<p><strong>ಸಂಭಲ್</strong>: ತನ್ನ ಯೂಟ್ಯೂಬ್ ವಾಹಿನಿಗೆ ಸಂದರ್ಶನ ನೀಡಲು ನಿರಾಕರಿಸಿದ ಪೊಲೀಸ್ ಅಧಿಕಾರಿಗೆ ಯೂಟ್ಯೂಬರ್ ಒಬ್ಬ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.</p><p>ಬೆದರಿಕೆ ಹಾಕಿರುವ ಮಶಕೂರ್ ರಾಜಾ ದಾದಾ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.</p><p>ನವೆಂಬರ್ 24 ರಂದು ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದ್ದ ಕೋಮು ಗಲಭೆಯ ಬಗ್ಗೆ <strong>ಸಂಭಲ್</strong>ನ ಚಂದೌಸಿ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಸಂಜು ಕುಮಾರ್ ಚೌಧರಿ ಅವರಿಗೆ ಸಂದರ್ಶನ ನೀಡಲು ಆರೋಪಿ ಒತ್ತಾಯಿಸುತ್ತಿದ್ದ.</p><p>ಪೊಲೀಸ್ ಅಧಿಕಾರಿಯು ಸಂದರ್ಶನ ನೀಡಲು ಒಪ್ಪದಿದ್ದಾಗ ಆರೋಪಿ, ‘ನಾನು ಹೇಳಿದರೆ ಡಿಜಿಪಿ, ಸಿಎಂ ಬಂದು ಸಂದರ್ಶನ ಕೊಡುತ್ತಾರೆ. ಒಲ್ಲೆ ಎನ್ನಲು ನೀನಾರು, ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಹಾಕಿದ್ದ.</p><p>ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಂಡಿರುವ ಯೂಟ್ಯೂಬರ್, ಪೊಲೀಸ್ ಅಧಿಕಾರಿಯ ಸಂದರ್ಶನ ಮಾಡಿ ದೇಶದಾದ್ಯಂತ ಪ್ರಚಾರ ಪಡೆಯುತ್ತೇನೆ ಎಂದು ಹೇಳಿಕೊಂಡಿದ್ದ ಎಂದು ಆರೋಪಿಸಲಾಗಿದೆ.</p><p>ಸಂಭಲ್ ಜಿಲ್ಲೆಯ ಚಂದೌಸಿಯಲ್ಲಿನ ಶಾಹಿ ಜಾಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ನವೆಂಬರ್ 24ರಂದು ಸಮೀಕ್ಷೆ ನಡೆಸಲು ಮುಂದಾದಾಗ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್</strong>: ತನ್ನ ಯೂಟ್ಯೂಬ್ ವಾಹಿನಿಗೆ ಸಂದರ್ಶನ ನೀಡಲು ನಿರಾಕರಿಸಿದ ಪೊಲೀಸ್ ಅಧಿಕಾರಿಗೆ ಯೂಟ್ಯೂಬರ್ ಒಬ್ಬ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.</p><p>ಬೆದರಿಕೆ ಹಾಕಿರುವ ಮಶಕೂರ್ ರಾಜಾ ದಾದಾ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.</p><p>ನವೆಂಬರ್ 24 ರಂದು ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದ್ದ ಕೋಮು ಗಲಭೆಯ ಬಗ್ಗೆ <strong>ಸಂಭಲ್</strong>ನ ಚಂದೌಸಿ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಸಂಜು ಕುಮಾರ್ ಚೌಧರಿ ಅವರಿಗೆ ಸಂದರ್ಶನ ನೀಡಲು ಆರೋಪಿ ಒತ್ತಾಯಿಸುತ್ತಿದ್ದ.</p><p>ಪೊಲೀಸ್ ಅಧಿಕಾರಿಯು ಸಂದರ್ಶನ ನೀಡಲು ಒಪ್ಪದಿದ್ದಾಗ ಆರೋಪಿ, ‘ನಾನು ಹೇಳಿದರೆ ಡಿಜಿಪಿ, ಸಿಎಂ ಬಂದು ಸಂದರ್ಶನ ಕೊಡುತ್ತಾರೆ. ಒಲ್ಲೆ ಎನ್ನಲು ನೀನಾರು, ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಹಾಕಿದ್ದ.</p><p>ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಂಡಿರುವ ಯೂಟ್ಯೂಬರ್, ಪೊಲೀಸ್ ಅಧಿಕಾರಿಯ ಸಂದರ್ಶನ ಮಾಡಿ ದೇಶದಾದ್ಯಂತ ಪ್ರಚಾರ ಪಡೆಯುತ್ತೇನೆ ಎಂದು ಹೇಳಿಕೊಂಡಿದ್ದ ಎಂದು ಆರೋಪಿಸಲಾಗಿದೆ.</p><p>ಸಂಭಲ್ ಜಿಲ್ಲೆಯ ಚಂದೌಸಿಯಲ್ಲಿನ ಶಾಹಿ ಜಾಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ನವೆಂಬರ್ 24ರಂದು ಸಮೀಕ್ಷೆ ನಡೆಸಲು ಮುಂದಾದಾಗ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>