ಲಖಿಂಪುರ ಖೇರಿ ಹಿಂಸಾಚಾರ ಪೂರ್ವಯೋಜಿತ ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಹೇಳಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಜಾಗರೂಕತೆಯಿಂದ ವಾಹನ ಚಾಲನೆ), 338 (ನಿರ್ಲಕ್ಷ್ಯದಿಂದ ಗಂಭೀರ ಗಾಯಗೊಳ್ಳಲು ಕಾರಣವಾಗುವುದು) ಹಾಗೂ 340 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರ ಬದಲಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ (ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಬೇಕು ಎಂದು ಎಸ್ಐಟಿ ವಿನಂತಿ ಮಾಡಿತ್ತು.