ಇದಕ್ಕೆ ಸ್ಪಷ್ಟನೆ ನೀಡಿದ ಕಾಲೇಜಿನ ಹಿರಿಯ ಅಧಿಕಾರಿ, ಕಳೆದ ಅಕ್ಟೋಬರ್ನಲ್ಲೇ ವಸ್ತ್ರ ಸಂಹಿತೆ ಜಾರಿಗೆ ತಂದಿದ್ದೇವೆ. ನಮ್ಮ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿದ್ದು, ಇದು ಅವರಿಗೆಲ್ಲರಿಗೂ ತಿಳಿದ ವಿಚಾರ. ಯಾವುದೇ ಕಾರಣಕ್ಕೂ ನಿಯಮ ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.
ಕಾಲೇಜಿನ ಗೇಟ್ ಬಳಿಯಿರುವ ಕೊಠಡಿಯಲ್ಲಿ ವಿದ್ಯಾರ್ಥಿನಿಯರು ಉಡುಪು ಬದಲಾಯಿಸಬಹುದಾಗಿದೆ ಎಂದೂ ಹೇಳಿದ್ದಾರೆ.
ವಿದ್ಯಾರ್ಥಿನಿಯರ ಧರಣಿಗೆ ಸಮಾಜವಾದಿ ಪಕ್ಷದ (ಎಸ್ಪಿ) ಸ್ಥಳೀಯ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಬುರ್ಖಾ ಧರಿಸಿದ ಹೆಣ್ಣುಮಕ್ಕಳ ತರಗತಿ ಪ್ರವೇಶವನ್ನು ನಿರಾಕರಿಸಿದರೆ ಪ್ರತಿಭಟಿಸುವುದಾಗಿ ಎಸ್ಪಿ ಮಾಜಿ ಶಾಸಕ ಜಮೀರುಲ್ಲಾ ಎಚ್ಚರಿಸಿದ್ದಾರೆ.