<p><strong>ಮಥುರಾ</strong>: ಮದುವೆ ಸಮಾರಂಭದಲ್ಲಿ ಪ್ರಿಯಕರನೊಬ್ಬ ವಧುವಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.</p>.<p>ಬೇರೆ ಪುರುಷನೊಂದಿಗೆ ವಿವಾಹವಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಆಕೆಯ ಪ್ರಿಯಕರ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.</p>.<p>ಈ ಅಮಾನವೀಯ ಘಟನೆಯು ಮಥುರಾದ ಮುಬಾರಿಕ್ಪುರ ಗ್ರಾಮದ ನೌಜಿಲ್ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<p>ಹಿಂದೂ ಸಂಪ್ರದಾಯದ ಪ್ರಕಾರ ನಡೆದ 'ಜೈ ಮಾಲಾ' ಕಾರ್ಯಕ್ರಮ ಮುಗಿದ ಕೂಡಲೇ ಕಾಜಲ್ರನ್ನು(ವಧು) ಗುಂಡಿಕ್ಕಿ ಕೊಲ್ಲಲಾಗಿದೆ. ಆರೋಪಿಯು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದನು. ಆಕೆಯು ಬೇರೊಬ್ಬ ಪುರುಷನೊಂದಿಗೆ ವಿವಾಹವಾಗುವುದು ಆತನಿಗೆ ಇಷ್ಟವಿರಲಿಲ್ಲ ಎಂದು ವರದಿಯಾಗಿದೆ.</p>.<p>ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತ್ರಸ್ತೆಯ ತಂದೆ ಖುಬಿ ರಾಮ್ ಪ್ರಜಾಪತಿ, 'ಜೈ ಮಾಲಾ' ಕಾರ್ಯಕ್ರಮ ಮುಗಿದ ನಂತರ ನನ್ನ ಮಗಳು ರಿಫ್ರೆಶ್ ಆಗಲು ಕೋಣೆಗೆ ಹೋಗಿದ್ದಳು. ಅಲ್ಲಿಗೆ ನುಗ್ಗಿದ ಅಪರಿಚಿತ ವ್ಯಕ್ತಿ ಆಕೆಯನ್ನು ಗುಂಡಿಕ್ಕಿ ಕೊಂದಿದ್ದಾನೆ’ ಎಂದು ತಿಳಿಸಿದ್ದಾರೆ.</p>.<p>ಈ ಘಟನೆ ನಡೆದ ನಂತರ ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ.</p>.<p>‘ನಾವು ದೂರು ದಾಖಲಿಸಿಕೊಂಡಿದ್ದೇವೆ. ಎಲ್ಲಾ ದಿಕ್ಕುಗಳಿಂದ ತನಿಖೆ ನಡೆಸುತ್ತಿದ್ದೇವೆ’ ಎಂದು ಮಥುರಾ ಎಸ್ಪಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಥುರಾ</strong>: ಮದುವೆ ಸಮಾರಂಭದಲ್ಲಿ ಪ್ರಿಯಕರನೊಬ್ಬ ವಧುವಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.</p>.<p>ಬೇರೆ ಪುರುಷನೊಂದಿಗೆ ವಿವಾಹವಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಆಕೆಯ ಪ್ರಿಯಕರ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.</p>.<p>ಈ ಅಮಾನವೀಯ ಘಟನೆಯು ಮಥುರಾದ ಮುಬಾರಿಕ್ಪುರ ಗ್ರಾಮದ ನೌಜಿಲ್ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<p>ಹಿಂದೂ ಸಂಪ್ರದಾಯದ ಪ್ರಕಾರ ನಡೆದ 'ಜೈ ಮಾಲಾ' ಕಾರ್ಯಕ್ರಮ ಮುಗಿದ ಕೂಡಲೇ ಕಾಜಲ್ರನ್ನು(ವಧು) ಗುಂಡಿಕ್ಕಿ ಕೊಲ್ಲಲಾಗಿದೆ. ಆರೋಪಿಯು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದನು. ಆಕೆಯು ಬೇರೊಬ್ಬ ಪುರುಷನೊಂದಿಗೆ ವಿವಾಹವಾಗುವುದು ಆತನಿಗೆ ಇಷ್ಟವಿರಲಿಲ್ಲ ಎಂದು ವರದಿಯಾಗಿದೆ.</p>.<p>ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತ್ರಸ್ತೆಯ ತಂದೆ ಖುಬಿ ರಾಮ್ ಪ್ರಜಾಪತಿ, 'ಜೈ ಮಾಲಾ' ಕಾರ್ಯಕ್ರಮ ಮುಗಿದ ನಂತರ ನನ್ನ ಮಗಳು ರಿಫ್ರೆಶ್ ಆಗಲು ಕೋಣೆಗೆ ಹೋಗಿದ್ದಳು. ಅಲ್ಲಿಗೆ ನುಗ್ಗಿದ ಅಪರಿಚಿತ ವ್ಯಕ್ತಿ ಆಕೆಯನ್ನು ಗುಂಡಿಕ್ಕಿ ಕೊಂದಿದ್ದಾನೆ’ ಎಂದು ತಿಳಿಸಿದ್ದಾರೆ.</p>.<p>ಈ ಘಟನೆ ನಡೆದ ನಂತರ ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ.</p>.<p>‘ನಾವು ದೂರು ದಾಖಲಿಸಿಕೊಂಡಿದ್ದೇವೆ. ಎಲ್ಲಾ ದಿಕ್ಕುಗಳಿಂದ ತನಿಖೆ ನಡೆಸುತ್ತಿದ್ದೇವೆ’ ಎಂದು ಮಥುರಾ ಎಸ್ಪಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>