<p><strong>ದೇವರಿಯಾ (ಉ.ಪ್ರ):</strong> ಡಿ.ಜೆ ಹಾಕುವ ಸಂಬಂಧ ಕೆಲವು ಗ್ರಾಮಸ್ಥರು ಹಾಗೂ ದೇಗುಲದ ಪೂಜಾರಿ ನಡೆದ ವಾಗ್ವಾದ ತಾರಕಕ್ಕೇರಿ, ಪೂಜಾರಿಯನ್ನು ಕೋಲುಗಳಿಂದ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ತೆನುಬಾ ಚೌಬೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.ಮಂಗಳೂರು | ಕೋಮುದ್ವೇಷದಿಂದ ಕೊಲೆ: ನಾಲ್ವರಿಗೆ ಜೀವಾವಧಿ ಶಿಕ್ಷೆ.<p>ಡಿ.ಜೆ ಹಾಕುವ ಸಂಬಂಧ ಅಶೋಕ್ ಚೌಬೆ (60) ಅವರನ್ನು ಕೆಲವರು ಕೋಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.</p><p>ಘಟನೆ ನಡೆದ ಕೂಡಲೇ ಚೌಬೆ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಹೌಸ್ಲಾ ಪಸ್ವಾನ್ ಎಂಬುವರನ್ನು ಸೇರಿ ಒಟ್ಟು ಮೂವರನ್ನು ಬಂಧಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.</p>.ಬೆಂಗಳೂರು | ಮನೆ ಖಾಲಿ ಮಾಡುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ ಪತಿ. <p>ಸದ್ಯ ಗ್ರಾಮದಲ್ಲಿ ಹಾಗೂ ದೇವಸ್ಥಾನದಲ್ಲಿ ಸಂಭವಿಸಬಹುದಾದ ಅನಗತ್ಯ ಘಟನೆಗಳನ್ನು ತಪ್ಪಿಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ವಿಸ್ತೃ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.</p> .2 ಕುಟುಂಬಗಳ ನಡುವೆ ಜಗಳ: ಎದೆ ಮೇಲೆ ತುಳಿದು ಮಗು ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಿಯಾ (ಉ.ಪ್ರ):</strong> ಡಿ.ಜೆ ಹಾಕುವ ಸಂಬಂಧ ಕೆಲವು ಗ್ರಾಮಸ್ಥರು ಹಾಗೂ ದೇಗುಲದ ಪೂಜಾರಿ ನಡೆದ ವಾಗ್ವಾದ ತಾರಕಕ್ಕೇರಿ, ಪೂಜಾರಿಯನ್ನು ಕೋಲುಗಳಿಂದ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ತೆನುಬಾ ಚೌಬೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.ಮಂಗಳೂರು | ಕೋಮುದ್ವೇಷದಿಂದ ಕೊಲೆ: ನಾಲ್ವರಿಗೆ ಜೀವಾವಧಿ ಶಿಕ್ಷೆ.<p>ಡಿ.ಜೆ ಹಾಕುವ ಸಂಬಂಧ ಅಶೋಕ್ ಚೌಬೆ (60) ಅವರನ್ನು ಕೆಲವರು ಕೋಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.</p><p>ಘಟನೆ ನಡೆದ ಕೂಡಲೇ ಚೌಬೆ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಹೌಸ್ಲಾ ಪಸ್ವಾನ್ ಎಂಬುವರನ್ನು ಸೇರಿ ಒಟ್ಟು ಮೂವರನ್ನು ಬಂಧಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.</p>.ಬೆಂಗಳೂರು | ಮನೆ ಖಾಲಿ ಮಾಡುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ ಪತಿ. <p>ಸದ್ಯ ಗ್ರಾಮದಲ್ಲಿ ಹಾಗೂ ದೇವಸ್ಥಾನದಲ್ಲಿ ಸಂಭವಿಸಬಹುದಾದ ಅನಗತ್ಯ ಘಟನೆಗಳನ್ನು ತಪ್ಪಿಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ವಿಸ್ತೃ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.</p> .2 ಕುಟುಂಬಗಳ ನಡುವೆ ಜಗಳ: ಎದೆ ಮೇಲೆ ತುಳಿದು ಮಗು ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>