<p><strong>ಲಖನೌ:</strong> ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರ ಕಡ್ಡಾಯ ನಿವೃತ್ತಿ ಕುರಿತ ಮಾಹಿತಿ ಹಂಚಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ನಿರಾಕರಿಸಿದೆ. ನಿವೃತ್ತಿಗೆ ಸಂಬಂಧಿಸಿದ ಮಾಹಿತಿ ‘ಗೋಪ್ಯ ದಾಖಲೆ’ ವ್ಯಾಪ್ತಿಗೆ ಬರುತ್ತದೆ ಎಂದು ಸರ್ಕಾರ ಹೇಳಿದೆ.</p>.<p>ಈ ನಿರಾಕರಣೆಯು ಅನುಚಿತ ಮತ್ತು ಅನುಮಾನಾಸ್ಪದ ಎಂದು ಠಾಕೂರ್ ಹೇಳಿದ್ದಾರೆ. ಆರಂಭದಲ್ಲಿ ಕಡ್ಡಾಯ ನಿವೃತ್ತಿ ಹೊಂದುವಂತೆ ಮಾಡಲಾಯಿತು. ಇದೀಗ ತಮ್ಮ ಜೀವನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಕೇಂದ್ರ ಗೃಹ ಸಚಿವಾಲಯದ ನಿರ್ಧಾರದಂತೆ ಠಾಕೂರ್ ಅವರಿಗೆ ಮಾರ್ಚ್ 23ರಂದು ಕಡ್ಡಾಯ ನಿವೃತ್ತಿ ಘೋಷಿಸಲಾಗಿತ್ತು.</p>.<p>ಈ ನಿರ್ಧಾರಕ್ಕೆ ಸಂಬಂಧಿಸಿದ ದಾಖಲೆಗಳ ಪ್ರತಿಗಾಗಿ ಠಾಕೂರ್ ಅವರು ಮೇ 26ರಂದು ಮನವಿ ಸಲ್ಲಿಸಿದ್ದರು.</p>.<p><strong>ಓದಿ:</strong><a href="https://www.prajavani.net/article/%E0%B2%85%E0%B2%95%E0%B3%8D%E0%B2%B0%E0%B2%AE-%E0%B2%86%E0%B2%B8%E0%B3%8D%E0%B2%A4%E0%B2%BF-%E0%B2%A0%E0%B2%BE%E0%B2%95%E0%B3%82%E0%B2%B0%E0%B3%8D-%E0%B2%A8%E0%B2%BF%E0%B2%B5%E0%B2%BE%E0%B2%B8%E0%B2%A6%E0%B2%B2%E0%B3%8D%E0%B2%B2%E0%B2%BF-%E0%B2%B6%E0%B3%8B%E0%B2%A7" target="_blank">ಅಕ್ರಮ ಆಸ್ತಿ: ಠಾಕೂರ್ ನಿವಾಸದಲ್ಲಿ ಶೋಧ</a></p>.<p>‘ತಮ್ಮ ಕಡ್ಡಾಯ ನಿವೃತ್ತಿಗೆ ಸಂಬಂಧಿಸಿದ ನೋಟ್ಶೀಟ್, ಪತ್ರವ್ಯವಹಾರ ಮತ್ತಿತರ ದಾಖಲೆಗಳ ಪ್ರತಿಯನ್ನು ಅಮಿತಾಭ್ ಕೋರಿದ್ದರು. ಈ ದಾಖಲೆಗಳು ಅತ್ಯಂತ ಗೋಪ್ಯವಾಗಿರುವುದರಿಂದ ಅವುಗಳನ್ನು ನೀಡಲಾಗದು’ ಎಂದು ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ ಕುಮಾರ್ ಪ್ರಶಾಂತ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಈ ಹಿಂದೆ ಗೃಹ ಸಚಿವಾಲಯ ಕೂಡ ಮಾಹಿತಿ ಹಕ್ಕು ಕಾಯ್ದೆ ಅಡಿ ಈ ದಾಖಲೆಗಳನ್ನು ನೀಡಲು ನಿರಾಕರಿಸಿತ್ತು.</p>.