<p><strong>ಲಖನೌ:</strong> ಠಾಕೂರ್ ಸಮುದಾಯಕ್ಕೆ ಸೇರಿದ ಬಿಜೆಪಿಯ ಶಾಸಕರು ಸಭೆ ಸೇರಿ, ‘ಕುಟುಂಬ ಪರಿವಾರ’ ಎಂಬ ವಾಟ್ಸ್ಆ್ಯಪ್ ಗುಂಪು ರಚಿಸಿರುವುದು ಉತ್ತರ ಪ್ರದೇಶದ ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.</p><p>ಕೆಲ ದಿನಗಳ ಹಿಂದೆ ನಡೆದ ಸಭೆಯಲ್ಲಿ ಸಮಾಜವಾದಿ ಪಕ್ಷದ ಬಂಡಾಯ ಶಾಸಕರಾದ ರಾಕೇಶ್ ಪ್ರತಾಪ್ ಸಿಂಗ್ ಮತ್ತು ಅಭಯ್ ಸಿಂಗ್ ಹಾಗೂ ಬಿಎಸ್ಪಿಯ ಉಮಾ ಶಂಕರ್ ಸಿಂಗ್ ಅವರು ಪಾಲ್ಗೊಂಡಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.</p><p>ಬಿಜೆಪಿ ಶಾಸಕರಾದ ಠಾಕೂರ್ ರಾಮವೀರ್ ಸಿಂಗ್ ಮತ್ತು ಜೈಪಾಲ್ ಸಿಂಗ್ ಅವರು ಸಭೆ ಆಯೋಜಿಸಿದ್ದರು. ಉತ್ತರ ಪ್ರದೇಶ ವಿಧಾಸಭೆಯಲ್ಲಿ ಠಾಕೂರ್ ಸಮುದಾಯದ 40 ಶಾಸಕರಿದ್ದು, ಅಷ್ಟೂ ಜನರೂ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಮಾತುಕತೆ ಮತ್ತು ಅಭಿಪ್ರಾಯ ವಿನಿಮಯಕ್ಕಾಗಿ ವಾಟ್ಸ್ಆ್ಯಪ್ ಗುಂಪನ್ನೂ ರಚಿಸಲಾಗಿದೆ ಎಂದು ಅವು ತಿಳಿಸಿವೆ.</p><p>ಸಭೆಯಲ್ಲಿ ಭಾಗಿಯಾಗಿದ್ದ ಶಾಸಕರೊಬ್ಬರು, ‘ಇದೊಂದು ಔತಣಕೂಟವಾಗಿದ್ದರೂ, ರಾಜಕೀಯವಾಗಿಯೂ ಮಹತ್ವವನ್ನು ಪಡೆದಿದೆ’ ಎಂದು ಹೇಳಿದರು. ‘</p><p>2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಠಾಕೂರ್ ಸಮುದಾಯದ ಹಲವು ನಾಯಕರಿಗೆ ಟಿಕೆಟ್ ನಿರಾಕರಿಸಿ ಇತರೆ ಜಾತಿಯ ನಾಯಕರಿಗೆ ಟಿಕೆಟ್ ನೀಡಿತ್ತು. ಠಾಕೂರ್ ಸಮುದಾಯದ ಸದಸ್ಯರು ಈ ಬಗ್ಗೆ ಹಲವು ಬಾರಿ ಸಭೆ ಕರೆದು ಅಸಮಾಧಾನ ಹೊರಹಾಕಿದ್ದರು. ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಒತ್ತಡ ತರುವ ಉದ್ದೇಶದಿಂದ ಈ ಬಾರಿ ಸಭೆ ಕರೆದು ವಾಟ್ಸ್ಆ್ಯಪ್ ಗುಂಪು ರಚಿಸಲಾಗಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಠಾಕೂರ್ ಸಮುದಾಯಕ್ಕೆ ಸೇರಿದ ಬಿಜೆಪಿಯ ಶಾಸಕರು ಸಭೆ ಸೇರಿ, ‘ಕುಟುಂಬ ಪರಿವಾರ’ ಎಂಬ ವಾಟ್ಸ್ಆ್ಯಪ್ ಗುಂಪು ರಚಿಸಿರುವುದು ಉತ್ತರ ಪ್ರದೇಶದ ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.</p><p>ಕೆಲ ದಿನಗಳ ಹಿಂದೆ ನಡೆದ ಸಭೆಯಲ್ಲಿ ಸಮಾಜವಾದಿ ಪಕ್ಷದ ಬಂಡಾಯ ಶಾಸಕರಾದ ರಾಕೇಶ್ ಪ್ರತಾಪ್ ಸಿಂಗ್ ಮತ್ತು ಅಭಯ್ ಸಿಂಗ್ ಹಾಗೂ ಬಿಎಸ್ಪಿಯ ಉಮಾ ಶಂಕರ್ ಸಿಂಗ್ ಅವರು ಪಾಲ್ಗೊಂಡಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.</p><p>ಬಿಜೆಪಿ ಶಾಸಕರಾದ ಠಾಕೂರ್ ರಾಮವೀರ್ ಸಿಂಗ್ ಮತ್ತು ಜೈಪಾಲ್ ಸಿಂಗ್ ಅವರು ಸಭೆ ಆಯೋಜಿಸಿದ್ದರು. ಉತ್ತರ ಪ್ರದೇಶ ವಿಧಾಸಭೆಯಲ್ಲಿ ಠಾಕೂರ್ ಸಮುದಾಯದ 40 ಶಾಸಕರಿದ್ದು, ಅಷ್ಟೂ ಜನರೂ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಮಾತುಕತೆ ಮತ್ತು ಅಭಿಪ್ರಾಯ ವಿನಿಮಯಕ್ಕಾಗಿ ವಾಟ್ಸ್ಆ್ಯಪ್ ಗುಂಪನ್ನೂ ರಚಿಸಲಾಗಿದೆ ಎಂದು ಅವು ತಿಳಿಸಿವೆ.</p><p>ಸಭೆಯಲ್ಲಿ ಭಾಗಿಯಾಗಿದ್ದ ಶಾಸಕರೊಬ್ಬರು, ‘ಇದೊಂದು ಔತಣಕೂಟವಾಗಿದ್ದರೂ, ರಾಜಕೀಯವಾಗಿಯೂ ಮಹತ್ವವನ್ನು ಪಡೆದಿದೆ’ ಎಂದು ಹೇಳಿದರು. ‘</p><p>2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಠಾಕೂರ್ ಸಮುದಾಯದ ಹಲವು ನಾಯಕರಿಗೆ ಟಿಕೆಟ್ ನಿರಾಕರಿಸಿ ಇತರೆ ಜಾತಿಯ ನಾಯಕರಿಗೆ ಟಿಕೆಟ್ ನೀಡಿತ್ತು. ಠಾಕೂರ್ ಸಮುದಾಯದ ಸದಸ್ಯರು ಈ ಬಗ್ಗೆ ಹಲವು ಬಾರಿ ಸಭೆ ಕರೆದು ಅಸಮಾಧಾನ ಹೊರಹಾಕಿದ್ದರು. ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಒತ್ತಡ ತರುವ ಉದ್ದೇಶದಿಂದ ಈ ಬಾರಿ ಸಭೆ ಕರೆದು ವಾಟ್ಸ್ಆ್ಯಪ್ ಗುಂಪು ರಚಿಸಲಾಗಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>