<p><strong>ಲಖನೌ/ ಬಾರಬಂಕಿ:</strong> ಆಕ್ಸಲ್ ಬ್ಲೇಡ್ ತುಂಡಾಗಿ ರಸ್ತೆಯಲ್ಲಿ ನಿಂತಿದ್ದ ಡಬಲ್ ಡಕ್ಕರ್ಗೆ, ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಕೊಟ್ವಾಲಿ ರಾಮ್ ಸಾನೆಹಿಘಾಟ್ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.</p>.<p>ಬಸ್ನಲ್ಲಿದ್ದವರಲ್ಲಿ ಹೆಚ್ಚಿನವರು ಕಾರ್ಮಿಕರಾಗಿದ್ದು, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಕೆಲಸ ಮುಗಿಸಿಕೊಂಡು, ಪೂರ್ವ ಬಿಹಾರದಲ್ಲಿರುವ ತಮ್ಮೂರುಗಳತ್ತ ಮರಳುತ್ತಿದ್ದರು ಎಂದು ತಿಳಿದುಬಂದಿದೆ.</p>.<p>ರಸ್ತೆಯಲ್ಲಿ ಬಸ್ ನಿಲ್ಲಿಸಿದ್ದ ವೇಳೆಯಲ್ಲಿ ಕೆಲವರು ಬಸ್ನಿಂದ ಹೊರಗಡೆ ನಿಂತಿದ್ದರೆ, ಇನ್ನೂ ಕೆಲವರು ರಸ್ತೆ ಮೇಲೆ ಮಲಗಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ್ ಟ್ರಕ್ ಬಸ್ಗೆ ಡಿಕ್ಕಿ ಹೊಡೆಯಿತು. ಸ್ಥಳದಲ್ಲೇ 18 ಮಂದಿ ಸಾವನ್ನಪ್ಪಿದ್ದಾರೆ.</p>.<p>ಅಪಘಾತದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಹಾರ ಕಾರ್ಯಚರಣೆ ಕೈಗೊಂಡರು. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಲಖನೌ ವಲಯದ ಡಿಜಿಪಿ ಎಸ್.ಎನ್.ಸಬತ್ ತಿಳಿಸಿದ್ದಾರೆ.</p>.<p>ಅಪಘಾತ ಸಂಭವಿಸಿದ ವೇಳೆಯಲ್ಲಿ ಭಾರಿ ಮಳೆಯಾಗುತ್ತಿತ್ತು. ಇದರಿಂದಾಗಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯುಂಟಾಯಿತು ಎಂದು ಅವರು ತಿಳಿಸಿದರು.</p>.<p>ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<p><strong>ಪ್ರಧಾನಿ ಸಂತಾಪ (</strong>ನವದೆಹಲಿ ವರದಿ): ಉತ್ತರ ಪ್ರದೇಶದ ಬಾರಾಬಂಕಿ ಸಮೀಪ ಬುಧವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೂಚಿಸಿದ್ದಾರೆ.</p>.<p><a href="https://www.prajavani.net/india-news/jammu-and-kashmir-cloud-burst-kisthwar-district-852426.html" itemprop="url">ಜಮ್ಮುವಿನ ಕಿಶ್ತವಾರ್ನಲ್ಲಿ ಮೇಘ ಸ್ಫೋಟ: ಐವರ ಸಾವು, 25 ಮಂದಿ ನಾಪತ್ತೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ/ ಬಾರಬಂಕಿ:</strong> ಆಕ್ಸಲ್ ಬ್ಲೇಡ್ ತುಂಡಾಗಿ ರಸ್ತೆಯಲ್ಲಿ ನಿಂತಿದ್ದ ಡಬಲ್ ಡಕ್ಕರ್ಗೆ, ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಕೊಟ್ವಾಲಿ ರಾಮ್ ಸಾನೆಹಿಘಾಟ್ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.</p>.<p>ಬಸ್ನಲ್ಲಿದ್ದವರಲ್ಲಿ ಹೆಚ್ಚಿನವರು ಕಾರ್ಮಿಕರಾಗಿದ್ದು, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಕೆಲಸ ಮುಗಿಸಿಕೊಂಡು, ಪೂರ್ವ ಬಿಹಾರದಲ್ಲಿರುವ ತಮ್ಮೂರುಗಳತ್ತ ಮರಳುತ್ತಿದ್ದರು ಎಂದು ತಿಳಿದುಬಂದಿದೆ.</p>.<p>ರಸ್ತೆಯಲ್ಲಿ ಬಸ್ ನಿಲ್ಲಿಸಿದ್ದ ವೇಳೆಯಲ್ಲಿ ಕೆಲವರು ಬಸ್ನಿಂದ ಹೊರಗಡೆ ನಿಂತಿದ್ದರೆ, ಇನ್ನೂ ಕೆಲವರು ರಸ್ತೆ ಮೇಲೆ ಮಲಗಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ್ ಟ್ರಕ್ ಬಸ್ಗೆ ಡಿಕ್ಕಿ ಹೊಡೆಯಿತು. ಸ್ಥಳದಲ್ಲೇ 18 ಮಂದಿ ಸಾವನ್ನಪ್ಪಿದ್ದಾರೆ.</p>.<p>ಅಪಘಾತದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಹಾರ ಕಾರ್ಯಚರಣೆ ಕೈಗೊಂಡರು. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಲಖನೌ ವಲಯದ ಡಿಜಿಪಿ ಎಸ್.ಎನ್.ಸಬತ್ ತಿಳಿಸಿದ್ದಾರೆ.</p>.<p>ಅಪಘಾತ ಸಂಭವಿಸಿದ ವೇಳೆಯಲ್ಲಿ ಭಾರಿ ಮಳೆಯಾಗುತ್ತಿತ್ತು. ಇದರಿಂದಾಗಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯುಂಟಾಯಿತು ಎಂದು ಅವರು ತಿಳಿಸಿದರು.</p>.<p>ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<p><strong>ಪ್ರಧಾನಿ ಸಂತಾಪ (</strong>ನವದೆಹಲಿ ವರದಿ): ಉತ್ತರ ಪ್ರದೇಶದ ಬಾರಾಬಂಕಿ ಸಮೀಪ ಬುಧವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೂಚಿಸಿದ್ದಾರೆ.</p>.<p><a href="https://www.prajavani.net/india-news/jammu-and-kashmir-cloud-burst-kisthwar-district-852426.html" itemprop="url">ಜಮ್ಮುವಿನ ಕಿಶ್ತವಾರ್ನಲ್ಲಿ ಮೇಘ ಸ್ಫೋಟ: ಐವರ ಸಾವು, 25 ಮಂದಿ ನಾಪತ್ತೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>