<p><strong>ವಾರಾಣಸಿ:</strong> ಉತ್ತರ ಪ್ರದೇಶದ ವಾರಾಣಸಿಯ ಭಗವತಿ ಅನ್ನಪೂರ್ಣೆಯ ಪ್ರಾಣಪ್ರತಿಷ್ಠಾ ಮಹಾ ಕುಂಭಾಭಿಷೇಕವನ್ನು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತಿ ಮಹಾ ಸ್ವಾಮೀಜಿ ಅವರು ಶುಕ್ರವಾರ ನೆರವೇರಿಸಿದರು.</p>.<p>ಈ ದೇಗುಲವು ವಾರಾಣಸಿಯ ಪ್ರಸಿದ್ಧ ವಿಶ್ವನಾಥ ದೇಗುಲದ ಸಮೀಪ ಇದೆ. ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯಿತು. ಪುರಾತನ ನಗರದ ಎಲ್ಲೆಡೆ ಮಂತ್ರಘೋಷಗಳು ಪ್ರತಿಧ್ವನಿಸುತ್ತಿದ್ದವು.</p>.<p>ಸಮಾರಂಭದಲ್ಲಿ ಶೃಂಗೇರಿ ಮಠದ ವತಿಯಿಂದ ಸ್ವರ್ಣ ಶಿಖರ ಗೋಪುರವನ್ನು ಅನ್ನಪೂರ್ಣೇಶ್ವರಿಗೆ ಸಮರ್ಪಿಸಲಾಯಿತು. ವಿಧುಶೇಖರ ಭಾರತಿ ಮಹಾ ಸ್ವಾಮೀಜಿ ಅವರು ಅನ್ನಪೂರ್ಣೇಶ್ವರಿ ಗರ್ಭಗುಡಿಯ ಸ್ವರ್ಣ ಶಿಖರ ಗೋಪುರಕ್ಕೆ ಕುಂಭಾಭಿಷೇಕ ಮಾಡಿದರು.</p>.<p>ಕುಂಭಾಭಿಷೇಕದ ಭಾಗವಾಗಿ ಸಹಸ್ರಚಂಡಿ ಮಹಾಯಜ್ಞ, ಕೋಟಿಕುಂಕುಮಾರ್ಚನೆ, ಮಹಾರುದ್ರ ಯಜ್ಞ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ನಾಲ್ಕು ವೇದಗಳು ಮತ್ತು 18 ಪುರಾಣಗಳು ಮತ್ತು ವಾಲ್ಮೀಕಿ ರಾಮಾಯಣದ ಪಾರಾಯಣ ಸಹ ನಡೆಯಿತು. ಜನವರಿ 31ರಂದು ಆರಂಭಗೊಂಡು ಫೆಬ್ರುವರಿ 9ರವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು 500 ವೇದ ವಿದ್ವಾಂಸರು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ಉತ್ತರ ಪ್ರದೇಶದ ವಾರಾಣಸಿಯ ಭಗವತಿ ಅನ್ನಪೂರ್ಣೆಯ ಪ್ರಾಣಪ್ರತಿಷ್ಠಾ ಮಹಾ ಕುಂಭಾಭಿಷೇಕವನ್ನು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತಿ ಮಹಾ ಸ್ವಾಮೀಜಿ ಅವರು ಶುಕ್ರವಾರ ನೆರವೇರಿಸಿದರು.</p>.<p>ಈ ದೇಗುಲವು ವಾರಾಣಸಿಯ ಪ್ರಸಿದ್ಧ ವಿಶ್ವನಾಥ ದೇಗುಲದ ಸಮೀಪ ಇದೆ. ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯಿತು. ಪುರಾತನ ನಗರದ ಎಲ್ಲೆಡೆ ಮಂತ್ರಘೋಷಗಳು ಪ್ರತಿಧ್ವನಿಸುತ್ತಿದ್ದವು.</p>.<p>ಸಮಾರಂಭದಲ್ಲಿ ಶೃಂಗೇರಿ ಮಠದ ವತಿಯಿಂದ ಸ್ವರ್ಣ ಶಿಖರ ಗೋಪುರವನ್ನು ಅನ್ನಪೂರ್ಣೇಶ್ವರಿಗೆ ಸಮರ್ಪಿಸಲಾಯಿತು. ವಿಧುಶೇಖರ ಭಾರತಿ ಮಹಾ ಸ್ವಾಮೀಜಿ ಅವರು ಅನ್ನಪೂರ್ಣೇಶ್ವರಿ ಗರ್ಭಗುಡಿಯ ಸ್ವರ್ಣ ಶಿಖರ ಗೋಪುರಕ್ಕೆ ಕುಂಭಾಭಿಷೇಕ ಮಾಡಿದರು.</p>.<p>ಕುಂಭಾಭಿಷೇಕದ ಭಾಗವಾಗಿ ಸಹಸ್ರಚಂಡಿ ಮಹಾಯಜ್ಞ, ಕೋಟಿಕುಂಕುಮಾರ್ಚನೆ, ಮಹಾರುದ್ರ ಯಜ್ಞ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ನಾಲ್ಕು ವೇದಗಳು ಮತ್ತು 18 ಪುರಾಣಗಳು ಮತ್ತು ವಾಲ್ಮೀಕಿ ರಾಮಾಯಣದ ಪಾರಾಯಣ ಸಹ ನಡೆಯಿತು. ಜನವರಿ 31ರಂದು ಆರಂಭಗೊಂಡು ಫೆಬ್ರುವರಿ 9ರವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು 500 ವೇದ ವಿದ್ವಾಂಸರು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>