<p><strong>ಲಖನೌ:</strong> ಕೋವಿಡ್ 19 ಸಾಂಕ್ರಾಮಿಕರ ರೋಗದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಸಿಬಿಎಸ್ಇ ಮತ್ತು ಐಸಿಎಸ್ಇ ಶಿಕ್ಷಣ ಪದ್ಧತಿಯ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರವೂ ರಾಜ್ಯ ಪರೀಕ್ಷಾ ಮಂಡಳಿ ನಡೆಸುವ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪ್ರೌಢಶಿಕ್ಷಣ ಇಲಾಖೆಯ ಉಸ್ತುವಾರಿಯೂ ಆಗಿರುವ, ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಜರಿದ್ದರು.</p>.<p>ವಾರ್ತಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನವನೀತ್ ಸೆಹಗಲ್ ಅವರು, ‘ರಾಜ್ಯ ಸರ್ಕಾರ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ‘ ಎಂದು ಖಚಿತಪಡಿಸಿದರು. ರಾಜ್ಯದಲ್ಲಿ ಸುಮಾರು 26 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಣಿಯಾಗಿದ್ದರು.</p>.<p>ರಾಜ್ಯ ಸರ್ಕಾರ ಕಳೆದ ತಿಂಗಳು 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು. ಸುಮಾರು 30 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇಷ್ಟೂ ಮಂದಿ ವಿದ್ಯಾರ್ಥಿಗಳನ್ನು 11ನೇ ತರಗತಿಗೆ ಉತ್ತೀರ್ಣ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕೋವಿಡ್ 19 ಸಾಂಕ್ರಾಮಿಕರ ರೋಗದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಸಿಬಿಎಸ್ಇ ಮತ್ತು ಐಸಿಎಸ್ಇ ಶಿಕ್ಷಣ ಪದ್ಧತಿಯ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರವೂ ರಾಜ್ಯ ಪರೀಕ್ಷಾ ಮಂಡಳಿ ನಡೆಸುವ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪ್ರೌಢಶಿಕ್ಷಣ ಇಲಾಖೆಯ ಉಸ್ತುವಾರಿಯೂ ಆಗಿರುವ, ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಜರಿದ್ದರು.</p>.<p>ವಾರ್ತಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನವನೀತ್ ಸೆಹಗಲ್ ಅವರು, ‘ರಾಜ್ಯ ಸರ್ಕಾರ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ‘ ಎಂದು ಖಚಿತಪಡಿಸಿದರು. ರಾಜ್ಯದಲ್ಲಿ ಸುಮಾರು 26 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಣಿಯಾಗಿದ್ದರು.</p>.<p>ರಾಜ್ಯ ಸರ್ಕಾರ ಕಳೆದ ತಿಂಗಳು 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು. ಸುಮಾರು 30 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇಷ್ಟೂ ಮಂದಿ ವಿದ್ಯಾರ್ಥಿಗಳನ್ನು 11ನೇ ತರಗತಿಗೆ ಉತ್ತೀರ್ಣ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>