<p><strong>ಲಖನೌ:</strong> ದಟ್ಟವಾದ ಮಂಜಿನಿಂದಾಗಿ ಉತ್ತರ ಪ್ರದೇಶದಾದ್ಯಂತ ಹಲವು ವಾಹನ ಅಪಘಾತಗಳು ಸಂಭವಿಸಿದ್ದು, 23 ಜನರು ಮೃತಪಟ್ಟು ನೂರಾರು ಜನರು ಗಾಯಗೊಂಡಿದ್ದಾರೆ.</p>.<p>ಮಥುರಾ ಜಿಲ್ಲೆಯ ಬಲದೇವ್ ಪ್ರದೇಶದ ಬಳಿಯ ದೆಹಲಿ–ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಮಂಗಳವಾರ ಸಂಭವಿಸಿದ ಸರಣಿ ಅಪಘಾತದಿಂದಾಗಿ 13 ಜನರು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.</p>.<p>ಮುಂಜಾನೆ 3.30ಕ್ಕೆ ದಟ್ಟವಾದ ಮಂಜಿನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ ಏಳು ಬಸ್ಗಳು ಮತ್ತು ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ. ನಂತರ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಮತ್ತು ಬಸ್ಗಳಲ್ಲಿದ್ದ ಜನರು ಸುಟ್ಟು ಕರಕಲಾಗಿದ್ದಾರೆ.</p>.<p>ಮತ್ತೊಂದು ಘಟನೆಯಲ್ಲಿ, ಮಂಗಳವಾರ ಮುಂಜಾನೆ ಉನ್ನಾವೊ ಜಿಲ್ಲೆಯ ಬಾಂಗರಮವೂ ಪ್ರದೇಶದ ಲಖನೌ–ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ವಾಹನವೊಂದು ಬಂಡೆಗೆ ಡಿಕ್ಕಿ ಹೊಡೆದು ಅದರಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.</p>.<p>ಸಂತ ಕಬೀರನಗರ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿದ್ದಾರೆ.</p>.<p>ಮೀರತ್ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಹಿಂಡನ್ ನದಿಗೆ ವಾಹನ ಬಿದ್ದು ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ದಟ್ಟವಾದ ಮಂಜಿನಿಂದಾಗಿ ಉತ್ತರ ಪ್ರದೇಶದಾದ್ಯಂತ ಹಲವು ವಾಹನ ಅಪಘಾತಗಳು ಸಂಭವಿಸಿದ್ದು, 23 ಜನರು ಮೃತಪಟ್ಟು ನೂರಾರು ಜನರು ಗಾಯಗೊಂಡಿದ್ದಾರೆ.</p>.<p>ಮಥುರಾ ಜಿಲ್ಲೆಯ ಬಲದೇವ್ ಪ್ರದೇಶದ ಬಳಿಯ ದೆಹಲಿ–ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಮಂಗಳವಾರ ಸಂಭವಿಸಿದ ಸರಣಿ ಅಪಘಾತದಿಂದಾಗಿ 13 ಜನರು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.</p>.<p>ಮುಂಜಾನೆ 3.30ಕ್ಕೆ ದಟ್ಟವಾದ ಮಂಜಿನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ ಏಳು ಬಸ್ಗಳು ಮತ್ತು ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ. ನಂತರ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಮತ್ತು ಬಸ್ಗಳಲ್ಲಿದ್ದ ಜನರು ಸುಟ್ಟು ಕರಕಲಾಗಿದ್ದಾರೆ.</p>.<p>ಮತ್ತೊಂದು ಘಟನೆಯಲ್ಲಿ, ಮಂಗಳವಾರ ಮುಂಜಾನೆ ಉನ್ನಾವೊ ಜಿಲ್ಲೆಯ ಬಾಂಗರಮವೂ ಪ್ರದೇಶದ ಲಖನೌ–ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ವಾಹನವೊಂದು ಬಂಡೆಗೆ ಡಿಕ್ಕಿ ಹೊಡೆದು ಅದರಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.</p>.<p>ಸಂತ ಕಬೀರನಗರ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿದ್ದಾರೆ.</p>.<p>ಮೀರತ್ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಹಿಂಡನ್ ನದಿಗೆ ವಾಹನ ಬಿದ್ದು ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>