<p><strong>ಲಖನೌ:</strong> ಮಾಹಿತಿ ಹಕ್ಕು ಕಾಯಿದೆ ಅಡಿ ಸೂಕ್ತ ಅವಧಿಯಲ್ಲಿ ಉತ್ತರಿಸದ ತಪ್ಪಿಗೆ ಗ್ರಾಮಾಭಿವೃದ್ಧಿ ಅಧಿಕಾರಿಯೊಬ್ಬರಿಗೆ 250 ಮಕ್ಕಳಿಗೆ ಬಿಸಿಯೂಟ ಬಡಿಸುವ ಶಿಕ್ಷೆ ನೀಡಿದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ವಿದ್ಯಾರ್ಥಿಗಳಿಗೆ ಊಟ ಬಡಿಸುತ್ತಿರುವ ವಿಡಿಯೊವನ್ನು ದಾಖಲಿಸುವಂತೆ ತಾಕೀತು ಮಾಡಲಾಗಿದೆ.</p>.<p>ಉತ್ತರ ಪ್ರದೇಶದ ಘಾಜಿಪುರ್ ಜಿಲ್ಲೆಯ ನುನರ ಗ್ರಾಮದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಕೋರಿ ಭೂಪೇಂದ್ರ ಕುಮಾರ್ ಪಾಂಡೆ ಎಂಬುವವರು 6 ವರ್ಷಗಳ ಹಿಂದೆ ಆರ್ಟಿಐ ಅರ್ಜಿ ಹಾಕಿದ್ದರು. ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಗ್ರಾಮಾಭಿವೃದ್ಧಿ ಅಧಿಕಾರಿಯಾಗಿರುವ ಚಂದ್ರಿಕಾ ಪ್ರಸಾದ್ ಅವರು ಸೂಕ್ತ ಸಮಯದಲ್ಲಿ ಉತ್ತರಿಸಲು ವಿಫಲರಾಗಿದ್ದರು.</p>.<p>ಈ ಕುರಿತು ಆರ್ಟಿಐ ಅರ್ಜಿದಾರ ಪಾಂಡೆ ಅವರ ದೂರಿನಡಿ ಉತ್ತರ ಪ್ರದೇಶದ ಮಾಹಿತಿ ಆಯುಕ್ತ ಅಜಯ್ ಕುಮಾರ್ ಉಪ್ರೇತಿ ಅವರು ಗ್ರಾಮಾಭಿವೃದ್ಧಿ ಅಧಿಕಾರಿಗೆ ಬಿಸಿಯೂಟ ಬಡಿಸುವಂತೆ ಆದೇಶಿಸಿದ್ದಾರೆ.</p>.<p>'ಜಿಲ್ಲೆಯ ಪ್ರಾಥಮಿಕ ಶಾಲೆಯ 250 ಮಕ್ಕಳಿಗೆ ಬಿಸಿಯೂಟ ಬಡಿಸಬೇಕು. ದಂಡದ ರೂಪವಾಗಿ ಬಿಸಿಯೂಟಕ್ಕೆ ₹ 25,000 ವೆಚ್ಚ ಭರಿಸಬೇಕು' ಎಂದು ಚಂದ್ರಿಕಾ ಪ್ರಸಾದ್ ಅವರಿಗೆ ಉಪ್ರೇತಿ ಸೂಚಿಸಿದ್ದಾರೆ.</p>.<p>'ಸೂಕ್ತ ಸಮಯದಲ್ಲಿ ಆರ್ಟಿಐಗೆ ಉತ್ತರಿಸದಿದ್ದರೆ ಸಾಮಾನ್ಯವಾಗಿ ಗ್ರಾಮಾಧಿಕಾರಿಗೆ ₹ 25,000 ದಂಡವನ್ನು ವಿಧಿಸಲಾಗುತ್ತದೆ. ಆದರೆ ಸಾಂಕೇತಿಕ ಶಿಕ್ಷೆಯಾಗಿ ಬಿಸಿಯೂಟ ಬಡಿಸಲು ಸೂಚಿಸಲಾಗಿದೆ' ಎಂದು ಉಪ್ರೇತಿ ತಿಳಿಸಿದ್ದಾರೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಗ್ರಾಮಾಧಿಕಾರಿಯಾಗಿದ್ದ ಗೋಪಾಲ್ ಸಿಂಗ್ ಎಂಬುವವರಿಗೂ ₹25,000 ದಂಡ ವಿಧಿಸಲಾಗಿದೆ ಎಂದು 'ಡೆಕ್ಕನ್ ಹೆರಾಲ್ಡ್' ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮಾಹಿತಿ ಹಕ್ಕು ಕಾಯಿದೆ ಅಡಿ ಸೂಕ್ತ ಅವಧಿಯಲ್ಲಿ ಉತ್ತರಿಸದ ತಪ್ಪಿಗೆ ಗ್ರಾಮಾಭಿವೃದ್ಧಿ ಅಧಿಕಾರಿಯೊಬ್ಬರಿಗೆ 250 ಮಕ್ಕಳಿಗೆ ಬಿಸಿಯೂಟ ಬಡಿಸುವ ಶಿಕ್ಷೆ ನೀಡಿದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ವಿದ್ಯಾರ್ಥಿಗಳಿಗೆ ಊಟ ಬಡಿಸುತ್ತಿರುವ ವಿಡಿಯೊವನ್ನು ದಾಖಲಿಸುವಂತೆ ತಾಕೀತು ಮಾಡಲಾಗಿದೆ.</p>.<p>ಉತ್ತರ ಪ್ರದೇಶದ ಘಾಜಿಪುರ್ ಜಿಲ್ಲೆಯ ನುನರ ಗ್ರಾಮದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಕೋರಿ ಭೂಪೇಂದ್ರ ಕುಮಾರ್ ಪಾಂಡೆ ಎಂಬುವವರು 6 ವರ್ಷಗಳ ಹಿಂದೆ ಆರ್ಟಿಐ ಅರ್ಜಿ ಹಾಕಿದ್ದರು. ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಗ್ರಾಮಾಭಿವೃದ್ಧಿ ಅಧಿಕಾರಿಯಾಗಿರುವ ಚಂದ್ರಿಕಾ ಪ್ರಸಾದ್ ಅವರು ಸೂಕ್ತ ಸಮಯದಲ್ಲಿ ಉತ್ತರಿಸಲು ವಿಫಲರಾಗಿದ್ದರು.</p>.<p>ಈ ಕುರಿತು ಆರ್ಟಿಐ ಅರ್ಜಿದಾರ ಪಾಂಡೆ ಅವರ ದೂರಿನಡಿ ಉತ್ತರ ಪ್ರದೇಶದ ಮಾಹಿತಿ ಆಯುಕ್ತ ಅಜಯ್ ಕುಮಾರ್ ಉಪ್ರೇತಿ ಅವರು ಗ್ರಾಮಾಭಿವೃದ್ಧಿ ಅಧಿಕಾರಿಗೆ ಬಿಸಿಯೂಟ ಬಡಿಸುವಂತೆ ಆದೇಶಿಸಿದ್ದಾರೆ.</p>.<p>'ಜಿಲ್ಲೆಯ ಪ್ರಾಥಮಿಕ ಶಾಲೆಯ 250 ಮಕ್ಕಳಿಗೆ ಬಿಸಿಯೂಟ ಬಡಿಸಬೇಕು. ದಂಡದ ರೂಪವಾಗಿ ಬಿಸಿಯೂಟಕ್ಕೆ ₹ 25,000 ವೆಚ್ಚ ಭರಿಸಬೇಕು' ಎಂದು ಚಂದ್ರಿಕಾ ಪ್ರಸಾದ್ ಅವರಿಗೆ ಉಪ್ರೇತಿ ಸೂಚಿಸಿದ್ದಾರೆ.</p>.<p>'ಸೂಕ್ತ ಸಮಯದಲ್ಲಿ ಆರ್ಟಿಐಗೆ ಉತ್ತರಿಸದಿದ್ದರೆ ಸಾಮಾನ್ಯವಾಗಿ ಗ್ರಾಮಾಧಿಕಾರಿಗೆ ₹ 25,000 ದಂಡವನ್ನು ವಿಧಿಸಲಾಗುತ್ತದೆ. ಆದರೆ ಸಾಂಕೇತಿಕ ಶಿಕ್ಷೆಯಾಗಿ ಬಿಸಿಯೂಟ ಬಡಿಸಲು ಸೂಚಿಸಲಾಗಿದೆ' ಎಂದು ಉಪ್ರೇತಿ ತಿಳಿಸಿದ್ದಾರೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಗ್ರಾಮಾಧಿಕಾರಿಯಾಗಿದ್ದ ಗೋಪಾಲ್ ಸಿಂಗ್ ಎಂಬುವವರಿಗೂ ₹25,000 ದಂಡ ವಿಧಿಸಲಾಗಿದೆ ಎಂದು 'ಡೆಕ್ಕನ್ ಹೆರಾಲ್ಡ್' ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>