<p><strong>ಲಖನೌ:</strong> ಉತ್ತರ ಪ್ರದೇಶದಾದ್ಯಂತ ಸಂಭವಿಸಿದ ಭೀಕರ ಚಂಡಮಾರುತ ಮತ್ತು ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ರಾಜ್ಯದ ಪೂರ್ವ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ ಬುಧವಾರ ಚಂಡಮಾರುತ ಅಪ್ಪಳಿಸಿತ್ತು. ಇದರಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜಾನುವಾರುಗಳ ಸಾವಿಗೂ ಕಾರಣವಾಗಿದೆ.</p><p>ವಾರಾಣಸಿ, ಪ್ರಯಾಗ್ರಾಜ್ ಮತ್ತು ಕಾನ್ಪುರ ಜಿಲ್ಲೆಗಳು ಅತಿ ಹೆಚ್ಚು ಹಾನಿಗೊಳಗಾಗಿದ್ದು, ಹೆಚ್ಚಿನ ಸಾವುನೋವು ವರದಿಯಾಗಿದೆ. ಗೋಡೆ ಕುಸಿತದಂತಹ ಘಟನೆಗಳಿಂದಲೇ ಹೆಚ್ಚಿನ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.</p><p>ರಾಜ್ಯ ಸರ್ಕಾರವು ಈಗಾಗಲೇ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆ ಪ್ರಾರಂಭಿಸಿದೆ. ಆಸ್ತಿಪಾಸ್ತಿ ಹಾನಿ ಮತ್ತು ಜಾನುವಾರುಗಳ ನಷ್ಟವನ್ನು ಅಂದಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.</p>.<h2>ಪರಿಹಾರ ಘೋಷಣೆ...</h2><p>ಮೃತರ ಕುಟುಂಬದವರಿಗೆ ತಲಾ ₹4 ಲಕ್ಷ ತುರ್ತು ಪರಿಹಾರವನ್ನು ಸರ್ಕಾರ ಘೋಷಿಸಿದೆ. ಅಲ್ಲದೆ, ಸಂಕಷ್ಟಕ್ಕೊಳಗಾದ ರೈತರಿಗೆ ಮತ್ತು ಇತರರಿಗೆ ತಕ್ಷಣ ನೆರವು ನೀಡಲು ಅಧಿಕಾರಿಗಳಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ.</p><p>ಮಳೆಯಿಂದ ಶೇಕಡ 33ಕ್ಕಿಂತ ಹೆಚ್ಚಿನ ಪ್ರಮಾಣದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಜಾನುವಾರುಗಳನ್ನು ಕಳೆದುಕೊಂಡವರಿಗೂ ಆರ್ಥಿಕ ನೆರವು ಒದಗಿಸಲಾಗುವುದು ಎಂದೂ ಯೋಗಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದಾದ್ಯಂತ ಸಂಭವಿಸಿದ ಭೀಕರ ಚಂಡಮಾರುತ ಮತ್ತು ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ರಾಜ್ಯದ ಪೂರ್ವ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ ಬುಧವಾರ ಚಂಡಮಾರುತ ಅಪ್ಪಳಿಸಿತ್ತು. ಇದರಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜಾನುವಾರುಗಳ ಸಾವಿಗೂ ಕಾರಣವಾಗಿದೆ.</p><p>ವಾರಾಣಸಿ, ಪ್ರಯಾಗ್ರಾಜ್ ಮತ್ತು ಕಾನ್ಪುರ ಜಿಲ್ಲೆಗಳು ಅತಿ ಹೆಚ್ಚು ಹಾನಿಗೊಳಗಾಗಿದ್ದು, ಹೆಚ್ಚಿನ ಸಾವುನೋವು ವರದಿಯಾಗಿದೆ. ಗೋಡೆ ಕುಸಿತದಂತಹ ಘಟನೆಗಳಿಂದಲೇ ಹೆಚ್ಚಿನ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.</p><p>ರಾಜ್ಯ ಸರ್ಕಾರವು ಈಗಾಗಲೇ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆ ಪ್ರಾರಂಭಿಸಿದೆ. ಆಸ್ತಿಪಾಸ್ತಿ ಹಾನಿ ಮತ್ತು ಜಾನುವಾರುಗಳ ನಷ್ಟವನ್ನು ಅಂದಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.</p>.<h2>ಪರಿಹಾರ ಘೋಷಣೆ...</h2><p>ಮೃತರ ಕುಟುಂಬದವರಿಗೆ ತಲಾ ₹4 ಲಕ್ಷ ತುರ್ತು ಪರಿಹಾರವನ್ನು ಸರ್ಕಾರ ಘೋಷಿಸಿದೆ. ಅಲ್ಲದೆ, ಸಂಕಷ್ಟಕ್ಕೊಳಗಾದ ರೈತರಿಗೆ ಮತ್ತು ಇತರರಿಗೆ ತಕ್ಷಣ ನೆರವು ನೀಡಲು ಅಧಿಕಾರಿಗಳಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ.</p><p>ಮಳೆಯಿಂದ ಶೇಕಡ 33ಕ್ಕಿಂತ ಹೆಚ್ಚಿನ ಪ್ರಮಾಣದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಜಾನುವಾರುಗಳನ್ನು ಕಳೆದುಕೊಂಡವರಿಗೂ ಆರ್ಥಿಕ ನೆರವು ಒದಗಿಸಲಾಗುವುದು ಎಂದೂ ಯೋಗಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>