<p><strong>ನವದೆಹಲಿ</strong>: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರಕ್ಕೆ ತೀಕ್ಷ್ಣವಾದ ಮತ್ತು ಕಠಿಣವಾದ ಪ್ರಶ್ನೆಗಳನ್ನು ಕೇಳಬೇಕೆಂದು ಸಂಸದರು ಮತ್ತು ರಾಜಕೀಯ ನಾಯಕರನ್ನು ಒತ್ತಾಯಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೇ ಸಂದರ್ಭದಲ್ಲಿ ಸರ್ಕಾರಕ್ಕೂ ಪ್ರತಿಕ್ರಿಯಿಸಲು ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿದರು.</p>.<p>ಸೋಮವಾರ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ’ಇಡೀ ಜಗತ್ತನ್ನು ಕಾಡುತ್ತಿರುವ ಕೋವಿಡ್ ಸಾಂಕ್ರಾಮಿಕದ ಬಗ್ಗೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆಯಬೇಕೆಂದು ಬಯಸುತ್ತೇನೆ’ ಎಂದು ಹೇಳಿದರು.</p>.<p>ಇದೇ ವೇಳೆ, ಕೋವಿಡ್ ಸಾಂಕ್ರಾಮಿಕದ ಬೆಳವಣಿಗೆ ಕುರಿತು ಸಮಗ್ರವಾಗಿ ಚರ್ಚಿಸಲು ಮಂಗಳವಾರ ಸಂಜೆ ಸ್ವಲ್ಪ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವಂತೆ ಸಂಸತ್ತಿನ ಎರಡೂ ಸದನಗಳ ಮುಖಂಡರನ್ನು ಒತ್ತಾಯಿಸುವುದಾಗಿಯೂ ಹೇಳಿದರು.</p>.<p>ಸಂಸತ್ತಿನ ಒಳಗೆ ಮತ್ತು ಹೊರಗೆ ಕೋವಿಡ್ ಸಾಂಕ್ರಾಮಿಕದ ಬಗ್ಗೆ ಚರ್ಚಿಸಬೇಕೆಂದು ಸಂಸದರನ್ನು ಒತ್ತಾಯಿಸಿದ ಮೋದಿಯವರು, ಈ ಸಂದರ್ಭದಲ್ಲಿ ದೇಶದ ಜನರ ಎಲ್ಲ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲು ಸರ್ಕಾರ ಸಿದ್ಧವಾಗಿದೆ’ ಎಂದು ಮೋದಿ ಸ್ಪಷ್ಪಪಡಿಸಿದರು.</p>.<p>’ಸಂಸತ್ ಅಧಿವೇಶನದಲ್ಲಿ ತೀಕ್ಷ್ಣ ಮತ್ತು ಕಠಿಣ ಪ್ರಶ್ನೆಗಳನ್ನು ಕೇಳಬೇಕೆಂದು ನಾನು ವಿನಂತಿಸುತ್ತೇನೆ. ಸೌಹಾರ್ದ ವಾತಾವರಣದಲ್ಲಿ ಸರ್ಕಾರ ಪ್ರತಿಕ್ರಿಯಿಸಲು ಕೂಡ ಅವಕಾಶ ನೀಡಬೇಕು’ ಎಂದು ಮೋದಿ ಹೇಳಿದರು.</p>.<p>’ಜನರಿಗೆ ಸತ್ಯ ತಿಳಿಸುವ ಮೂಲಕ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಇದು ಜನರ ವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯ ವೇಗವನ್ನು ಸುಧಾರಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರಕ್ಕೆ ತೀಕ್ಷ್ಣವಾದ ಮತ್ತು ಕಠಿಣವಾದ ಪ್ರಶ್ನೆಗಳನ್ನು ಕೇಳಬೇಕೆಂದು ಸಂಸದರು ಮತ್ತು ರಾಜಕೀಯ ನಾಯಕರನ್ನು ಒತ್ತಾಯಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೇ ಸಂದರ್ಭದಲ್ಲಿ ಸರ್ಕಾರಕ್ಕೂ ಪ್ರತಿಕ್ರಿಯಿಸಲು ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿದರು.</p>.<p>ಸೋಮವಾರ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ’ಇಡೀ ಜಗತ್ತನ್ನು ಕಾಡುತ್ತಿರುವ ಕೋವಿಡ್ ಸಾಂಕ್ರಾಮಿಕದ ಬಗ್ಗೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆಯಬೇಕೆಂದು ಬಯಸುತ್ತೇನೆ’ ಎಂದು ಹೇಳಿದರು.</p>.<p>ಇದೇ ವೇಳೆ, ಕೋವಿಡ್ ಸಾಂಕ್ರಾಮಿಕದ ಬೆಳವಣಿಗೆ ಕುರಿತು ಸಮಗ್ರವಾಗಿ ಚರ್ಚಿಸಲು ಮಂಗಳವಾರ ಸಂಜೆ ಸ್ವಲ್ಪ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವಂತೆ ಸಂಸತ್ತಿನ ಎರಡೂ ಸದನಗಳ ಮುಖಂಡರನ್ನು ಒತ್ತಾಯಿಸುವುದಾಗಿಯೂ ಹೇಳಿದರು.</p>.<p>ಸಂಸತ್ತಿನ ಒಳಗೆ ಮತ್ತು ಹೊರಗೆ ಕೋವಿಡ್ ಸಾಂಕ್ರಾಮಿಕದ ಬಗ್ಗೆ ಚರ್ಚಿಸಬೇಕೆಂದು ಸಂಸದರನ್ನು ಒತ್ತಾಯಿಸಿದ ಮೋದಿಯವರು, ಈ ಸಂದರ್ಭದಲ್ಲಿ ದೇಶದ ಜನರ ಎಲ್ಲ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲು ಸರ್ಕಾರ ಸಿದ್ಧವಾಗಿದೆ’ ಎಂದು ಮೋದಿ ಸ್ಪಷ್ಪಪಡಿಸಿದರು.</p>.<p>’ಸಂಸತ್ ಅಧಿವೇಶನದಲ್ಲಿ ತೀಕ್ಷ್ಣ ಮತ್ತು ಕಠಿಣ ಪ್ರಶ್ನೆಗಳನ್ನು ಕೇಳಬೇಕೆಂದು ನಾನು ವಿನಂತಿಸುತ್ತೇನೆ. ಸೌಹಾರ್ದ ವಾತಾವರಣದಲ್ಲಿ ಸರ್ಕಾರ ಪ್ರತಿಕ್ರಿಯಿಸಲು ಕೂಡ ಅವಕಾಶ ನೀಡಬೇಕು’ ಎಂದು ಮೋದಿ ಹೇಳಿದರು.</p>.<p>’ಜನರಿಗೆ ಸತ್ಯ ತಿಳಿಸುವ ಮೂಲಕ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಇದು ಜನರ ವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯ ವೇಗವನ್ನು ಸುಧಾರಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>