<p><strong>ಹಮೀರ್ಪುರ:</strong> ಉತ್ತರಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಶುಕ್ರವಾರ ಕುಸಿದು ಬಿದ್ದ ಪರಿಣಾಮ ಆರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>‘ಮುಂಜಾನೆ ಮೂರು ಗಂಟೆಗೆ ಅವಘಡ ನಡೆದಿದೆ. ಬೆಟ್ವಾ ನದಿಯಲ್ಲಿ ಬಿರುಗಾಳಿ ಬೀಸಿದ ಕಾರಣ, ಸೇತುವೆಯ ನಿರ್ಮಾಣದ ಕಾರ್ಮಿಕರು ಮಲಗಿದ್ದ ಸ್ಲ್ಯಾಬ್ ಕುಸಿದು ಬಿದ್ದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">‘ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p class="title">‘ಎರಡು ವರ್ಷಗಳಿಂದ ಖಾಸಗಿ ಕಂಪನಿಯು ಸೇತುವೆ ನಿರ್ಮಾಣ ಕಾಮಗಾರಿಯನ್ನು ನಡೆಸುತ್ತಿದೆ. ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇರುವ ಬಗ್ಗೆ ಜಿಲ್ಲಾಡಳಿತ ಗುರುವಾರವೇ ಮುನ್ಸೂಚನೆ ನೀಡಿತ್ತು’ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಮೀರ್ಪುರ:</strong> ಉತ್ತರಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಶುಕ್ರವಾರ ಕುಸಿದು ಬಿದ್ದ ಪರಿಣಾಮ ಆರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>‘ಮುಂಜಾನೆ ಮೂರು ಗಂಟೆಗೆ ಅವಘಡ ನಡೆದಿದೆ. ಬೆಟ್ವಾ ನದಿಯಲ್ಲಿ ಬಿರುಗಾಳಿ ಬೀಸಿದ ಕಾರಣ, ಸೇತುವೆಯ ನಿರ್ಮಾಣದ ಕಾರ್ಮಿಕರು ಮಲಗಿದ್ದ ಸ್ಲ್ಯಾಬ್ ಕುಸಿದು ಬಿದ್ದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">‘ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p class="title">‘ಎರಡು ವರ್ಷಗಳಿಂದ ಖಾಸಗಿ ಕಂಪನಿಯು ಸೇತುವೆ ನಿರ್ಮಾಣ ಕಾಮಗಾರಿಯನ್ನು ನಡೆಸುತ್ತಿದೆ. ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇರುವ ಬಗ್ಗೆ ಜಿಲ್ಲಾಡಳಿತ ಗುರುವಾರವೇ ಮುನ್ಸೂಚನೆ ನೀಡಿತ್ತು’ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>