ಸಮಾಜವಾದಿ ಪಕ್ಷವು ಈ ಬಾರಿ 150ರಷ್ಟು ಸ್ಥಾನ ಗಳಿಸಲಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಆಡಳಿತ ವಿರೋಧಿ ಅಲೆಯೇ ಈ ಪಕ್ಷದ ಸಂಖ್ಯಾಬಲ ಹೆಚ್ಚಾಗಲು ಕಾರಣ. 2014ರ ಚುನಾವಣೆಯಲ್ಲಿ ಬಿಜೆಪಿ ಪರವಾಗಿದ್ದ ಯಾದವೇತರ ಒಬಿಸಿ ಮತದಾರರನ್ನು ತಲುಪುವಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಯಶಸ್ವಿಯಾಗಿದ್ದಾರೆ. ಅಲ್ಲದೆ, ಬಿಜೆಪಿ, ಕಾಂಗ್ರೆಸ್ ಹಾಗೂ ಬಿಎಸ್ಪಿಗಳ ಪ್ರಭಾವಿ ನಾಯಕರನ್ನು ಎಸ್ಪಿ ಈ ಬಾರಿ ತನ್ನತ್ತ ಸೆಳೆದುಕೊಂಡಿದೆ ಎಂದು ವರದಿಗಳು ಉಲ್ಲೇಖಿಸಿವೆ.