<p><strong>ಲಖನೌ</strong>: ನಿರಂತರ ಮಳೆಯಿಂದಾಗಿ ಉತ್ತರ ಪ್ರದೇಶದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಭಾನುವಾರ ಮತ್ತು ಸೋಮವಾರ 11 ಮಂದಿ ಮೃತಪಟ್ಟಿದ್ದಾರೆ. </p><p>ಸೀತಾಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ ಸೋಮವಾರ ಮನೆಯೊಂದರ ಗೋಡೆ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 9 ಮಂದಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾಗಿದ್ದಾರೆ. </p><p>ಗಂಗಾ, ಯಮುನಾ, ಬೆಟ್ವಾ ಸೇರಿದಂತೆ ಪ್ರಮುಖ ನದಿಗಳು ಹಲವೆಡೆ ಅಪಾಯದ ಮಟ್ಟ ಮೀರಿ ಹರಿಯತ್ತಿದ್ದು, ಪ್ರವಾಹದ ಭೀತಿ ಹೆಚ್ಚಿಸಿದೆ.</p><p>ಭಾನುವಾರ ರಾಜ್ಯದಲ್ಲಿ 1.42 ಸೆ.ಮೀ ಮಳೆಯಾಗಿದ್ದು, 24 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಲಖನೌ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. </p><p>ವಾರಾಣಸಿ, ಪ್ರಯಾಗರಾಜ್ ಹಾಗೂ ಇತರೆ ಪ್ರದೇಶಗಳಲ್ಲಿ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ.</p><p>ವಾರಾಣಸಿಯಲ್ಲಿರುವ ನಮೋ ಘಾಟ್ ಜಲಾವೃತಗೊಂಡಿರುವುದರಿಂದ, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಣಿಕರ್ಣಿಕಾ ಘಾಟ್ ಕೂಡ ಜಲಾವೃತವಾಗಿದ್ದರಿಂದ ಶವಸಂಸ್ಕಾರಕ್ಕೆ ಅಡಚಣೆಯಾಗಿದೆ. </p><p>ಆಗ್ರಾ, ಚಿತ್ರಕೂಟ, ಲಖಿಂಪುರ ಖೇರಿ, ಬಲಿಯಾ, ಘಾಜಿಯಾಪುರ ಸೇರಿದಂತೆ 17 ಜಿಲ್ಲೆಗಳ ಒಟ್ಟು 402 ಗ್ರಾಮಗಳು ಪ್ರವಾಹದಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರವಾಹದ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 500 ಹಡಗು, ಮೋಟರ್ ಹಡಗುಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ರವಾನಿಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ನಿರಂತರ ಮಳೆಯಿಂದಾಗಿ ಉತ್ತರ ಪ್ರದೇಶದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಭಾನುವಾರ ಮತ್ತು ಸೋಮವಾರ 11 ಮಂದಿ ಮೃತಪಟ್ಟಿದ್ದಾರೆ. </p><p>ಸೀತಾಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ ಸೋಮವಾರ ಮನೆಯೊಂದರ ಗೋಡೆ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 9 ಮಂದಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾಗಿದ್ದಾರೆ. </p><p>ಗಂಗಾ, ಯಮುನಾ, ಬೆಟ್ವಾ ಸೇರಿದಂತೆ ಪ್ರಮುಖ ನದಿಗಳು ಹಲವೆಡೆ ಅಪಾಯದ ಮಟ್ಟ ಮೀರಿ ಹರಿಯತ್ತಿದ್ದು, ಪ್ರವಾಹದ ಭೀತಿ ಹೆಚ್ಚಿಸಿದೆ.</p><p>ಭಾನುವಾರ ರಾಜ್ಯದಲ್ಲಿ 1.42 ಸೆ.ಮೀ ಮಳೆಯಾಗಿದ್ದು, 24 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಲಖನೌ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. </p><p>ವಾರಾಣಸಿ, ಪ್ರಯಾಗರಾಜ್ ಹಾಗೂ ಇತರೆ ಪ್ರದೇಶಗಳಲ್ಲಿ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ.</p><p>ವಾರಾಣಸಿಯಲ್ಲಿರುವ ನಮೋ ಘಾಟ್ ಜಲಾವೃತಗೊಂಡಿರುವುದರಿಂದ, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಣಿಕರ್ಣಿಕಾ ಘಾಟ್ ಕೂಡ ಜಲಾವೃತವಾಗಿದ್ದರಿಂದ ಶವಸಂಸ್ಕಾರಕ್ಕೆ ಅಡಚಣೆಯಾಗಿದೆ. </p><p>ಆಗ್ರಾ, ಚಿತ್ರಕೂಟ, ಲಖಿಂಪುರ ಖೇರಿ, ಬಲಿಯಾ, ಘಾಜಿಯಾಪುರ ಸೇರಿದಂತೆ 17 ಜಿಲ್ಲೆಗಳ ಒಟ್ಟು 402 ಗ್ರಾಮಗಳು ಪ್ರವಾಹದಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರವಾಹದ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 500 ಹಡಗು, ಮೋಟರ್ ಹಡಗುಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ರವಾನಿಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>