<p><strong>ಭೋಪಾಲ್:</strong> ‘ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ರಚನಾತ್ಮಕ ಮಾತುಕತೆಯಿಂದ ನಡೆದಿದೆಯೋ ಹೊರತು ಚೌಕಾಶಿಯಿಂದ ಅಲ್ಲ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.</p>.<p>ಒಪ್ಪಂದದ ವಿಚಾರದಲ್ಲಿ ಅಮೆರಿಕದ ಮುಂದೆ ಭಾರತವು ಸಂಪೂರ್ಣ ಶರಣಾಗತಿಯಾಗಿದೆ ಎಂದು ಕಾಂಗ್ರೆಸ್ ಮಾಡಿದ ಆರೋಪವನ್ನು ಅವರು ತಳ್ಳಿ ಹಾಕಿದ್ದಾರೆ.</p>.<p>‘ಕೃಷಿ ಕ್ಷೇತ್ರಕ್ಕೆ ಈ ಒಪ್ಪಂದದಿಂದ ಸಂಪೂರ್ಣ ರಕ್ಷಣೆ ದೊರೆಯಲಿದ್ದು, ರೈತರು ಹಾಗೂ ದೇಶದ ಹಿತರಕ್ಷಣೆಯೇ ಸರ್ವೋಚ್ಛ ಗುರಿಯಾಗಿದೆ. ದೇಶದ ಕೃಷಿ ಉತ್ಪನ್ನಗಳನ್ನು ಒಪ್ಪಂದದಿಂದ ಹೊರಗಿಡಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>‘ಈ ಒಪ್ಪಂದದಿಂದ ಭಾರತದ ಯಾವುದೇ ಕೃಷಿ ಉತ್ಪನ್ನಕ್ಕೆ ಸಣ್ಣ ಮಟ್ಟದ ಹಾನಿಯೂ ಆಗುವುದಿಲ್ಲ. ದಶಕಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷವು, ಜಾಗತಿಕ ಮಾರುಕಟ್ಟೆಗಳ ಜೊತೆಗೆ ರೈತರನ್ನು ಜೋಡಿಸಲು ಸಂಪೂರ್ಣವಾಗಿ ವಿಫಲವಾಗಿದೆ, ಭಾರತದ ಆರ್ಥಿಕತೆಗೆ ಸ್ಥಿರತೆ ತರಲು ಸಾಧ್ಯವಾಗಿಲ್ಲ’ ಎಂದು ಚೌಹಾಣ್ ಆರೋಪಿಸಿದ್ದಾರೆ. </p>.<p>‘ಭಾರತ– ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ಭಾರತದ ನೀತಿಯು ರಾಜಿಯಲ್ಲ, ಬದ್ಧತೆಯಾಗಿದೆ ಎಂಬ ಸಂದೇಶವನ್ನು ಇಡೀ ವಿಶ್ವಕ್ಕೆ ರವಾನಿಸಿದೆ. ದೇಶದ ಹಿತಾಸಕ್ತಿ ಹಾಗೂ ಆತ್ಮವಿಶ್ವಾಸದಿಂದಲೇ ಈ ಒಪ್ಪಂದ ನಡೆದಿದೆ’ ಎಂದು ಒತ್ತಿ ಹೇಳಿದ್ದಾರೆ.</p>.<p>‘ಈ ಒಪ್ಪಂದವು ಭಾರತದ ರಾಜತಾಂತ್ರಿಕತೆ, ಅಭಿವೃದ್ಧಿ ಹಾಗೂ ಘನತೆಗೆ ವಿಶೇಷ ಉದಾಹರಣೆಯಾಗಿದೆ. ರಾಜತಾಂತ್ರಿಕತೆ ಎಂದರೆ ದೇಶವೇ ಮೊದಲು. ಅಭಿವೃದ್ಧಿಯೇ ದೇಶದ ಅಡಿಗಲ್ಲು. ರೈತರ ಘನತೆಯನ್ನು ಸಂಪೂರ್ಣವಾಗಿ ಕಾಪಾಡಲಾಗಿದೆ’ ಎಂದು ವಿವರಿಸಿದ್ದಾರೆ.</p>.<p><strong>ಕಾಂಗ್ರೆಸ್ ಕಿಡಿ</strong>: ‘ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದಿಂದ ಭಾರತಕ್ಕೆ ಯಾವುದೇ ಲಾಭವಿಲ್ಲ. ದೇಶದ ಸ್ವಾಭಿಮಾನ ಹಾಗೂ ಹಿತಾಸಕ್ತಿಯನ್ನು ಬದಿಗೊತ್ತಿ, ಅಮೆರಿಕದ ಮುಂದೆ ಶರಣಾಗತಿಯಾಗುವ ಮೂಲಕ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ‘ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ರಚನಾತ್ಮಕ ಮಾತುಕತೆಯಿಂದ ನಡೆದಿದೆಯೋ ಹೊರತು ಚೌಕಾಶಿಯಿಂದ ಅಲ್ಲ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.</p>.<p>ಒಪ್ಪಂದದ ವಿಚಾರದಲ್ಲಿ ಅಮೆರಿಕದ ಮುಂದೆ ಭಾರತವು ಸಂಪೂರ್ಣ ಶರಣಾಗತಿಯಾಗಿದೆ ಎಂದು ಕಾಂಗ್ರೆಸ್ ಮಾಡಿದ ಆರೋಪವನ್ನು ಅವರು ತಳ್ಳಿ ಹಾಕಿದ್ದಾರೆ.</p>.<p>‘ಕೃಷಿ ಕ್ಷೇತ್ರಕ್ಕೆ ಈ ಒಪ್ಪಂದದಿಂದ ಸಂಪೂರ್ಣ ರಕ್ಷಣೆ ದೊರೆಯಲಿದ್ದು, ರೈತರು ಹಾಗೂ ದೇಶದ ಹಿತರಕ್ಷಣೆಯೇ ಸರ್ವೋಚ್ಛ ಗುರಿಯಾಗಿದೆ. ದೇಶದ ಕೃಷಿ ಉತ್ಪನ್ನಗಳನ್ನು ಒಪ್ಪಂದದಿಂದ ಹೊರಗಿಡಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>‘ಈ ಒಪ್ಪಂದದಿಂದ ಭಾರತದ ಯಾವುದೇ ಕೃಷಿ ಉತ್ಪನ್ನಕ್ಕೆ ಸಣ್ಣ ಮಟ್ಟದ ಹಾನಿಯೂ ಆಗುವುದಿಲ್ಲ. ದಶಕಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷವು, ಜಾಗತಿಕ ಮಾರುಕಟ್ಟೆಗಳ ಜೊತೆಗೆ ರೈತರನ್ನು ಜೋಡಿಸಲು ಸಂಪೂರ್ಣವಾಗಿ ವಿಫಲವಾಗಿದೆ, ಭಾರತದ ಆರ್ಥಿಕತೆಗೆ ಸ್ಥಿರತೆ ತರಲು ಸಾಧ್ಯವಾಗಿಲ್ಲ’ ಎಂದು ಚೌಹಾಣ್ ಆರೋಪಿಸಿದ್ದಾರೆ. </p>.<p>‘ಭಾರತ– ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ಭಾರತದ ನೀತಿಯು ರಾಜಿಯಲ್ಲ, ಬದ್ಧತೆಯಾಗಿದೆ ಎಂಬ ಸಂದೇಶವನ್ನು ಇಡೀ ವಿಶ್ವಕ್ಕೆ ರವಾನಿಸಿದೆ. ದೇಶದ ಹಿತಾಸಕ್ತಿ ಹಾಗೂ ಆತ್ಮವಿಶ್ವಾಸದಿಂದಲೇ ಈ ಒಪ್ಪಂದ ನಡೆದಿದೆ’ ಎಂದು ಒತ್ತಿ ಹೇಳಿದ್ದಾರೆ.</p>.<p>‘ಈ ಒಪ್ಪಂದವು ಭಾರತದ ರಾಜತಾಂತ್ರಿಕತೆ, ಅಭಿವೃದ್ಧಿ ಹಾಗೂ ಘನತೆಗೆ ವಿಶೇಷ ಉದಾಹರಣೆಯಾಗಿದೆ. ರಾಜತಾಂತ್ರಿಕತೆ ಎಂದರೆ ದೇಶವೇ ಮೊದಲು. ಅಭಿವೃದ್ಧಿಯೇ ದೇಶದ ಅಡಿಗಲ್ಲು. ರೈತರ ಘನತೆಯನ್ನು ಸಂಪೂರ್ಣವಾಗಿ ಕಾಪಾಡಲಾಗಿದೆ’ ಎಂದು ವಿವರಿಸಿದ್ದಾರೆ.</p>.<p><strong>ಕಾಂಗ್ರೆಸ್ ಕಿಡಿ</strong>: ‘ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದಿಂದ ಭಾರತಕ್ಕೆ ಯಾವುದೇ ಲಾಭವಿಲ್ಲ. ದೇಶದ ಸ್ವಾಭಿಮಾನ ಹಾಗೂ ಹಿತಾಸಕ್ತಿಯನ್ನು ಬದಿಗೊತ್ತಿ, ಅಮೆರಿಕದ ಮುಂದೆ ಶರಣಾಗತಿಯಾಗುವ ಮೂಲಕ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>