>ಉತ್ತರ ಪ್ರದೇಶದ ಧೌರಾಹ್ರಾದಲ್ಲಿ ಯೂರಿಯಾ ಕೊರತೆ ಇದೆ ಎಂದು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಆನಂದ್ ಭದೌರಿಯಾ ಅವರು ಪ್ರಸ್ತಾಪಿಸಿದ್ದಕ್ಕೆ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಜೆ.ಪಿ. ನಡ್ಡಾ ಈ ಪ್ರತಿಕ್ರಿಯೆ ನೀಡಿದರು.</p>.<p>‘ಯೂರಿಯಾದ ಕೊರತೆ ಎಂದಿಗೂ ಇರಲಿಲ್ಲ. ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರಲು ಉತ್ಸುಕರಾಗಿರುವ ಕೆಲವರು ಕೊರತೆ ಸೃಷ್ಟಿಸುತ್ತಿದ್ದಾರೆ’ ಎಂದು ಸದನಕ್ಕೆ ತಿಳಿಸಿದರು.</p>.<p>‘ಯೂರಿಯಾ ತುಂಬಿದ ಸರಕು ಸಾಗಣೆಯ ರೈಲುಗಳು, ನಿಗದಿತ ದಿನದಂದೇ ನಿರ್ದಿಷ್ಟ ಸ್ಥಳ ತಲುಪುತ್ತಿವೆ. ಇದಕ್ಕೆ ಸಂಬಂಧಿಸಿದ ವಿವರಗಳು ಸಚಿವಾಲಯದಲ್ಲಿ ಲಭ್ಯವಿವೆ’ ಎಂದ ನಡ್ಡಾ, ‘ಕೃಷಿ ಸಚಿವಾಲಯದೊಂದಿಗೆ ಸಮಾಲೋಚಿಸಿಯೇ ರಸಗೊಬ್ಬರ ಪೂರೈಸಲು ನಿರ್ಧರಿಸಲಾಗಿದೆ’ ಎಂದರು.</p>.<p>ಸಮಯಕ್ಕೆ ಸರಿಯಾಗಿ ರೈತರಿಗೆ ಡಿಎಪಿ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲಿಕ್ಕಾಗಿಯೇ ದಿನಾಂಕ ಮತ್ತು ವಾರವಾರು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಹೇಳಿದರು.</p>.<p>45 ಕೆ.ಜಿ. ತೂಕದ ಯೂರಿಯಾ ಚೀಲವನ್ನು ಗರಿಷ್ಠ ಚಿಲ್ಲರೆ ಬೆಲೆ ₹266 ಹಾಗೂ 50 ಕೆ.ಜಿ. ತೂಕದ ಡಿಎಪಿ ಚೀಲವನ್ನು ₹1,350ರ ದರದಲ್ಲಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಪ್ರತಿ ಚೀಲಕ್ಕೆ ₹1,600 ಸಬ್ಸಿಡಿ ನೀಡುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೇಶದಲ್ಲಿ ಯೂರಿಯಾ ಕೊರತೆ ಇಲ್ಲ’ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.</p>.<p>‘ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿ, ಲಾಭ ಪಡೆಯಲಿಕ್ಕಾಗಿ ಅನಗತ್ಯ ಕೊರತೆಯನ್ನು ಸೃಷ್ಟಿಸುವವರ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು’ ಎಂದಿದೆ.</p>.<p>ಉತ್ತರ ಪ್ರದೇಶದ ಧೌರಾಹ್ರಾದಲ್ಲಿ ಯೂರಿಯಾ ಕೊರತೆ ಇದೆ ಎಂದು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಆನಂದ್ ಭದೌರಿಯಾ ಅವರು ಪ್ರಸ್ತಾಪಿಸಿದ್ದಕ್ಕೆ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಜೆ.ಪಿ. ನಡ್ಡಾ ಈ ಪ್ರತಿಕ್ರಿಯೆ ನೀಡಿದರು.</p>.<p>‘ಯೂರಿಯಾದ ಕೊರತೆ ಎಂದಿಗೂ ಇರಲಿಲ್ಲ. ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರಲು ಉತ್ಸುಕರಾಗಿರುವ ಕೆಲವರು ಕೊರತೆ ಸೃಷ್ಟಿಸುತ್ತಿದ್ದಾರೆ’ ಎಂದು ಸದನಕ್ಕೆ ತಿಳಿಸಿದರು.</p>.<p>‘ಯೂರಿಯಾ ತುಂಬಿದ ಸರಕು ಸಾಗಣೆಯ ರೈಲುಗಳು, ನಿಗದಿತ ದಿನದಂದೇ ನಿರ್ದಿಷ್ಟ ಸ್ಥಳ ತಲುಪುತ್ತಿವೆ. ಇದಕ್ಕೆ ಸಂಬಂಧಿಸಿದ ವಿವರಗಳು ಸಚಿವಾಲಯದಲ್ಲಿ ಲಭ್ಯವಿವೆ’ ಎಂದ ನಡ್ಡಾ, ‘ಕೃಷಿ ಸಚಿವಾಲಯದೊಂದಿಗೆ ಸಮಾಲೋಚಿಸಿಯೇ ರಸಗೊಬ್ಬರ ಪೂರೈಸಲು ನಿರ್ಧರಿಸಲಾಗಿದೆ’ ಎಂದರು.</p>.<p>ಸಮಯಕ್ಕೆ ಸರಿಯಾಗಿ ರೈತರಿಗೆ ಡಿಎಪಿ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲಿಕ್ಕಾಗಿಯೇ ದಿನಾಂಕ ಮತ್ತು ವಾರವಾರು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಹೇಳಿದರು.</p>.<p>45 ಕೆ.ಜಿ. ತೂಕದ ಯೂರಿಯಾ ಚೀಲವನ್ನು ಗರಿಷ್ಠ ಚಿಲ್ಲರೆ ಬೆಲೆ ₹266 ಹಾಗೂ 50 ಕೆ.ಜಿ. ತೂಕದ ಡಿಎಪಿ ಚೀಲವನ್ನು ₹1,350ರ ದರದಲ್ಲಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಪ್ರತಿ ಚೀಲಕ್ಕೆ ₹1,600 ಸಬ್ಸಿಡಿ ನೀಡುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>