<p><strong>ಸುಲ್ತಾನ್ಪುರ (ಉ.ಪ್ರ): </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ. </p>.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ.<p>ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ನ್ಯಾಯಮೂರ್ತಿಗಳ ನಿಯೋಜನೆ ಆಗದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ.</p><p>‘ಇಂದು ವಿಚಾರಣೆ ನಿಗದಿಯಾಗಿತ್ತು. ಆದರೆ ನ್ಯಾಯಮೂರ್ತಿಗಳು ನಿಗದಿಯಾಗದ ಕಾರಣ ಮುಂದೂಡಲಾಯಿತು. ಮೇ 14ರಂದು ವಿಚಾರಣೆ ನಡೆಯಲಿದೆ‘ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ.</p>.ಈ ಹಿಂದೆ ಮೀಸಲಾತಿ ವಿರೋಧಿಸಿದ್ದ ಆರ್ಎಸ್ಎಸ್: ರಾಹುಲ್ ಗಾಂಧಿ.<p>ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ಆರು ವರ್ಷದ ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದರು.</p><p>ಕಳೆದ ವರ್ಷ ಡಿಸೆಂಬರ್ನಲ್ಲಿ ಇದೇ ಪ್ರಕರಣ ಸಂಬಂಧ ರಾಹುಲ್ ಗಾಂಧಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಫೆಬ್ರುವರಿ 20ರಂದು ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.</p>.ಬಿಲಿಯನೇರ್ ಉದ್ಯಮಿ ಮಿತ್ರರಿಗಾಗಿ ಸರ್ಕಾರ ನಡೆಸುತ್ತಿರುವ ಮೋದಿ: ರಾಹುಲ್ ಗಾಂಧಿ . <p>2018ರ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿತ್ತು.</p> .ಮೋದಿ ಸರ್ಕಾರದಿಂದ ಜನರಿಗೆ ಆದ ಅನ್ಯಾಯ ನಾವು ಸರಿ ಮಾಡಲಿದ್ದೇವೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನ್ಪುರ (ಉ.ಪ್ರ): </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ. </p>.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ.<p>ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ನ್ಯಾಯಮೂರ್ತಿಗಳ ನಿಯೋಜನೆ ಆಗದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ.</p><p>‘ಇಂದು ವಿಚಾರಣೆ ನಿಗದಿಯಾಗಿತ್ತು. ಆದರೆ ನ್ಯಾಯಮೂರ್ತಿಗಳು ನಿಗದಿಯಾಗದ ಕಾರಣ ಮುಂದೂಡಲಾಯಿತು. ಮೇ 14ರಂದು ವಿಚಾರಣೆ ನಡೆಯಲಿದೆ‘ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ.</p>.ಈ ಹಿಂದೆ ಮೀಸಲಾತಿ ವಿರೋಧಿಸಿದ್ದ ಆರ್ಎಸ್ಎಸ್: ರಾಹುಲ್ ಗಾಂಧಿ.<p>ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ಆರು ವರ್ಷದ ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದರು.</p><p>ಕಳೆದ ವರ್ಷ ಡಿಸೆಂಬರ್ನಲ್ಲಿ ಇದೇ ಪ್ರಕರಣ ಸಂಬಂಧ ರಾಹುಲ್ ಗಾಂಧಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಫೆಬ್ರುವರಿ 20ರಂದು ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.</p>.ಬಿಲಿಯನೇರ್ ಉದ್ಯಮಿ ಮಿತ್ರರಿಗಾಗಿ ಸರ್ಕಾರ ನಡೆಸುತ್ತಿರುವ ಮೋದಿ: ರಾಹುಲ್ ಗಾಂಧಿ . <p>2018ರ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿತ್ತು.</p> .ಮೋದಿ ಸರ್ಕಾರದಿಂದ ಜನರಿಗೆ ಆದ ಅನ್ಯಾಯ ನಾವು ಸರಿ ಮಾಡಲಿದ್ದೇವೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>