ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಖಾಸಗಿತನಕ್ಕೆ ಸಂಬಂಧಪಟ್ಟಂತೆ 1994ರಲ್ಲಿ ಆರ್. ರಾಜಗೋಪಾಲ್ vs ತಮಿಳುನಾಡು ನಡುವಿನ ನ್ಯಾಯಾಲಯದ ತೀರ್ಪನ್ನು ಮುಂದಿಟ್ಟಿದ್ದಾರೆ. ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಿ, ಗನ್ ತೋರಿಸಿದವರಿಗೆ ಗೌಪ್ಯತೆಯ ಹಕ್ಕು ಇರುವುದಿಲ್ಲ ಎಂದು ಮೆಹ್ತಾ ವಾದಿಸಿದ್ದಾರೆ.