<p><strong>ಬಿಜ್ನೋರ್ (ಉತ್ತರ ಪ್ರದೇಶ):</strong> ಮನೆಯವರ ಬಳಿ ಹಣ ಕೇಳಲು ನಿರಾಕರಿಸಿದ್ದಕ್ಕಾಗಿ ಬಾಲಕನೊಬ್ಬನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಹುಸೇನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೀಪಕ್ ಎಂಬುವರ 12 ವರ್ಷದ ಮಗ ಆಯುಷ್ ಮೇ 6ರ (ಮಂಗಳವಾರ) ಸಂಜೆ ಮನೆಯಿಂದ ಹೊರಗೆ ಹೋಗಿದ್ದವನು ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಆಯುಷ್ ಪೋಷಕರು ದೂರು ನೀಡಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಝಾ ತಿಳಿಸಿದ್ದಾರೆ. </p><p>ಆದೇ ದಿನ ದೀಪಕ್ ಅವರ ಸಂಬಂಧಿಕರೊಬ್ಬರಿಗೆ ಇನ್ಸ್ಟಾಗ್ರಾಮ್ನಲ್ಲಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟು ಸಂದೇಶವನ್ನು ಕಳುಹಿಸಲಾಗಿತ್ತು. ಇನ್ಸ್ಟಾಗ್ರಾಮ್ ಐಡಿ ಆಧರಿಸಿ ತನಿಖೆ ನಡೆಸಿದ ಪೊಲೀಸರು, ಅದೇ ಗ್ರಾಮದ ಐವರು ಆರೋಪಿಗಳಾದ ಅನಿಕೇತ್, ಅನ್ಮೋಲ್, ಆಕಾಶ್, ನಕುಲ್ ಮತ್ತು ಉಮೇಶ್ನನ್ನು ಬಂಧಿಸಿದ್ದಾರೆ. ಎಲ್ಲರೂ ಅಪ್ರಾಪ್ತ ವಯಸ್ಕರು ಎಂದು ಅಭಿಷೇಕ್ ವಿವರಿಸಿದ್ದಾರೆ. </p><p>ಕಾಡಿನಲ್ಲಿ ಅಡಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಅನಿಕೇತ್ ಪೊಲೀಸರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಪೊಲೀಸರು ಅನಿಕೇತ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಅಭಿಷೇಕ್ ತಿಳಿಸಿದ್ದಾರೆ. </p><p>ಮನೆಯವರ ಬಳಿ ಹಣ ಕೇಳುವಂತೆ ಆಯುಷ್ಗೆ ಅನಿಕೇತ್ ಒತ್ತಾಯಿಸಿದ್ದ. ಆದರೆ, ಹಣ ಕೇಳಲು ಆಯುಷ್ ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅನಿಕೇತ್, ಸ್ನೇಹಿತರೊಂದಿಗೆ ಸೇರಿ ಆತನನ್ನು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಹೂಳಲು ಯೋಜನೆ ರೂಪಿಸಿದ್ದ ಎಂದು ಅವರು ಹೇಳಿದ್ದಾರೆ.</p><p> ಅನಿಕೇತ್, ಆಯುಷ್ನ ಆಪ್ತ ಸ್ನೇಹಿತನಾಗಿದ್ದು, ಮತ್ತೊಬ್ಬ ಆರೋಪಿ ಆತನ ಸಂಬಂಧಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜ್ನೋರ್ (ಉತ್ತರ ಪ್ರದೇಶ):</strong> ಮನೆಯವರ ಬಳಿ ಹಣ ಕೇಳಲು ನಿರಾಕರಿಸಿದ್ದಕ್ಕಾಗಿ ಬಾಲಕನೊಬ್ಬನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಹುಸೇನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೀಪಕ್ ಎಂಬುವರ 12 ವರ್ಷದ ಮಗ ಆಯುಷ್ ಮೇ 6ರ (ಮಂಗಳವಾರ) ಸಂಜೆ ಮನೆಯಿಂದ ಹೊರಗೆ ಹೋಗಿದ್ದವನು ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಆಯುಷ್ ಪೋಷಕರು ದೂರು ನೀಡಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಝಾ ತಿಳಿಸಿದ್ದಾರೆ. </p><p>ಆದೇ ದಿನ ದೀಪಕ್ ಅವರ ಸಂಬಂಧಿಕರೊಬ್ಬರಿಗೆ ಇನ್ಸ್ಟಾಗ್ರಾಮ್ನಲ್ಲಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟು ಸಂದೇಶವನ್ನು ಕಳುಹಿಸಲಾಗಿತ್ತು. ಇನ್ಸ್ಟಾಗ್ರಾಮ್ ಐಡಿ ಆಧರಿಸಿ ತನಿಖೆ ನಡೆಸಿದ ಪೊಲೀಸರು, ಅದೇ ಗ್ರಾಮದ ಐವರು ಆರೋಪಿಗಳಾದ ಅನಿಕೇತ್, ಅನ್ಮೋಲ್, ಆಕಾಶ್, ನಕುಲ್ ಮತ್ತು ಉಮೇಶ್ನನ್ನು ಬಂಧಿಸಿದ್ದಾರೆ. ಎಲ್ಲರೂ ಅಪ್ರಾಪ್ತ ವಯಸ್ಕರು ಎಂದು ಅಭಿಷೇಕ್ ವಿವರಿಸಿದ್ದಾರೆ. </p><p>ಕಾಡಿನಲ್ಲಿ ಅಡಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಅನಿಕೇತ್ ಪೊಲೀಸರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಪೊಲೀಸರು ಅನಿಕೇತ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಅಭಿಷೇಕ್ ತಿಳಿಸಿದ್ದಾರೆ. </p><p>ಮನೆಯವರ ಬಳಿ ಹಣ ಕೇಳುವಂತೆ ಆಯುಷ್ಗೆ ಅನಿಕೇತ್ ಒತ್ತಾಯಿಸಿದ್ದ. ಆದರೆ, ಹಣ ಕೇಳಲು ಆಯುಷ್ ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅನಿಕೇತ್, ಸ್ನೇಹಿತರೊಂದಿಗೆ ಸೇರಿ ಆತನನ್ನು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಹೂಳಲು ಯೋಜನೆ ರೂಪಿಸಿದ್ದ ಎಂದು ಅವರು ಹೇಳಿದ್ದಾರೆ.</p><p> ಅನಿಕೇತ್, ಆಯುಷ್ನ ಆಪ್ತ ಸ್ನೇಹಿತನಾಗಿದ್ದು, ಮತ್ತೊಬ್ಬ ಆರೋಪಿ ಆತನ ಸಂಬಂಧಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>