<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆ ಒಬ್ಬನನ್ನು ಹತ್ಯೆ ಮಾಡಿದೆ. ಶರಣಾದ ಮತ್ತೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.</p>.<p>ಶ್ರೀನಗರದ ರಾಜೌರಿಕದಲ್ ಪ್ರದೇಶದಲ್ಲಿ ಉಗ್ರರ ಅಡಗುತಾಣ ನಿರ್ಮಿಸಲು ಲಷ್ಕರ್ ಎತೈಬಾ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ಸತರ್ಗುಂಡ್ನ ಆದೇಶ ಮಾಡಿದ್ದಾಗಿ ವಿಚಾರಣೆ ವೇಳೆ ಉಗ್ರ ಬಾಯ್ಬಿಟ್ಟಿದ್ದಾನೆ. ಪೊಲೀಸರಿಗೆ ಅಡಗುತಾಣವನ್ನು ತೋರಿಸಿಕೊಟ್ಟಿದ್ದಾನೆ.</p>.<p>ಆದರೆ ಪೊಲೀಸರು ಭೇಟಿ ನೀಡಿದಾಗ ಅಡಗುತಾಣ ಖಾಲಿಯಿರುವುದು ಕಂಡುಬಂದಿದೆ. ಕಟ್ಟಡಕ್ಕೆ ಸಂಬಂಧಿಸಿದ ಮಾಲೀಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p><a href="https://www.prajavani.net/india-news/china-installs-new-shelters-for-troops-near-lac-in-eastern-ladakh-870688.html" itemprop="url">ಪೂರ್ವ ಲಡಾಖ್ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ, ಆಧುನಿಕ ತಂಗುದಾಣಗಳ ಸ್ಥಾಪನೆ </a></p>.<p>ಉರಿ ಸೆಕ್ಟರ್ನಲ್ಲಿ ಮಂಗಳವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ. ಪುಲ್ವಾಮ ಪೊಲೀಸರು ಮತ್ತು 50 ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಜೋನ್ ಪೊಲೀಸ್ ಟ್ವೀಟ್ನಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆ ಒಬ್ಬನನ್ನು ಹತ್ಯೆ ಮಾಡಿದೆ. ಶರಣಾದ ಮತ್ತೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.</p>.<p>ಶ್ರೀನಗರದ ರಾಜೌರಿಕದಲ್ ಪ್ರದೇಶದಲ್ಲಿ ಉಗ್ರರ ಅಡಗುತಾಣ ನಿರ್ಮಿಸಲು ಲಷ್ಕರ್ ಎತೈಬಾ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ಸತರ್ಗುಂಡ್ನ ಆದೇಶ ಮಾಡಿದ್ದಾಗಿ ವಿಚಾರಣೆ ವೇಳೆ ಉಗ್ರ ಬಾಯ್ಬಿಟ್ಟಿದ್ದಾನೆ. ಪೊಲೀಸರಿಗೆ ಅಡಗುತಾಣವನ್ನು ತೋರಿಸಿಕೊಟ್ಟಿದ್ದಾನೆ.</p>.<p>ಆದರೆ ಪೊಲೀಸರು ಭೇಟಿ ನೀಡಿದಾಗ ಅಡಗುತಾಣ ಖಾಲಿಯಿರುವುದು ಕಂಡುಬಂದಿದೆ. ಕಟ್ಟಡಕ್ಕೆ ಸಂಬಂಧಿಸಿದ ಮಾಲೀಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p><a href="https://www.prajavani.net/india-news/china-installs-new-shelters-for-troops-near-lac-in-eastern-ladakh-870688.html" itemprop="url">ಪೂರ್ವ ಲಡಾಖ್ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ, ಆಧುನಿಕ ತಂಗುದಾಣಗಳ ಸ್ಥಾಪನೆ </a></p>.<p>ಉರಿ ಸೆಕ್ಟರ್ನಲ್ಲಿ ಮಂಗಳವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ. ಪುಲ್ವಾಮ ಪೊಲೀಸರು ಮತ್ತು 50 ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಜೋನ್ ಪೊಲೀಸ್ ಟ್ವೀಟ್ನಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>