ಪನ್ವೆಲ್– ಜೌನ್ಪುರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕರು ಕಿಟಕಿ, ಗಾಜುಗಳನ್ನು ಒಡೆದಿದ್ದಾರೆ. ಇದರಿಂದ ವಾರಾಣಸಿ ಸಮೀಪದ ವ್ಯಾಸ್ನಗರ ನಿಲ್ದಾಣದಲ್ಲಿ ಹಲವು ಗಂಟೆಗಳ ರೈಲು ನಿಂತಿತ್ತು. ಬೆಂಗಳೂರು – ದರ್ಬಾಂಗ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರೂ ಅಜ್ಗೈನ್, ಸೋನಿಕ್, ಉನ್ನಾವೊ ರೈಲು ನಿಲ್ದಾಣಗಳ ಕಚೇರಿಗಳನ್ನು ದೋಚಿದ್ದಾರೆ. ‘ನಾವು ಎರಡು ದಿನಗಳಿಂದ ಪ್ರಯಾಣಿಸುತ್ತಿದ್ದೇವೆ. ನಮ್ಮೊಂದಿಗೆ ಮಕ್ಕಳಿದ್ದು, ಆಹಾರ ಮತ್ತು ನೀರು ಸೌಲಭ್ಯ ಇಲ್ಲ’ ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ.