<p><strong>ಕಾನ್ಪುರ</strong>: ಉತ್ತರ ಪ್ರದೇಶದಲ್ಲಿ ಸ್ವತಂತ್ರ ಸಂಗ್ರಾಮ್ ಸೇನಾನಿ ವಿಶೇಷ ರೈಲಿನಲ್ಲಿ ₹1.4 ಕೋಟಿ ನಗದು ಇದ್ದ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಮಂಗಳವಾರ ದೆಹಲಿಯಿಂದ ಬಿಹಾರದ ಜಯನಗರಕ್ಕೆ ಬರುತ್ತಿದ್ದ ರೈಲಿನಲ್ಲಿ ಈ ಬ್ಯಾಗ್ ಪತ್ತೆಯಾಗಿದೆ’ ಎಂದು ರೈಲ್ವೆ ಇಲಾಖೆಯ ಉಪ ಮುಖ್ಯ ಸಂಚಾರ ವ್ಯವಸ್ಥಾಪಕ ಹಿಮಾಂಶು ಶೇಖರ್ ಮಾಹಿತಿ ನೀಡಿದ್ದಾರೆ.</p>.<p>‘ವಾರಸುದಾರರಿಲ್ಲದ ಕೆಂಪು ಬಣ್ಣದ ಟ್ರೋಲಿ ಬ್ಯಾಗ್ ಅನ್ನು ರೈಲಿನ ಆಹಾರ ಪೂರೈಕೆ ಸಿಬ್ಬಂದಿ ಗುರುತಿಸಿದ್ದಾರೆ. ಈ ಕುರಿತ ಮಾಹಿತಿಯನ್ನು ಅವರು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಈ ಬ್ಯಾಗ್ ಅನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರ (ಜಿಆರ್ಪಿ) ವಶಕ್ಕೆ ನೀಡಲಾಯಿತು. ಅವರು ರೈಲ್ವೆ ವಾಣಿಜ್ಯ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬ್ಯಾಗನ್ನು ತೆರೆದು ಪರಿಶೀಲಿಸಿದರು. ಬ್ಯಾಗಿನ ತುಂಬ ಕರೆನ್ಸಿ ನೋಟುಗಳೇ ಆವರಿಸಿದ್ದವು’ ಎಂದು ಅವರು ಹೇಳಿದರು.</p>.<p>‘ಈ ಬ್ಯಾಗಿನ ವಾರಸುದಾರರ ಬಗ್ಗೆ ಮಾಹಿತಿ ಲಭ್ಯವಿಲ್ಲ. ಅಲ್ಲದೆ ಯಾರೊಬ್ಬರು ಬ್ಯಾಗ್ ಕಾಣೆಯಾಗಿರುವ ಬಗ್ಗೆ ದೂರು ನೀಡಿಲ್ಲ’ ಎಂದು ಅವರು ತಿಳಿಸಿದರು. ಈ ಬಗ್ಗೆ ತನಿಖೆ ನಡೆಸುವಂತೆ ಐಟಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ</strong>: ಉತ್ತರ ಪ್ರದೇಶದಲ್ಲಿ ಸ್ವತಂತ್ರ ಸಂಗ್ರಾಮ್ ಸೇನಾನಿ ವಿಶೇಷ ರೈಲಿನಲ್ಲಿ ₹1.4 ಕೋಟಿ ನಗದು ಇದ್ದ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಮಂಗಳವಾರ ದೆಹಲಿಯಿಂದ ಬಿಹಾರದ ಜಯನಗರಕ್ಕೆ ಬರುತ್ತಿದ್ದ ರೈಲಿನಲ್ಲಿ ಈ ಬ್ಯಾಗ್ ಪತ್ತೆಯಾಗಿದೆ’ ಎಂದು ರೈಲ್ವೆ ಇಲಾಖೆಯ ಉಪ ಮುಖ್ಯ ಸಂಚಾರ ವ್ಯವಸ್ಥಾಪಕ ಹಿಮಾಂಶು ಶೇಖರ್ ಮಾಹಿತಿ ನೀಡಿದ್ದಾರೆ.</p>.<p>‘ವಾರಸುದಾರರಿಲ್ಲದ ಕೆಂಪು ಬಣ್ಣದ ಟ್ರೋಲಿ ಬ್ಯಾಗ್ ಅನ್ನು ರೈಲಿನ ಆಹಾರ ಪೂರೈಕೆ ಸಿಬ್ಬಂದಿ ಗುರುತಿಸಿದ್ದಾರೆ. ಈ ಕುರಿತ ಮಾಹಿತಿಯನ್ನು ಅವರು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಈ ಬ್ಯಾಗ್ ಅನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರ (ಜಿಆರ್ಪಿ) ವಶಕ್ಕೆ ನೀಡಲಾಯಿತು. ಅವರು ರೈಲ್ವೆ ವಾಣಿಜ್ಯ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬ್ಯಾಗನ್ನು ತೆರೆದು ಪರಿಶೀಲಿಸಿದರು. ಬ್ಯಾಗಿನ ತುಂಬ ಕರೆನ್ಸಿ ನೋಟುಗಳೇ ಆವರಿಸಿದ್ದವು’ ಎಂದು ಅವರು ಹೇಳಿದರು.</p>.<p>‘ಈ ಬ್ಯಾಗಿನ ವಾರಸುದಾರರ ಬಗ್ಗೆ ಮಾಹಿತಿ ಲಭ್ಯವಿಲ್ಲ. ಅಲ್ಲದೆ ಯಾರೊಬ್ಬರು ಬ್ಯಾಗ್ ಕಾಣೆಯಾಗಿರುವ ಬಗ್ಗೆ ದೂರು ನೀಡಿಲ್ಲ’ ಎಂದು ಅವರು ತಿಳಿಸಿದರು. ಈ ಬಗ್ಗೆ ತನಿಖೆ ನಡೆಸುವಂತೆ ಐಟಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>