<p>ಸಾರ್ವಜನಿಕ ಹಿತಾಸಕ್ತಿಗಾಗಿ ಠಾಕೂರ್ ಅವರಿಗೆ ಕಡ್ಡಾಯ ನಿವೃತ್ತಿ ನೀಡುತ್ತಿರುವುದಾಗಿ 2021ರ ಮಾರ್ಚ್ 23ರಂದು ಘೋಷಿಸಲಾಗಿತ್ತು. ಸೇವೆಯ ಉಳಿದ ಅವಧಿಯಲ್ಲಿ ಕಾರ್ಯನಿರ್ವಹಿಸಲು ಅವರು ‘ಫಿಟ್’ ಆಗಿಲ್ಲ ಎಂದೂ ಕೇಂದ್ರ ಗೃಹ ಸಚಿವಾಲಯ ಹೇಳಿತ್ತು.</p>.<p>ಉತ್ತರ ಪ್ರದೇಶ ಹೊರತುಪಡಿಸಿ ಬೇರೆ ಯಾವುದಾದರೂ ರಾಜ್ಯಕ್ಕೆ ತನ್ನ ಕೇಡರ್ ಬದಲಾಯಿಸಬೇಕು ಎಂದು ಕೋರಿ 2017ರಲ್ಲಿ ಠಾಕೂರ್ ಅವರು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು.</p>.<p>2015ರಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ತಮಗೆ ಬೆದರಿಕೆಯೊಡ್ಡಿದ್ದಾರೆ ಎಂದು ಠಾಕೂರ್ ಆರೋಪಿಸಿದ್ದರು. ಆ ಬಳಿಕ 2015ರ ಜುಲೈ 13ರಿಂದ ಅವರನ್ನು ಸೇವೆಯಿಂದ ಅಮಾನತಿನಲ್ಲಿರಿಸಲಾಗಿತ್ತು. ಅವರ ವಿರುದ್ಧ ವಿಚಕ್ಷಣಾ ದಳದ ತನಿಖೆಯನ್ನೂ ನಡೆಸಲಾಗಿತ್ತು.</p>.<p>ಆದರೆ, ಅವರನ್ನು ಅಮಾನತುಗೊಳಿಸಿದ್ದ ನಿರ್ಧಾರಕ್ಕೆ ಕೇಂದ್ರ ಆಡಳಿತ ನ್ಯಾಯಮಂಡಳಿ 2016ರ ಏಪ್ರಿಲ್ನಲ್ಲಿ ತಡೆ ನೀಡಿತ್ತು. 2015ರ ಅಕ್ಟೋಬರ್ 11ರಿಂದ ಪೂರ್ವಾನ್ವಯವಾಗುವಂತೆ ಪೂರ್ತಿ ವೇತನದೊಂದಿಗೆ ಅವರ ಮರುನೇಮಕಕ್ಕೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರ ಕಡ್ಡಾಯ ನಿವೃತ್ತಿ ಕುರಿತ ಮಾಹಿತಿ ಹಂಚಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ನಿರಾಕರಿಸಿದೆ. ನಿವೃತ್ತಿಗೆ ಸಂಬಂಧಿಸಿದ ಮಾಹಿತಿ ‘ಗೋಪ್ಯ ದಾಖಲೆ’ ವ್ಯಾಪ್ತಿಗೆ ಬರುತ್ತದೆ ಎಂದು ಸರ್ಕಾರ ಹೇಳಿದೆ.</p>.<p>ಈ ನಿರಾಕರಣೆಯು ಅನುಚಿತ ಮತ್ತು ಅನುಮಾನಾಸ್ಪದ ಎಂದು ಠಾಕೂರ್ ಹೇಳಿದ್ದಾರೆ. ಆರಂಭದಲ್ಲಿ ಕಡ್ಡಾಯ ನಿವೃತ್ತಿ ಹೊಂದುವಂತೆ ಮಾಡಲಾಯಿತು. ಇದೀಗ ತಮ್ಮ ಜೀವನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಕೇಂದ್ರ ಗೃಹ ಸಚಿವಾಲಯದ ನಿರ್ಧಾರದಂತೆ ಠಾಕೂರ್ ಅವರಿಗೆ ಮಾರ್ಚ್ 23ರಂದು ಕಡ್ಡಾಯ ನಿವೃತ್ತಿ ಘೋಷಿಸಲಾಗಿತ್ತು.</p>.<p>ಈ ನಿರ್ಧಾರಕ್ಕೆ ಸಂಬಂಧಿಸಿದ ದಾಖಲೆಗಳ ಪ್ರತಿಗಾಗಿ ಠಾಕೂರ್ ಅವರು ಮೇ 26ರಂದು ಮನವಿ ಸಲ್ಲಿಸಿದ್ದರು.</p>.