<p><strong>ಗಾಜಿಯಾಬಾದ್: </strong>ಇಲ್ಲಿನ ಪ್ರತಾಪ್ ವಿಹಾರ್ ಪೊಲೀಸ್ ಔಟ್ಪೋಸ್ಟ್ ಬಳಿ ಪೊಲೀಸ್ ಕಾನ್ಸ್ಟೆಬಲ್ವೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತರನ್ನು ಬುಲಂದ್ಶಹರ್ ಜಿಲ್ಲೆಯ ಸುಮಿತ್ ಕುಮಾರ್ (35) ಎಂದು ಗುರುತಿಸಲಾಗಿದೆ.</p>.<p>ಕುಮಾರ್ ಅವರು ಬಾಗಪತ್ ಜಿಲ್ಲೆಯ ಬರೌತ್ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಆಗಿ ನಿಯೋಜನೆಗೊಂಡಿದ್ದರು. ಅವರಸಾವಿನ ವಿಚಾರ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿ ಶವವನ್ನು ವಶಕ್ಕೆ ಪಡೆಯಲಾಗಿದೆಎಂದು ಪೊಲೀಸರು ಹೇಳಿದ್ದಾರೆ.</p>.<p>ತನಿಖೆಯ ಭಾಗವಾಗಿಬೆರಳಚ್ಚು ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ನಿಖರ ಕಾರಣ ಏನೆಂಬುದು, ವರದಿ ಬಂದ ನಂತರವಷ್ಟೇ ತಿಳಿಯಲಿದೆ ಎಂದು ಹೆಚ್ಚುವರಿ ಸೂಪರಿಂಟೆಂಡ್ ಆಫ್ ಪೊಲೀಸ್ ನಿಪುಣ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಪೊಲೀಸರ ಮಾಹಿತಿ ಪ್ರಕಾರ, ಮದ್ಯದ ಖಾಲಿ ಬಾಟಲಿ ಹಾಗೂ ಕುರ್ಚಿಯೊಂದು ಸ್ಥಳದಲ್ಲಿ ಪತ್ತೆಯಾಗಿದೆ. ಮುಖದ ಮೇಲೆ ಗಾಯದ ಗುರುತು ಇದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್: </strong>ಇಲ್ಲಿನ ಪ್ರತಾಪ್ ವಿಹಾರ್ ಪೊಲೀಸ್ ಔಟ್ಪೋಸ್ಟ್ ಬಳಿ ಪೊಲೀಸ್ ಕಾನ್ಸ್ಟೆಬಲ್ವೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತರನ್ನು ಬುಲಂದ್ಶಹರ್ ಜಿಲ್ಲೆಯ ಸುಮಿತ್ ಕುಮಾರ್ (35) ಎಂದು ಗುರುತಿಸಲಾಗಿದೆ.</p>.<p>ಕುಮಾರ್ ಅವರು ಬಾಗಪತ್ ಜಿಲ್ಲೆಯ ಬರೌತ್ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಆಗಿ ನಿಯೋಜನೆಗೊಂಡಿದ್ದರು. ಅವರಸಾವಿನ ವಿಚಾರ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿ ಶವವನ್ನು ವಶಕ್ಕೆ ಪಡೆಯಲಾಗಿದೆಎಂದು ಪೊಲೀಸರು ಹೇಳಿದ್ದಾರೆ.</p>.<p>ತನಿಖೆಯ ಭಾಗವಾಗಿಬೆರಳಚ್ಚು ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ನಿಖರ ಕಾರಣ ಏನೆಂಬುದು, ವರದಿ ಬಂದ ನಂತರವಷ್ಟೇ ತಿಳಿಯಲಿದೆ ಎಂದು ಹೆಚ್ಚುವರಿ ಸೂಪರಿಂಟೆಂಡ್ ಆಫ್ ಪೊಲೀಸ್ ನಿಪುಣ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಪೊಲೀಸರ ಮಾಹಿತಿ ಪ್ರಕಾರ, ಮದ್ಯದ ಖಾಲಿ ಬಾಟಲಿ ಹಾಗೂ ಕುರ್ಚಿಯೊಂದು ಸ್ಥಳದಲ್ಲಿ ಪತ್ತೆಯಾಗಿದೆ. ಮುಖದ ಮೇಲೆ ಗಾಯದ ಗುರುತು ಇದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>