<p><strong>ನವದೆಹಲಿ</strong>: ಭಾರತವು ಜಾಗತಿಕ ಮಟ್ಟದಲ್ಲಿ ಬಹುಪಕ್ಷೀಯ ಪಾಲುದಾರಿಕೆ ಹೊಂದುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್ ಮತ್ತು ಚೀನಾ ದೇಶಗಳ ಪ್ರವಾಸದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಮೆರಿಕ ಸುಂಕ ನೀತಿಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.</p>.<p>‘ಅಮೆರಿಕವು ಅವಿವೇಕ ಮತ್ತು ಅನ್ಯಾಯದ ಸುಂಕ ಯುದ್ಧ ಪ್ರಾರಂಭಿಸಿದ ನಂತರ ನೀವು ಪರ್ಯಾಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಹೊರಟಿರುವುದು ಎಲ್ಲ ಭಾರತೀಯರಂತೆ ನನಗೂ ಸಮಾಧಾನ ತಂದಿದೆ. ಹೊಸ ಉಪಕ್ರಮಗಳ ಲಾಭವನ್ನು ಭಾರತವು ಪಡೆಯುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. </p>.<p>ನೀವು ಅನುಸರಿಸುತ್ತಿರುವ ‘ಬಹು-ಜೋಡಣೆ’ ನೀತಿಯು ಮುಂದಿನ ದಿನಗಳಲ್ಲಿ ಸಮೃದ್ಧ ಲಾಭಾಂಶಗಳನ್ನು ನೀಡುವುದು ಖಚಿತ. ಜಗತ್ತು ಅದರ ಪ್ರಾಮುಖ್ಯ ಮತ್ತು ವಾಸ್ತವವನ್ನು ಅರ್ಥಮಾಡಿಕೊಳ್ಳಲು ಪ್ರಾರಂಭಿಸಿದೆ. ‘ಅಲಿಪ್ತ ನೀತಿ’ಯ ನಮ್ಮ ಹಿಂದಿನ ಪ್ರತಿಪಾದನೆಗೆ ಹೋಲಿಸಿದರೆ ಇದು ಬಹಳ ರಚನಾತ್ಮಕ ಮತ್ತು ಸಕಾರಾತ್ಮಕ ಸೂತ್ರ’ ಎಂದೂ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತವು ಜಾಗತಿಕ ಮಟ್ಟದಲ್ಲಿ ಬಹುಪಕ್ಷೀಯ ಪಾಲುದಾರಿಕೆ ಹೊಂದುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್ ಮತ್ತು ಚೀನಾ ದೇಶಗಳ ಪ್ರವಾಸದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಮೆರಿಕ ಸುಂಕ ನೀತಿಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.</p>.<p>‘ಅಮೆರಿಕವು ಅವಿವೇಕ ಮತ್ತು ಅನ್ಯಾಯದ ಸುಂಕ ಯುದ್ಧ ಪ್ರಾರಂಭಿಸಿದ ನಂತರ ನೀವು ಪರ್ಯಾಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಹೊರಟಿರುವುದು ಎಲ್ಲ ಭಾರತೀಯರಂತೆ ನನಗೂ ಸಮಾಧಾನ ತಂದಿದೆ. ಹೊಸ ಉಪಕ್ರಮಗಳ ಲಾಭವನ್ನು ಭಾರತವು ಪಡೆಯುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. </p>.<p>ನೀವು ಅನುಸರಿಸುತ್ತಿರುವ ‘ಬಹು-ಜೋಡಣೆ’ ನೀತಿಯು ಮುಂದಿನ ದಿನಗಳಲ್ಲಿ ಸಮೃದ್ಧ ಲಾಭಾಂಶಗಳನ್ನು ನೀಡುವುದು ಖಚಿತ. ಜಗತ್ತು ಅದರ ಪ್ರಾಮುಖ್ಯ ಮತ್ತು ವಾಸ್ತವವನ್ನು ಅರ್ಥಮಾಡಿಕೊಳ್ಳಲು ಪ್ರಾರಂಭಿಸಿದೆ. ‘ಅಲಿಪ್ತ ನೀತಿ’ಯ ನಮ್ಮ ಹಿಂದಿನ ಪ್ರತಿಪಾದನೆಗೆ ಹೋಲಿಸಿದರೆ ಇದು ಬಹಳ ರಚನಾತ್ಮಕ ಮತ್ತು ಸಕಾರಾತ್ಮಕ ಸೂತ್ರ’ ಎಂದೂ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>