<p><strong>ಓದಿ:</strong><a href="https://www.prajavani.net/article/%E0%B2%85%E0%B2%95%E0%B3%8D%E0%B2%B0%E0%B2%AE-%E0%B2%86%E0%B2%B8%E0%B3%8D%E0%B2%A4%E0%B2%BF-%E0%B2%A0%E0%B2%BE%E0%B2%95%E0%B3%82%E0%B2%B0%E0%B3%8D-%E0%B2%A8%E0%B2%BF%E0%B2%B5%E0%B2%BE%E0%B2%B8%E0%B2%A6%E0%B2%B2%E0%B3%8D%E0%B2%B2%E0%B2%BF-%E0%B2%B6%E0%B3%8B%E0%B2%A7" target="_blank">ಅಕ್ರಮ ಆಸ್ತಿ: ಠಾಕೂರ್ ನಿವಾಸದಲ್ಲಿ ಶೋಧ</a></p>.<p>‘ತಮ್ಮ ಕಡ್ಡಾಯ ನಿವೃತ್ತಿಗೆ ಸಂಬಂಧಿಸಿದ ನೋಟ್ಶೀಟ್, ಪತ್ರವ್ಯವಹಾರ ಮತ್ತಿತರ ದಾಖಲೆಗಳ ಪ್ರತಿಯನ್ನು ಅಮಿತಾಭ್ ಕೋರಿದ್ದರು. ಈ ದಾಖಲೆಗಳು ಅತ್ಯಂತ ಗೋಪ್ಯವಾಗಿರುವುದರಿಂದ ಅವುಗಳನ್ನು ನೀಡಲಾಗದು’ ಎಂದು ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ ಕುಮಾರ್ ಪ್ರಶಾಂತ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಈ ಹಿಂದೆ ಗೃಹ ಸಚಿವಾಲಯ ಕೂಡ ಮಾಹಿತಿ ಹಕ್ಕು ಕಾಯ್ದೆ ಅಡಿ ಈ ದಾಖಲೆಗಳನ್ನು ನೀಡಲು ನಿರಾಕರಿಸಿತ್ತು.</p>.<p>ಸಾರ್ವಜನಿಕ ಹಿತಾಸಕ್ತಿಗಾಗಿ ಠಾಕೂರ್ ಅವರಿಗೆ ಕಡ್ಡಾಯ ನಿವೃತ್ತಿ ನೀಡುತ್ತಿರುವುದಾಗಿ 2021ರ ಮಾರ್ಚ್ 23ರಂದು ಘೋಷಿಸಲಾಗಿತ್ತು. ಸೇವೆಯ ಉಳಿದ ಅವಧಿಯಲ್ಲಿ ಕಾರ್ಯನಿರ್ವಹಿಸಲು ಅವರು ‘ಫಿಟ್’ ಆಗಿಲ್ಲ ಎಂದೂ ಕೇಂದ್ರ ಗೃಹ ಸಚಿವಾಲಯ ಹೇಳಿತ್ತು.</p>.<p>ಉತ್ತರ ಪ್ರದೇಶ ಹೊರತುಪಡಿಸಿ ಬೇರೆ ಯಾವುದಾದರೂ ರಾಜ್ಯಕ್ಕೆ ತನ್ನ ಕೇಡರ್ ಬದಲಾಯಿಸಬೇಕು ಎಂದು ಕೋರಿ 2017ರಲ್ಲಿ ಠಾಕೂರ್ ಅವರು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು.</p>.<p>2015ರಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ತಮಗೆ ಬೆದರಿಕೆಯೊಡ್ಡಿದ್ದಾರೆ ಎಂದು ಠಾಕೂರ್ ಆರೋಪಿಸಿದ್ದರು. ಆ ಬಳಿಕ 2015ರ ಜುಲೈ 13ರಿಂದ ಅವರನ್ನು ಸೇವೆಯಿಂದ ಅಮಾನತಿನಲ್ಲಿರಿಸಲಾಗಿತ್ತು. ಅವರ ವಿರುದ್ಧ ವಿಚಕ್ಷಣಾ ದಳದ ತನಿಖೆಯನ್ನೂ ನಡೆಸಲಾಗಿತ್ತು.</p>.<p>ಆದರೆ, ಅವರನ್ನು ಅಮಾನತುಗೊಳಿಸಿದ್ದ ನಿರ್ಧಾರಕ್ಕೆ ಕೇಂದ್ರ ಆಡಳಿತ ನ್ಯಾಯಮಂಡಳಿ 2016ರ ಏಪ್ರಿಲ್ನಲ್ಲಿ ತಡೆ ನೀಡಿತ್ತು. 2015ರ ಅಕ್ಟೋಬರ್ 11ರಿಂದ ಪೂರ್ವಾನ್ವಯವಾಗುವಂತೆ ಪೂರ್ತಿ ವೇತನದೊಂದಿಗೆ ಅವರ ಮರುನೇಮಕಕ್ಕೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>