ಈ ಕುರಿತು ಟ್ವೀಟಿಸಿರುವ ಅವರು, ‘ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಉತ್ತರ ಪ್ರದೇಶವು ಕಾಶ್ಮೀರ, ಬಂಗಾಳ ಅಥವಾ ಕೇರಳವಾಗಿ ಬದಲಾಗುತ್ತದೆ ಎಂದು ಮತದಾರರಿಗೆ ಯೋಗಿ ಹೇಳಿದ್ದಾರೆ. ಒಂದು ವೇಳೆ ಇದು ಸಂಭವಿಸಿದರೆ, ಉತ್ತರ ಪ್ರದೇಶವನ್ನು ಅದೃಷ್ಟವಂತ ರಾಜ್ಯವೆಂದೇ ಕರೆಯಬಹುದು. ಕಾಶ್ಮೀರದ ಸೌಂದರ್ಯ, ಬಂಗಾಳದ ಸಂಸ್ಕೃತಿ ಮತ್ತು ಕೇರಳದ ಶಿಕ್ಷಣವು ಯುಪಿಯನ್ನು ಅದ್ಭುತ ಸ್ಥಳವನ್ನಾಗಿ ಮಾಡುತ್ತವೆ’ ಎಂದು ಹೇಳಿದ್ದಾರೆ.